AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ಗೆ ನಡುಕ ಹುಟ್ಟಿಸಿದ್ದ DK

IPL 2022 RCB vs CSK: 217 ರನ್​ಗಳ ಟಾರ್ಗೆಟ್ ನೀಡಿದ ಸಿಎಸ್​ಕೆ ಗೆಲುವಿನ ವಿಶ್ವಾಸದಲ್ಲೇ ಮೈದಾನಕ್ಕಿಳಿಯಿತು. ಮೂರನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್, 5ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ 6ನೇ ಓವರ್​ನಲ್ಲಿ ಅನೂಜ್ ರಾವತ್ ವಿಕೆಟ್ ಪಡೆಯುವ ಮೂಲಕ ಸಿಎಸ್​ಕೆ ಪವರ್​ಪ್ಲೇನಲ್ಲೇ ಆರ್​ಸಿಬಿಗೆ ಆಘಾತ ನೀಡಿದರು.

IPL 2022: CSK ಗೆ ನಡುಕ ಹುಟ್ಟಿಸಿದ್ದ DK
DK-Jadeja
TV9 Web
| Updated By: ಝಾಹಿರ್ ಯೂಸುಫ್|

Updated on:Apr 13, 2022 | 6:25 PM

Share

ಕ್ರಿಕೆಟ್​ನಲ್ಲಿ ಒಂದು ಮಾತಿದೆ…ಒಬ್ಬ ಆಟಗಾರನ ವಿಕೆಟ್ ಎಷ್ಟು ಮುಖ್ಯ ಎಂಬುದು ಎದುರಾಳಿ ತಂಡದ ಸಂಭ್ರಮ ನೋಡಿ ತಿಳಿಯಬಹುದು ಎಂದು…ಅಂತಹದೊಂದು ಸಂಭ್ರಮಕ್ಕೆ ಐಪಿಎಲ್​ನ 22ನೇ ಪಂದ್ಯ ಸಾಕ್ಷಿಯಾಗಿತ್ತು. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬೌಲಿಂಗ್ ಆಯ್ದುಕೊಂಡರು. ಆರಂಭದಲ್ಲಿ ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲರ್​ಗಳು ಬೌಲಿಂಗ್ ಮಾಡಿದ್ದರು. ಆದರೆ 10 ಓವರ್​ಗಳ ಬಳಿಕ ಎಲ್ಲವೂ ಬದಲಾಯಿತು. ಸಿಎಸ್​ಕೆ ತಂಡದ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ ಹಾಗೂ ಆಲ್​ರೌಂಡರ್ ಶಿವಂ ದುಬೆ ಅಬ್ಬರಿಸಲಾರಂಭಿಸಿದರು. ಅದು ಅಂತಿಂಥ ಅಬ್ಬರವಲ್ಲ. ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಇತ್ತ ನಾಯಕ ಫಾಫ್ ಡುಪ್ಲೆಸಿಸ್ ಬೌಲರ್​ಗಳನ್ನು ಬದಲಿಸಿದರೂ ಫಲಿತಾಂಶ ಮಾತ್ರ ಒಂದೇ ಆಗಿತ್ತು. ಸಿಕ್ಸ್ ಇಲ್ಲಾ ಫೋರ್.

ಪರಿಣಾಮ ಮೂರನೇ ವಿಕೆಟ್​ಗೆ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಜೋಡಿ 165 ರನ್​ಗಳ ಜೊತೆಯಾಟವಾಡಿದರು. ಈ ವೇಳೆ 50 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 88 ರನ್​ ಬಾರಿಸಿದ್ದ ರಾಬಿನ್ ಉತ್ತಪ್ಪ ಔಟಾದರು. ಆದರೆ ದುಬೆಯ ಆರ್ಭಟ ಮಾತ್ರ ಮುಂದುವರೆದಿತ್ತು. ಕೊನೆಯ ಓವರ್​ವರೆಗೂ ಬ್ಯಾಟ್ ಬೀಸಿದ ದುಬೆ 8 ಸಿಕ್ಸ್​ ಹಾಗೂ 5 ಬೌಂಡರಿಯೊಂದಿಗೆ ಕೇವಲ 45 ಎಸೆತಗಳಲ್ಲಿ ಅಜೇಯ 95 ರನ್​ಗಳಿಸಿತ್ತು. ಅಲ್ಲಿಗೆ ಸಿಎಸ್​ಕೆ ತಂಡದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 216 ಕ್ಕೆ ಬಂದು ನಿಂತಿತು.

217 ರನ್​ಗಳ ಟಾರ್ಗೆಟ್ ನೀಡಿದ ಸಿಎಸ್​ಕೆ ಗೆಲುವಿನ ವಿಶ್ವಾಸದಲ್ಲೇ ಮೈದಾನಕ್ಕಿಳಿಯಿತು. ಮೂರನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್, 5ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ 6ನೇ ಓವರ್​ನಲ್ಲಿ ಅನೂಜ್ ರಾವತ್ ವಿಕೆಟ್ ಪಡೆಯುವ ಮೂಲಕ ಸಿಎಸ್​ಕೆ ಪವರ್​ಪ್ಲೇನಲ್ಲೇ ಆರ್​ಸಿಬಿಗೆ ಆಘಾತ ನೀಡಿದರು. ಅಷ್ಟೇ ಅಲ್ಲದೆ ಪವರ್​ಪ್ಲೇನಲ್ಲಿ ನೀಡಿದ್ದು ಕೇವಲ 42 ರನ್​ ಮಾತ್ರ. ಇನ್ನು 11 ಎಸೆತಗಳಲ್ಲಿ 26 ರನ್ ಬಾರಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ಶಹಬಾಜ್ ಅಹ್ಮದ್ ಹಾಗೂ ಸುಯಶ್ ಪ್ರಭುದೇಸಾಯಿ ಅರ್ಧಶತಕದ ಜೊತೆಯಾಟವಾಡಿದರು. ಅದರಲ್ಲೂ ಚೊಚ್ಚಲ ಪಂದ್ಯವಾಡಿದ ಸುಯಶ್ 18 ಎಸೆತಗಳಲ್ಲಿ 34 ರನ್ ಬಾರಿಸುವ ಮೂಲಕ ತಮ್ಮ ಪಾತ್ರ ನಿರ್ವಹಿಸಿದ್ದರು. ಮತ್ತೊಂದೆಡೆ 27 ಎಸೆತಗಳಲ್ಲಿ 41 ರನ್ ಬಾರಿಸಿ ಶಹಬಾಜ್ ಕೂಡ ಅಬ್ಬರಿಸಿದರು.

ಈ ಇಬ್ಬರ ವಿಕೆಟ್ ಬೀಳುತ್ತಿದ್ದಂತೆ ಸಿಎಸ್​ಕೆ ತಂಡವು ಮೇಲುಗೈ ಸಾಧಿಸಿತು. ಇದರ ಬೆನ್ನಲ್ಲೇ ವನಿಂದು ಹಸರಂಗ ಹಾಗೂ ಆಕಾಶ್ ದೀಪ್ ಬಂದ ವೇಗದಲ್ಲೇ ವಿಕೆಟ್ ಕೈಚೆಲ್ಲಿ ಹಿಂತಿರುಗಿದರು. ಈ ವೇಳೆ ಆರ್​ಸಿಬಿ ತಂಡದ ಸ್ಕೋರ್ 8 ವಿಕೆಟ್​ ನಷ್ಟಕ್ಕೆ 146 ರನ್​. ಎಂಟು ವಿಕೆಟ್ ಉರುಳಿಸಿದರೂ ಸಿಎಸ್​ಕೆ ತಂಡ ಗೆಲುವನ್ನು ಖಚಿತಪಡಿಸಿರಲಿಲ್ಲ. ಏಕೆಂದರೆ ಒಂದೆಡೆ ಕ್ರೀಸ್​ನಲ್ಲಿದಿದ್ದು ದಿನೇಶ್ ಕಾರ್ತಿಕ್ ಎಂಬ ಸ್ಪೋಟಕ ದಾಂಡಿಗ. ಯಾವುದೇ ಕ್ಷಣದಲ್ಲೂ ಸಿಡಿಯಬಲ್ಲ ಡಿಕೆ ಬಗ್ಗೆ ಸಿಎಸ್​ಕೆ ಅರಿವಿತ್ತು. ಹೀಗಾಗಿ 8 ವಿಕೆಟ್ ಪಡೆದರೂ ಚೆನ್ನೈ ತಂಡವು ಗೆಲುವನ್ನು ಖಚಿತಪಡಿಸಿಕೊಳ್ಳಲು ಸಿದ್ದರಿರಲಿಲ್ಲ.

ಅತ್ತ ಬೌಲರ್​ಗಳಿಗೂ ಭಯ, ನಿರೀಕ್ಷೆ ನಿಜವಾಯ್ತು. ದಿನೇಶ್ ಕಾರ್ತಿಕ್ ಅಬ್ಬರಿಸಿದರು. ಕೇವಲ 13 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 34 ರನ್ ಬಾರಿಸಿದರು. ಡಿಕೆ ಅಬ್ಬರ ಶುರುವಾಗುತ್ತಿದ್ದಂತೆ ಇತ್ತ ಆರ್​ಸಿಬಿ ಅಭಿಮಾನಿಗಳಿಗೆ ಗೆಲುವಿನ ನಿರೀಕ್ಷೆ ಹೆಚ್ಚಾಯ್ತು. ಅತ್ತ ಸಿಎಸ್​ಕೆ ತಂಡವು ಸೋಲಿನ ಭೀತಿಯನ್ನು ಎದುರಿಸಿತ್ತು. ಆದರೆ ದುರಾದೃಷ್ಟವಶಾತ್ ಬ್ರಾವೊ ಅವರ ಮ್ಯಾಜಿಕ್ ಬಾಲ್​ಗೆ ಭರ್ಜರಿ ಉತ್ತರ ನೀಡಲು ಹೋದ ಡಿಕೆಗೆ ಬೌಂಡರಿ ಲೈನ್​ನಲ್ಲಿ ಕ್ಯಾಚ್ ಆದರು. ಬೌಂಡಿಯಲ್ಲಿ ಫೀಲ್ಡಿಂಗ್​ನಲ್ಲಿದ್ದ ಸಿಎಸ್​ಕೆ ನಾಯಕ ರವೀಂದ್ರ ಜಡೇಜಾ ಅತ್ಯುತ್ತಮ ನಿಯಂತ್ರಣ ಸಾಧಿಸುವ ಮೂಲಕ ಕ್ಯಾಚ್ ಹಿಡಿದರು. ಅಷ್ಟೇ ಯಾಕೆ ಈ ಕ್ಯಾಚ್​ನೊಂದಿಗೆ ಜಡೇಜಾ ಗೆಲುವನ್ನು ಖಚಿತಪಡಿಸಿದರು. ಅಲ್ಲದೆ ಕ್ಯಾಚ್ ಹಿಡಿದ ಬೆನ್ನಲ್ಲೇ ಕೊನೆಗೂ ಗೆದ್ವಿ ಎಂಬಾರ್ಥದಲ್ಲಿ ಬೌಂಡರಿ ಲೈನ್​ನಲ್ಲೇ ಮಕಾಡೆ ಮಲಗಿ ಸಂಭ್ರಮಿಸಿದರು. ಒಬ್ಬ ಬ್ಯಾಟ್ಸ್​​ಮನ್​ ಎದುರಾಳಿಗಳಿಗೆ ಎಷ್ಟು ಭೀತಿ ಹುಟ್ಟಿಸಿದ್ದ ಎಂಬುದು ಆತನ ವಿಕೆಟ್ ಸಿಕ್ಕಾಗ ತಂಡದ ಸಂಭ್ರಮ ನೋಡಿ ತಿಳಿಯಬಹುದು ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ.

ಒಟ್ಟಿನಲ್ಲಿ ಆರ್​ಸಿಬಿ 23 ರನ್​ಗಳಿಂದ ಸೋತಿದೆ. ಅಲ್ಲ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ. ಏಕೆಂದರೆ ಸಿಎಸ್​ಕೆ ವಿರುದ್ದ ಆರ್​ಸಿಬಿ ಇಷ್ಟೊಂದು ಮೊತ್ತವನ್ನು ಭರ್ಜರಿಯಾಗಿ ಚೇಸ್ ಮಾಡಿರುವುದು ಐಪಿಎಲ್​ ಇತಿಹಾಸದಲ್ಲೇ ಇದೇ ಮೊದಲು. ಹೀಗಾಗಿ ಮೇ 4 ರಂದು ನಡೆಯುವ ಆರ್​ಸಿಬಿ-ಸಿಎಸ್​ಕೆ ನಡುವಣ 2ನೇ ಮುಖಾಮುಖಿಯಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Published On - 2:45 pm, Wed, 13 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ