AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು.

T20 World Cup 2021: ಭಾರತ ಅರ್ಹತೆ ಪಡೆದ್ರೆ ಅದುವೇ ಪವಾಡ ಎಂದು ಅಣುಕಿಸಿದ ಅಫ್ರಿದಿ
Kohli-afridi
TV9 Web
| Updated By: ಝಾಹಿರ್ ಯೂಸುಫ್|

Updated on: Nov 01, 2021 | 4:09 PM

Share

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ಆಸೆ ಕೂಡ ಬಹುತೇಕ ಕಮರಿದೆ. ಇದಾಗ್ಯೂ ಮುಂದಿನ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು, ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದರೆ ನೆಟ್​ ರನ್​ ರೇಟ್ ಆಧಾರದಲ್ಲಿ ಟೀಮ್​ ಇಂಡಿಯಾಗೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಸಿಗಲಿದೆ. ಅಂದರೆ ಭಾರತ ತಂಡ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ ಅದುವೇ ಪವಾಡವಾಗಲಿದೆ ಎಂದು ಪಾಕಿಸ್ತಾನ್ ಮಾಜಿ ಆಲ್​ರೌಂಡರ್ ಶಹೀದ್ ಅಫ್ರಿದಿ ಅಣುಕಿಸಿದ್ದಾರೆ.

ಭಾರತಕ್ಕೆ ಇನ್ನೂ ಸೆಮೀಸ್​ ಅರ್ಹತೆ ಪಡೆಯುವ ಅವಕಾಶವಿದೆ. ಆದರೆ ಅವರು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದದ ಪಂದ್ಯಗಳನ್ನು ಹೇಗೆ ಆಡಿದ್ದಾರೆ ಎಂದು ನಾವು ನೋಡಿದ್ದೇವೆ. ಹೀಗಾಗಿ ಅವರು ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಅದೊಂದು ಪವಾಡವಾಗಿರಲಿದೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಬೇಕು. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ತಾನ್ ವಿರುದ್ದ ಸೋಲಬೇಕು. ಅಥವಾ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಪರಾಜಯಗೊಳ್ಳಬೇಕು. ಇಲ್ಲಿ ನ್ಯೂಜಿಲೆಂಡ್​ಗೆ ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರಾಳಿಗಳು. ಅಂದರೆ ಇಲ್ಲಿ ಅಫ್ಘಾನ್ ಮಾತ್ರ ಬಲಿಷ್ಠ ತಂಡ. ಹೀಗಾಗಿ ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಮುಂದಿನ ಪಂದ್ಯಗಳಲ್ಲಿ ಭಾರತ ಭರ್ಜರಿ ನೆಟ್​ ರನ್​ ರೇಟ್​ನೊಂದಿಗೆ ಜಯ ಸಾಧಿಸಿದರೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರಲಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(It will be a miracle to see India qualify: Afridi)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ