AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್

West Indies vs Sri Lanka: ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಮುಕ್ತಾಯಗೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ ತಂಡ ಜಯ ಸಾಧಿಸಿತ್ತು. ಇದೀಗ ಮೂರನೇ ಮ್ಯಾಚ್​ನಲ್ಲಿ ಜಯ ಸಾಧಿಸಿ ವೆಸ್ಟ್ ಇಂಡೀಸ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ.

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್
Jason HolderImage Credit source: Espn
ಝಾಹಿರ್ ಯೂಸುಫ್
|

Updated on:Jun 16, 2026 | 7:20 AM

Share

ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 53 ರನ್​ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಕಣಕ್ಕಿಳಿದ ಶೆರ್ಫೇನ್ ರದರ್​ಫೋರ್ಡ್​ ಹಾಗೂ ರೋವ್​ಮನ್ ಪೊವೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ನಡುವೆ 33 ರನ್​ ಬಾರಿಸಿ ಪೊವೆಲ್ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಕೊನೆಯ 12 ಎಸೆತಗಳಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ 29 ರನ್​ಗಳ ಅವಶ್ಯಕತೆಯಿತ್ತು.

ಈ ವೇಳೆ ಕ್ರೀಸ್​ಗೆ ಆಗಮಿಸಿದ ಜೇಸನ್ ಹೋಲ್ಡರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ದುಷ್ಮಂತ ಚಮೀರಾ ಎಸೆದ 19ನೇ ಓವರ್​ಗಳಲ್ಲಿ 3 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಹೋಲ್ಡರ್ 20 ರನ್​ ಚಚ್ಚಿದರು. ಈ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

ಅದರಂತೆ ಅಂತಿಮ ಓವರ್​ನಲ್ಲಿ 6 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು 19.4 ಓವರ್​ಗಳಲ್ಲಿ 170 ರನ್​ ಬಾರಿಸುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

420ರ ಸ್ಟ್ರೈಕ್​ ರೇಟ್​:

ಈ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಎದುರಿಸಿದ್ದು ಕೇವಲ 5 ಎಸೆತಗಳನ್ನು ಮಾತ್ರ. ಈ ಐದು ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್​ಗಳೊಂದಿಗೆ 21 ರನ್ ಬಾರಿಸಿದ್ದರು. ಅಂದರೆ ಬರೋಬ್ಬರಿ 420 ಸ್ಟ್ರೈಕ್ ರೇಟ್​​ನಲ್ಲಿ ಬ್ಯಾಟ್ ಬೀಸಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲುವು ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: ತಾಂತ್ರಿಕ ದೌರ್ಬಲ್ಯ ಬಹಿರಂಗ? ಮತ್ತೆ ವಿಫಲನಾದ ವೈಭವ್ ಸೂರ್ಯವಂಶಿ..!

ಶ್ರೀಲಂಕಾ ಕಾಯುವಿಕೆ ಮುಂದುವರಿಕೆ:

ಈ ಸೋಲಿನೊಂದಿಗೆ ಕೆರಿಬಿಯನ್ ದ್ವೀಪದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಗೆಲ್ಲುವ ಶ್ರೀಲಂಕಾ ತಂಡದ ಅತೀ ದೊಡ್ಡ ಕನಸು ಮುಂದುವರೆದಿದೆ. ಅಂದರೆ ವೆಸ್ಟ್ ಇಂಡೀಸ್ ನೆಲದಲ್ಲಿ ವಿಂಡೀಸ್ ಪಡೆಯ ವಿರುದ್ಧ ಶ್ರೀಲಂಕಾ ತಂಡ ಈವರೆಗೆ ಒಂದೇ ಒಂದು ಟಿ20 ಸರಣಿ ಗೆದ್ದಿಲ್ಲ. ಈ ಬಾರಿ ಗೆಲ್ಲುವ ಉತ್ತಮ ಅವಕಾಶವಿತ್ತು. ಆದರೆ 19ನೇ ಓವರ್​ನಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿ ಜೇಸನ್ ಹೋಲ್ಡರ್ ಶ್ರೀಲಂಕಾ ತಂಡದ ಕನಸನ್ನು ಭಗ್ನಗೊಳಿಸಿದ್ದಾರೆ.

Published On - 12:52 pm, Mon, 15 June 26

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ