AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಶುಭಸುದ್ದಿ: ಕಮ್​ಬ್ಯಾಕ್ ಮಾಡಲಿದ್ದಾರೆ ಇಬ್ಬರು ಸ್ಟಾರ್ ಪ್ಲೇಯರ್ಸ್

Harshal Patel: ಟೀಮ್ ಇಂಡಿಯಾಕ್ಕೆ ಇದೀಗ ಶುಭಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ಸಮಯದಿಂದ ಇಂಜುರಿಯಿಂದಾಗ ಭಾರತ ತಂಡದಿಂದ ಹೊರಗುಳಿದಿದ್ದ ಸ್ಟಾರ್ ಬೌಲರ್​ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಇದೀಗ ತಂಡಕ್ಕೆ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

Jasprit Bumrah: ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಶುಭಸುದ್ದಿ: ಕಮ್​ಬ್ಯಾಕ್ ಮಾಡಲಿದ್ದಾರೆ ಇಬ್ಬರು ಸ್ಟಾರ್ ಪ್ಲೇಯರ್ಸ್
Harshal Patel and Jasprit Bumrah
TV9 Web
| Edited By: |

Updated on:Sep 11, 2022 | 10:44 AM

Share

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಮಹಾಟೂರ್ನಿಗೆ ದಿನಗಣನೆ ಶುರುವಾಗಿದೆ. ಮುಂದಿನ ತಿಂಗಳು ಅಕ್ಟೋಬರ್ 16ಕ್ಕೆ ಈ ಚುಟುಕು ವಿಶ್ವಕಪ್​ಗೆ ಚಾಲನೆ ಸಿಗಲಿದ್ದು, ಎಲ್ಲ ತಂಡಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಇತ್ತ ಭಾರತ ತಂಡ ಕೂಡ ಏಷ್ಯಾಕಪ್​ನಿಂದ ಹೊರಬಿದ್ದ ಬಳಿಕ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಇದರ ನಡುವೆ ಟೀಮ್ ಇಂಡಿಯಾಕ್ಕೆ ಇದೀಗ ಶುಭಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ಸಮಯದಿಂದ ಇಂಜುರಿಯಿಂದಾಗ ಭಾರತ ತಂಡದಿಂದ ಹೊರಗುಳಿದಿದ್ದ ಸ್ಟಾರ್ ಬೌಲರ್​ ಜಸ್​ಪ್ರೀತ್ ಬುಮ್ರಾ (Jasprit Bumrah) ಹಾಗೂ ಹರ್ಷಲ್ ಪಟೇಲ್ (Harshal Patel) ಇದೀಗ ತಂಡಕ್ಕೆ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದ್ದು, ಹರ್ಷಲ್ ಹಾಗೂ ಬುಮ್ರಾ ಟಿ20 ವಿಶ್ವಕಪ್​ಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಿದೆ.

ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನಿಂದಾಗಿ ಏಷ್ಯಾಕಪ್ ಸೇರಿದಂತೆ ಹಿಂದಿನ ಸರಣಿಗಳಿಗೆ ಆಯ್ಕೆಯಾಗಿರಲಿಲ್ಲ. ಇತ್ತ ಹರ್ಷಲ್ ಪಟೇಲ್ ಕೂಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಇವರಿಬ್ಬರು ಟಿ20 ವಿಶ್ವಕಪ್ ವೇಳೆಗೆ ಗುಣಮುಖರಾಗುವುದು ಅನುಮಾನ ಎನ್ನಲಾಗಿತ್ತು. ಇದರ ನಡುವೆ ಬೆಂಗಳೂರಿನ ಎನ್​ಸಿಎ ಯಲ್ಲಿ ಫಿಟ್​ನೆಸ್ ಟೆಸ್ಟ್ ನಡೆಸಬೇಕೆಂದು ಬಿಸಿಸಿಐ ಇವರಿಗೆ ತಿಳಿಸಿದೆ. ಇದೀಗ ಗಾಯದಿಂದ ಗುಣಮುಖರಾಗಿ ಫಿಟ್​ನೆಸ್ ಟೆಸ್ಟ್​ನಲ್ಲಿ ಇವರಿಬ್ಬರೂ ಉತ್ತೀರ್ಣರಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಬುಮ್ರಾಹರ್ಷಲ್ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯಲಿದ್ದಾರಂತೆ.

ಟಿ20 ವಿಶ್ವಕಪ್​ಗೂ ಮುನ್ನ ಭಾರತ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಸರಣಿ ಆಡಲಿದೆ. ಮೊದಲಿಗೆ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಯೋಜಿಸಿದ್ದರೆ, ನಂತರ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿ ನಡೆಯಲಿದೆ. ಹರ್ಷಲ್ ಹಾಗೂ ಬುಮ್ರಾ ಈ ಸರಣಿಯ ಮೂಲಕವೇ ತಂಡಕ್ಕೆ ಕಮ್​ಬ್ಯಾಕ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ
Image
Virat Kohli vs Sachin Tendulkar: ಸಚಿನ್ vs ಕೊಹ್ಲಿ: ಯಾರು ಬೆಸ್ಟ್? ಇಲ್ಲಿದೆ ಉತ್ತರ
Image
INDL vs SAL: ಸ್ಟುವರ್ಟ್ ಬಿನ್ನಿ, ಯೂಸುಫ್ ಪಠಾಣ್ ಸ್ಫೋಟಕ ಆಟ: ಇಂಡಿಯಾ ಲೆಜೆಂಡ್ಸ್​ಗೆ 61 ರನ್​ಗಳ ಜಯ
Image
Asia Cup Final: ಇಂದು ಏಷ್ಯಾಕಪ್ 2022 ಫೈನಲ್: ಪ್ರಶಸ್ತಿಗಾಗಿ ಶ್ರೀಲಂಕಾ-ಪಾಕಿಸ್ತಾನ ಸೆಣೆಸಾಟ
Image
ENG vs SA: 36 ರನ್​ಗಳಿಗೆ 6 ವಿಕೆಟ್ ಪತನ; ಇಂಗ್ಲೆಂಡ್ ಮಾರಕ ಬೌಲಿಂಗ್, 118 ರನ್​ಗಳಿಗೆ ಆಫ್ರಿಕಾ ಆಲೌಟ್

ಟಿ20 ವಿಶ್ವಕಪ್​ಗೆ ಭಾರತ ತಂಡ:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನಷ್ಟೆ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್​ಗೆ ಹೆಸರಿಸಬೇಕಿದೆ. ಮೂಲಗಳ ಪ್ರಕಾರ ಸೆಪ್ಟಂಬರ್ 16 ರಂದು ಬಿಸಿಸಿಐ ಟಿ20 ವಿಶ್ವಕಪ್​​ಗೆ 16 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಲಿದೆಯಂತೆ. ಇನ್ನು ರವೀಂದ್ರ ಜಡೇಜಾ ಅವರಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು ಇವರು ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಇವೆಲ್ಲದರ ನಡುವೆ ಬಹುಕಾಲದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಸೇರಿಕೊಳ್ಳುವ ಸಂಭವವಿದೆ ಎಂಬ ಮಾತುಕೂಡ ಕೇಳಿಬರುತ್ತಿದೆ.

ಟಿ20 ವಿಶ್ವಕಪ್​ಗೆ ತಂಡವನ್ನು ಪ್ರಕಟ ಮಾಡಲು ಸೆಪ್ಟಂಬರ್ 16 ಕೊನೆಯ ದಿನಾಂಕವಾಗಿದೆ. ಇದಕ್ಕೂ ಮುನ್ನ ಬಿಸಿಸಿಐ ಅಧಿಕಾರಿಗಳು, ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಸಭೆ ಸೇರಿ ಚರ್ಚಿಸಬೇಕಿದೆ. ಈಗಾಗಲೇ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಮ್ಮ ಟೀಮ್ ಅನ್ನು ಹೆಸರಿಸಿದೆ.

Published On - 10:44 am, Sun, 11 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ