AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ
Kohli-afridi
TV9 Web
| Edited By: |

Updated on: Nov 01, 2021 | 4:09 PM

Share

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್​ ರನ್​ ರೇಟ್ ಆಧಾರದಲ್ಲಿ ಟೀಮ್​ ಇಂಡಿಯಾಗೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್​ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.

ಭಾರತಕ್ಕೆ ಇನ್ನೂ ಸೆಮೀಸ್​ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್​ ರನ್​ ರೇಟ್​ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರಲಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(It will be a miracle to see India qualify: Afridi)

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ