AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..!

T20 World Cup 2026: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ.

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..!
Jasprit Bumrah
ಝಾಹಿರ್ ಯೂಸುಫ್
|

Updated on: Mar 02, 2026 | 10:52 AM

Share

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಅವರನ್ನು ಹಾಡಿ ಹೊಗಳಲಾಗುತ್ತಿದೆ. ಇದಾಗ್ಯೂ ಅಂತಿಮ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬೌಂಡರಿಗಳನ್ನು ಬಾರಿಸಿ ಗೆಲುವಿಗೆ ತನ್ನದೇಯಾದ ಕೊಡುಗೆ ನೀಡಿದ ಶಿವಂ ದುಬೆ ಅವರನ್ನು ಯಾರು ಸಹ ಪ್ರಶಂಸಿಸುತ್ತಿಲ್ಲ ಎಂದು ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಮ್ರಾ, ಶಿವಂ ದುಬೆ ಬಾರಿಸಿದ ಆ ಎರಡು ಬೌಂಡರಿಗಳು ಕ್ರಿಕೆಟ್‌ನ ಅಂಕಿ-ಅಂಶಗಳ ಪುಸ್ತಕದಲ್ಲಿ ಅಥವಾ ದಾಖಲೆಗಳಲ್ಲಿ ಅಷ್ಟಾಗಿ ಎದ್ದು ಕಾಣದಿರಬಹುದು. ಆದರೆ ನಿಜವಾದ ಕ್ರಿಕೆಟ್ ಜ್ಞಾನ ಇರುವವರಿಗೆ ಗೊತ್ತು, ಆ ಎರಡು ಬೌಂಡರಿಗಳು ಅಂತಿಮ ಓವರ್‌ಗೂ ಮುನ್ನ ನಮ್ಮ ಮೇಲಿದ್ದ ಒತ್ತಡವನ್ನು ಸಂಪೂರ್ಣವಾಗಿ ಕಡಿಮೆ ಮಾಡಿದವು.

19ನೇ ಓವರ್​ನಲ್ಲಿ ಶಿವಂ ದುಬೆ ಬಾರಿಸಿದ 2 ಫೋರ್​ ಫೋರ್​ಗಳಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವಿನ ರನ್ ರೇಟ್ ಕಡಿಮೆಯಾಯಿತು. ಇದರಿಂದ ಅಂತಿಮ ಓವರ್​ನಲ್ಲಿ ಭಾರತದ ಬ್ಯಾಟರ್‌ಗಳಿಗೆ ನಿರಾಳವಾಗಿ ಆಡಲು ಸಹಾಯ ಮಾಡಿತು. ಇದಾಗ್ಯೂ ಯಾರು ಸಹ ಶಿವಂ ದುಬೆ ಅವರ ಈ ಕೊಡುಗೆಯನ್ನು ಸ್ಮರಿಸುತ್ತಿಲ್ಲ ಎಂದು ಜಸ್​ಪ್ರೀತ್ ಬುಮ್ರಾ ಬೇಸರ ಹೊರಹಾಕಿದ್ದಾರೆ.

ಇದೀಗ ಜಸ್​ಪ್ರೀತ್ ಬುಮ್ರಾ ಅವರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಒತ್ತಡದ ಸನ್ನಿವೇಶದಲ್ಲಿ ಆಗಷ್ಟೇ ಕ್ರೀಸ್​ಗೆ ಆಗಮಿಸಿ 2 ಫೋರ್​ಗಳನ್ನು ಬಾರಿಸಿದ ದುಬೆ ಅವರ ಕೊಡುಗೆಯನ್ನು ಬುಮ್ರಾ ಎತ್ತಿ ತೋರಿಸಿದ್ದಾರೆ. ಈ ಮೂಲಕ  ಸಣ್ಣದಾದರೂ ಪರಿಣಾಮಕಾರಿ ಆಟವನ್ನು ಗುರುತಿಸಿ, ಅಂಕಿ-ಅಂಶಗಳಿಗಿಂತ ತಂಡದ ಗೆಲುವಿಗೆ ಬೇಕಾದ ‘ಸಮಯೋಚಿತ ಆಟ’ ಮುಖ್ಯ ಎಂಬುದನ್ನು ಬುಮ್ರಾ ಸಾರಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ..!

ಈ ಮೂಲಕ ಜಸ್​ಪ್ರೀತ್ ಬುಮ್ರಾ ಕ್ರಿಕೆಟ್ ಕೇವಲ ರನ್ ಮತ್ತು ವಿಕೆಟ್‌ಗಳ ಆಟವಲ್ಲ, ಅದು ಸಮಯೋಚಿತವಾಗಿ ಒತ್ತಡವನ್ನು ನಿಭಾಯಿಸುವ ಕಲೆ ಎಂಬುದನ್ನು ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ