AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ
Kohli-afridi
TV9 Web
| Edited By: |

Updated on: Nov 01, 2021 | 4:09 PM

Share

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್​ ರನ್​ ರೇಟ್ ಆಧಾರದಲ್ಲಿ ಟೀಮ್​ ಇಂಡಿಯಾಗೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್​ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.

ಭಾರತಕ್ಕೆ ಇನ್ನೂ ಸೆಮೀಸ್​ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್​ ರನ್​ ರೇಟ್​ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರಲಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(It will be a miracle to see India qualify: Afridi)

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ