AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ
Kohli-afridi
TV9 Web
| Edited By: |

Updated on: Nov 01, 2021 | 4:09 PM

Share

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್​ ರನ್​ ರೇಟ್ ಆಧಾರದಲ್ಲಿ ಟೀಮ್​ ಇಂಡಿಯಾಗೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್​ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.

ಭಾರತಕ್ಕೆ ಇನ್ನೂ ಸೆಮೀಸ್​ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್​ ರನ್​ ರೇಟ್​ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರಲಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(It will be a miracle to see India qualify: Afridi)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ