AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಸಂಜು ವಿಕೆಟ್ ಕಿತ್ತ ಭಾರತೀಯ

Jai Mundhra's Dream T20 Debut: ಐರ್ಲೆಂಡ್ ವಿರುದ್ಧದ ಮೊದಲ T20 ಪಂದ್ಯದಲ್ಲಿ ಭಾರತ ಮೂಲದ ಜೈ ಮುಂಧ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯದ ಮೊದಲ ಎಸೆತದಲ್ಲೇ ಭಾರತದ ಅನುಭವಿ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದರು.

IND vs IRE: ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಸಂಜು ವಿಕೆಟ್ ಕಿತ್ತ ಭಾರತೀಯ
Jai Moondra
ಪೃಥ್ವಿಶಂಕರ
|

Updated on: Jun 26, 2026 | 9:23 PM

Share

ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಐರ್ಲೆಂಡ್ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ನಿಯಮಿತ ಅಂತರದಲ್ಲಿ ವಿಕಟ್ ಕಳೆದುಕೊಂಡರೂ, ಬಂದ ಬಂದವರೆಲ್ಲ ಹೊಡಿಬಡಿ ಆಟವನ್ನು ಪ್ರದರ್ಶಿಸಿದರು. ಇದರ ಫಲವಾಗಿ ಭಾರತದ ಬಲಿಷ್ಠ ಬೌಲಿಂಗ್​ನೆಂದರು ಐರ್ಲೆಂಡ್ 20 ಓವರ್​ಗಳಲ್ಲಿ 183 ರನ್ ಕಲೆಹಾಕಿತು. ಭಾರತದ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ನೋಡಿದವರು ಇದು ಸುಲಭ ಗುರಿಯಾಗುತ್ತದೆ ಎಂದೇ ಭಾವಿಸಿದ್ದರು. ಆದರೆ ಇದಕ್ಕೆ ಐರ್ಲೆಂಡ್ ಅವಕಾಶ ಮಾಡಿಕೊಡಲಿಲ್ಲ. ಐರ್ಲೆಂಡ್ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಭಾರತದ ಮೂಲದ ಜೈ ಮುಂಧ್ರಾ ತಾವು ಬೌಲ್ ಮಾಡಿದ ಮೊದಲ ಓವರ್ ಮೊದಲ ಎಸೆತದಲ್ಲೇ ಭಾರತಕ್ಕೆ ಶಾಕ್ ನೀಡಿದರು.

ರಾಜಸ್ಥಾನ ಮೂಲದ ಬೌಲಿಂಗ್‌ ಆಲ್‌ರೌಂಡರ್ ಜೈ ಮುಂಧ್ರಾ ತಮ್ಮ ಮೊದಲ ಎಸೆತದಲ್ಲೇ ಇತಿಹಾಸ ನಿರ್ಮಿಸಿ ಭಾರತದ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಬೌಲ್ಡ್ ಮಾಡಿದರು. ಇನ್ನಿಂಗ್ಸ್‌ನ ಎರಡನೇ ಓವರ್ ಮತ್ತು ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಮೊದಲ ಓವರ್ ಬೌಲಿಂಗ್ ಮಾಡಲು ಬಂದ ಜೈ ಮುಂಧ್ರಾ, ಸಂಜು ಸ್ಯಾಮ್ಸನ್ ಅವರ ವಿಕೆಟ್ ಪಡೆದು ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಮ್ಮ ವಿಕೆಟ್​ಗಳ ಖಾತೆಯನ್ನು ತೆರೆದರು.

ಇದರೊಂದಿಗೆ, ಜೈ ಮುಂಧ್ರಾ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಎರಡನೇ ಐರಿಶ್ ಬೌಲರ್ ಎನಿಸಿಕೊಂಡರು. ಇದಕ್ಕೂ ಮೊದಲು, ಮ್ಯಾಥ್ಯೂ ಹಂಫ್ರೀಸ್ ಈ ಸಾಧನೆ ಮಾಡಿದ್ದರು. ಪಂಜಾಬ್ ಮೂಲದ ಸಿಮಿ ಸಿಂಗ್ ನಂತರ ಐರ್ಲೆಂಡ್ ಪರ ಆಡಿದ ಎರಡನೇ ಭಾರತೀಯ ಮೂಲದ ಕ್ರಿಕೆಟಿಗ ಜೈ ಮುಂಧ್ರಾ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.

ಜನವರಿ 10, 1997 ರಂದು ರಾಜಸ್ಥಾನದ ಟೋಂಕ್‌ನಲ್ಲಿ ಜನಿಸಿದ ಜೇ ಮುಂಧ್ರಾ ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಒಲವು ಹೊಂದಿದ್ದರು. ಹೀಗಾಗಿ ಅವರು ರಾಜಸ್ಥಾನ ಪರ 14 ವರ್ಷದೊಳಗಿನವರ ಕ್ರಿಕೆಟ್ ಕೂಡ ಆಡಿದ್ದು, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಆಡಿದ್ದರು. ನಂತರ ತಮ್ಮ ಎಂ.ಟೆಕ್ ಅನ್ನು ಮುಂದುವರಿಸಲು ವಿದ್ಯಾರ್ಥಿ ವೀಸಾದಲ್ಲಿ ಐರ್ಲೆಂಡ್‌ಗೆ ತೆರಳಿದ ಜೇ ಮುಂಧ್ರಾ ಅಲ್ಲಿ ಕ್ರಿಕೆಟ್ ಆಡುವುದನ್ನು ಮುಂದುವರೆಸಿದರು. ಡಬ್ಲಿನ್‌ನಲ್ಲಿರುವ ಪ್ರಸಿದ್ಧ ಲೀನ್‌ಸ್ಟರ್ ಕ್ರಿಕೆಟ್ ಕ್ಲಬ್‌ ಪರ ಆಡಲು ಪ್ರಾರಂಭಿಸಿದ ಜೇ ಮುಂಧ್ರಾ 2023 ರಲ್ಲಿ ಐರಿಶ್ ಸೀನಿಯರ್ ಕಪ್ ವಿಜೇತ ತಂಡದ ಭಾಗವಾಗಿದ್ದರು.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್