ದುಃಸ್ವಪ್ನವಾದ ಜಡೇಜಾ; ಸಿಎಸ್​​ಕೆ ಮ್ಯಾನೇಜ್​​ಮೆಂಟ್ ಎದುರು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇರಿದ ನಂತರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಿಎಸ್​ಕೆಗೆ ದುಸ್ವಪ್ನವಾದ ಜಡೇಜಾ, ಕೇವಲ 18 ರನ್ ನೀಡಿ ಪ್ರಮುಖ ಎರಡು ವಿಕೆಟ್ ಪಡೆದರು. ಸರ್ಫರಾಜ್ ಖಾನ್ ಮತ್ತು ಶಿವಂ ದೂಬೆ ವಿಕೆಟ್ ಪಡೆದ ನಂತರ 'ಗನ್ ಶಾಟ್' ಶೈಲಿಯಲ್ಲಿ ಸಂಭ್ರಮಿಸಿದರು, ಇದು ಸಿಎಸ್​ಕೆ ಅಭಿಮಾನಿಗಳಿಗೆ ನೋವುಂಟು ಮಾಡಿತು.

ದುಃಸ್ವಪ್ನವಾದ ಜಡೇಜಾ; ಸಿಎಸ್​​ಕೆ ಮ್ಯಾನೇಜ್​​ಮೆಂಟ್ ಎದುರು ಗನ್ ಶಾಟ್ ಸೆಲೆಬ್ರೇಷನ್
ಜಡೇಜಾ
Image Credit source: Jio Hotstar

Updated on: Mar 31, 2026 | 8:22 AM

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು 18 ರನ್​​ಗಳನ್ನಷ್ಟೇ ನೀಡಿದರು.

ಗೌಹಾಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸಿಎಸ್​​ಕೆ ಮುಖಾಮುಖಿ ಆದವು. ಹಿರಿಯ ಆಟಗಾರ ಎಂಎಸ್​ ಧೋನಿ ಇಲ್ಲದೆ ಇರುವುದು ಸಿಎಸ್​ಕೆ ತಂಡಕ್ಕೆ ದೊಡ್ಡ ಹಿನ್ನಡೆ ಆಯಿತು. ಮೊದಲು ಬ್ಯಾಟಿಂಗ್​​ಗೆ ಇಳಿದ ಸಿಎಸ್​​ಕೆ ತಂಡ ಸಾಕಷ್ಟು ಹಿನ್ನಡೆ ಅನುಭವಿಸಿತು. 14 ರನ್​​ಗಳಿಗೆ ಒಂದು ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ನಂತರ 51 ರನ್​​ಗಳಿಗೆ ತನ್ನ ಪ್ರಮುಖ ಐದು ವಿಕೆಟ್​​ಗಳನ್ನು ಸಿಎಸ್​ಕೆ ಕಳೆದುಕೊಂಡಿತು.

ಜಡೇಜಾ ಅವರು ಎಂಟನೇ ಓವರ್​​​ನಲ್ಲಿ ಬೌಲಿಂಗ್​​ಗೆ ಇಳಿದರು. ಹಾಕಿದ ಮೊದಲ ಓವರ್​​​ನ ಎರಡನೇ ಬಾಲ್​​ನಲ್ಲಿ ಸರ್ಫರಾಜ್ ಖಾನ್ ಅವರನ್ನು ಔಟ್ ಮಾಡಿದರು. 12 ಬಾಲ್​​ಗೆ 17 ರನ್ ಬಾರಿಸಿ ಸರ್ಫರಾಜ್ ಪೆವಿಲಿಯನ್ ಸೇರಿದರು. ನಂತರ ಕಣಕ್ಕೆ ಇಳಿದ ಶಿವಂ ದೂಬೆ ಅವರು ಬಿರುಸಿನ ಆಟಕ್ಕೆ ಮುಂದಾದರು. ರವೀಂದ್ರ ಜಡೇಜಾ ಬೌಲಿಂಗ್ ಅಲ್ಲಿ ಸಿಕ್ಸ್ ಕೂಡ ಬಾರಿಸಿದರು.

ನಂತರ ಅದೇ ರೀತಿಯಲ್ಲಿ ದೂಬೆ ಮತ್ತೆ ಸಿಕ್ಸ್ ಹೊಡೆಯಲು ಪ್ರಯತ್ನಿಸಿದರು. ಆದರೆ, ಅದು ಕ್ಯಾಚ್ ಆಗಿ ಬದಲಾಯಿತು. ಈ ಮೂಲಕ ಒಂದೇ ಓವರ್​ ಅಲ್ಲಿ ಎರಡು ವಿಕೆಟ್ ತೆಗೆದು ಜಡೇಜಾ ಮಿಂಚಿದರು. ಈ ವೇಳೆ ಜಡೇಜಾ ಭರ್ಜರಿಯಾಗಿ ಸೆಲೆಬ್ರೇಷನ್ ಕೂಡ ಮಾಡಿದರು. ಗನ್ ಪೋಸ್ ಕೊಟ್ಟು ಸೆಲೆಬ್ರೇಷನ್ ಮಾಡುವ ಮೂಲಕ ಸಿಎಸ್​​ಕೆ ಅಭಿಮಾನಿಗಳಿಗೆ ನೇರವಾಗಿ ನೋವನ್ನುಂಟು ಮಾಡಿದರು.

ಇನ್ನಷ್ಟು ಕ್ರಿಕೆಟ್ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 7:38 am, Tue, 31 March 26

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us