AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಇಡೀ ಪಂದ್ಯದ ಚಿತ್ರಣ ಬದಲಿಸಿದ ಜಸ್​ಪ್ರೀತ್ ಬುಮ್ರಾ

T20 World Cup 2024 Final: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್​ಗಳಿಸಿ 7 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ.

Jasprit Bumrah: ಇಡೀ ಪಂದ್ಯದ ಚಿತ್ರಣ ಬದಲಿಸಿದ ಜಸ್​ಪ್ರೀತ್ ಬುಮ್ರಾ
Jasprit Bumrah
ಝಾಹಿರ್ ಯೂಸುಫ್
|

Updated on: Jun 30, 2024 | 9:09 AM

Share

T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿದಿದೆ. ಈ ಪಂದ್ಯದ ಗೆಲುವಿನ ರೂವಾರಿಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. 76 ರನ್​ಗಳ ಕೊಡುಗೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾ 176 ರನ್​ ಪೇರಿಸಲು ನೆರವಾದರೆ, ಈ ಗುರಿಯನ್ನು ಬೆನ್ನತ್ತದಂತೆ ತಡೆಯುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾದರು. ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ಬುಮ್ರಾ ಎಸೆದ 2 ಓವರ್​ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತು.

ಏಕೆಂದರೆ 15 ಓವರ್​ಗಳಲ್ಲಿ ಸೌತ್ ಆಫ್ರಿಕಾ ತಂಡವು 147 ರನ್​ ಬಾರಿಸಿ ಗೆಲುವಿನತ್ತ ಮುಖ ಮಾಡಿತ್ತು. ಅಲ್ಲದೆ ಕೊನೆಯ 30 ಎಸೆತಗಳಲ್ಲಿ ಬೇಕಿದದ್ದು ಕೇವಲ 30 ರನ್​ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಬುಮ್ರಾ ಸೌತ್ ಆಫ್ರಿಕಾ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

16ನೇ ಓವರ್​ನಲ್ಲಿ ಜಸ್​ಪ್ರೀತ್ ಬುಮ್ರಾ ನೀಡಿದ್ದು ಕೇವಲ 4 ರನ್​ಗಳು ಮಾತ್ರ. ಇದರಿಂದ ಒತ್ತಡಕ್ಕೆ ಸಿಲುಕಿದ ಹೆನ್ರಿಕ್ ಕ್ಲಾಸೆನ್ 17ನೇ ಓವರ್​ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಅಲ್ಲದೆ ಈ ಓವರ್​ನಲ್ಲಿ ಪಾಂಡ್ಯ ನೀಡಿದ್ದು ಕೇವಲ 4 ರನ್​ಗಳು ಮಾತ್ರ.

ಇದಾದ ಬಳಿಕ 18ನೇ ಓವರ್​ನಲ್ಲಿ ಬಿಗಿ ದಾಳಿ ಸಂಘಟಿಸಿದ ಜಸ್​ಪ್ರೀತ್ ಬುಮ್ರಾ ಮಾರ್ಕೊ ಯಾನ್ಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಓವರ್​ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್​ಗಳು ಮಾತ್ರ.

ಅಂದರೆ ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ಕೊನೆಯ ಎರಡು ಓವರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೇವಲ 6 ರನ್​ಗಳನ್ನು ಮಾತ್ರ ನೀಡಿದ್ದರು. ಪರಿಣಾಮ ಸೌತ್ ಆಫ್ರಿಕಾ ತಂಡದ ಗುರಿ ಅಂತಿಮ 2 ಓವರ್​ಗಳಲ್ಲಿ 20 ರನ್​ಗಳಿಗೆ ಬಂದು ನಿಂತಿತು.

ಈ ಹಂತದಲ್ಲಿ 19ನೇ ಓವರ್​ ಎಸೆದ ಅರ್ಷದೀಪ್ ಸಿಂಗ್ 4 ರನ್ ಮಾತ್ರ ನೀಡಿದರು. ಅದರಂತೆ ಕೊನೆಯ ಓವರ್​ನಲ್ಲಿ 16 ರನ್ ಗುರಿ ಪಡೆದ ಸೌತ್ ಆಫ್ರಿಕಾ ತಂಡಕ್ಕೆ ಡೇವಿಡ್ ಮಿಲ್ಲರ್ ಗೆಲುವಿನ ಭರವಸೆ ಮೂಡಿಸಿದ್ದರು.

ಆದರೆ ಹಾರ್ದಿಕ್ ಪಾಂಡ್ಯ ಎಸೆದ 20ನೇ ಓವರ್​ನ ಮೊದಲ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಡೇವಿಡ್ ಮಿಲ್ಲರ್ ಇನಿಂಗ್ಸ್ ಅಂತ್ಯಗೊಂಡಿತು. ಅಲ್ಲದೆ ಕೊನೆಯ ಓವರ್​ನಲ್ಲಿ ಕೇವಲ 8 ರನ್ ನೀಡಿ ಪಾಂಡ್ಯ ಭಾರತ ತಂಡಕ್ಕೆ 7 ರನ್​ಗಳ ರೋಚಕ ಜಯ ತಂದು ಕೊಟ್ಟರು.

ಇದನ್ನೂ ಓದಿ: Virat Kohli – Rohit Sharma: T20I ಕ್ರಿಕೆಟ್​ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

ಇಲ್ಲಿ ಅಂತಿಮ ಓವರ್​ಗಳಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಸಾಂಘಿಕ ಪ್ರದರ್ಶನ ನೀಡಿದ್ದು ಗೆಲುವಿಗೆ ಪ್ರಮುಖ ಕಾರಣವಾಯಿತು. ಅದರಲ್ಲೂ 4 ಓವರ್​ಗಳಲ್ಲಿ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸಿದ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ