40 ವರ್ಷಗಳ ನಂತರ ಶ್ರೀನಗರದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯ

Irani Cup Jammu Kashmir: ಭಾರತದ ದೇಶೀಯ ಕ್ರಿಕೆಟ್ ಸೀಸನ್ ದುಲೀಪ್ ಟ್ರೋಫಿಯೊಂದಿಗೆ ಆರಂಭವಾಗಲಿದೆ. ಪ್ರಮುಖವಾಗಿ, ಇರಾನಿ ಕಪ್ ಸುಮಾರು ನಾಲ್ಕು ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿದೆ. ರಣಜಿ ಚಾಂಪಿಯನ್ J&K ತಂಡ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಶೇರ್-ಎ-ಕಾಶ್ಮೀರ್ ಕ್ರೀಡಾಂಗಣದಲ್ಲಿ ಆಡಲಿದೆ. ಇದು J&K ಕ್ರಿಕೆಟ್‌ಗೆ ಐತಿಹಾಸಿಕ ಕ್ಷಣವಾಗಿದ್ದು, ಶ್ರೀನಗರ ಮತ್ತೆ ಪ್ರಮುಖ ಕ್ರಿಕೆಟ್ ತಾಣವಾಗಿ ಹೊರಹೊಮ್ಮಲಿದೆ.

40 ವರ್ಷಗಳ ನಂತರ ಶ್ರೀನಗರದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯ
Jammu Kashmir

Updated on: Aug 12, 2026 | 7:49 PM

ದುಲೀಪ್ ಟ್ರೋಫಿ (Duleep Trophy) ಆರಂಭದೊಂದಿಗೆ ಭಾರತದಲ್ಲಿ ದೇಶೀ ಕ್ರಿಕೆಟ್ ಸೀಸನ್ ಕೂಡ ಆರಂಭವಾಗಲಿದೆ. ದುಲೀಪ್ ಟ್ರೋಫಿ ಇದೇ ತಿಂಗಳು ಅಂದರೆ ಆಗಸ್ಟ್ 23 ರಿಂದ ಆರಂಭವಾಗಿ​ ಸೆಫ್ಟೆಂಬರ್ 10ರವರೆಗೆ ನಡೆಯಲಿದೆ. ಇದಾದ ಬಳಿಕ ಹಾಲಿ ರಣಜಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ (Jammu Kashmir) ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳ ನಡುವೆ ಇರಾನಿ ಕಪ್ (Irani Cup) ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಟೂರ್ನಿಯ ವಿಶೇಷತೆ ಏನೆಂದರೆ, ಸುಮಾರು ನಾಲ್ಕು ದಶಕಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯವೊಂದು ನಡೆಯಲಿದೆ. ಶ್ರೀನಗರದ ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಅಕ್ಟೋಬರ್ 1 ರಿಂದ 5 ರವರೆಗೆ ಇರಾನಿ ಕಪ್ ನಡೆಯಲಿದೆ.

ಇರಾನಿ ಕಪ್ ಪಂದ್ಯ

1980 ರ ದಶಕದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಅತಿದೊಡ್ಡ ಕ್ರಿಕೆಟ್ ಪಂದ್ಯ ಇದಾಗಲಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕೋಚ್ ಅಜಯ್ ಶರ್ಮಾ ಗೆ ತಿಳಿಸಿದ್ದಾರೆ, ‘ಶ್ರೀನಗರದ ಶೇರ್-ಎ-ಕಾಶ್ಮೀರ ಕ್ರೀಡಾಂಗಣವು ಅಕ್ಟೋಬರ್ 1 ರಿಂದ 5 ರವರೆಗೆ ರಣಜಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ ಮತ್ತು ರೆಸ್ಟ್ ಆಫ್ ಇಂಡಿಯಾ ನಡುವಿನ ಇರಾನಿ ಕಪ್ ಪಂದ್ಯವನ್ನು ಆಯೋಜಿಸಲಿದೆ.

ಜಮ್ಮು ಮತ್ತು ಕಾಶ್ಮೀರ 2025-26ರ ರಣಜಿ ಟ್ರೋಫಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತ್ತು. ತಂಡವು ಫೈನಲ್‌ನಲ್ಲಿ ಕರ್ನಾಟಕವನ್ನು ಸೋಲಿಸಿ ತನ್ನ ಮೊದಲ ರಣಜಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದೀಗ ಇರಾನಿ ಕಪ್‌ನಲ್ಲಿ ದೇಶದ ಅಗ್ರ ಆಟಗಾರರನ್ನು ಒಳಗೊಂಡ ತಂಡವಾದ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಜಮ್ಮು ಕಾಶ್ಮೀರ ಪಂದ್ಯವನ್ನಾಡಲಿದೆ.

1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯ

ಇನ್ನು ಇರಾನಿ ಕಪ್​ಗೆ ಆತಿಥ್ಯವಹಿಸುತ್ತಿರುವ ಶೇರ್-ಎ-ಕಾಶ್ಮೀರ್ ಕ್ರೀಡಾಂಗಣ ತನ್ನದೇಯಾದ ಇತಿಹಾಸವನ್ನು ಹೊಂದಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ 1983 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮತ್ತು 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳನ್ನು ಆಡಿತ್ತು. ಆದರೆ ಇದಾದ ಬಳಿಕ ಭದ್ರತಾ ಕಾಳಜಿ ಮತ್ತು ಇತರ ಸಂದರ್ಭಗಳಿಂದಾಗಿ, ಪ್ರಮುಖ ಕ್ರಿಕೆಟ್ ಪಂದ್ಯಗಳನ್ನು ಈ ಮೈದಾನದಲ್ಲಿ ನಡೆಸಲಾಗಲಿಲ್ಲ.

Duleep Trophy 2025: ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

ಕಳೆದ ಕೆಲವು ವರ್ಷಗಳಿಂದ ಕ್ರೀಡಾಂಗಣವನ್ನು ನವೀಕರಿಸಲಾಗಿದ್ದು, ದೇಶೀಯ ಕ್ರಿಕೆಟ್ ಮರಳಿದೆ. ಇರಾನಿ ಕಪ್ ಅನ್ನು ಆಯೋಜಿಸುವುದು ಈಗ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ಗೆ ಐತಿಹಾಸಿಕ ಕ್ಷಣವಾಗಿದೆ. ಪಂದ್ಯವು ವೇಳಾಪಟ್ಟಿಯ ಪ್ರಕಾರ ನಡೆದರೆ, ಶ್ರೀನಗರ ಮತ್ತೊಮ್ಮೆ ಭಾರತೀಯ ಕ್ರಿಕೆಟ್ ಕ್ಯಾಲೆಂಡರ್‌ನ ಅತ್ಯಂತ ಪ್ರತಿಷ್ಠಿತ ದೇಶೀಯ ಈವೆಂಟ್‌ಗಳಲ್ಲಿ ಸೇರ್ಪಡೆಯಾಗಲಿದೆ ಮತ್ತು ಸ್ಥಳೀಯ ಕ್ರಿಕೆಟ್ ಅಭಿಮಾನಿಗಳಿಗೆ ದೀರ್ಘ ಕಾಯುವಿಕೆಯ ನಂತರ ದೊಡ್ಡ ಪಂದ್ಯವನ್ನು ವೀಕ್ಷಿಸುವ ಅವಕಾಶ ಸಿಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Wed, 12 August 26

Loading...
Unable to load recommendations.
Follow Us