AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣ್ ನಾಯರ್ ಜೊತೆ ಜಗಳಕ್ಕಿಳಿದ ಬುಮ್ರಾ: ನೋಡ್ತಾ ಖುಷಿಪಟ್ಟ ರೋಹಿತ್ ಶರ್ಮಾ

IPL 2025 DC vs MI: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025 ರ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ. ಈ ಗೆಲುವಿನ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಂಚಿದ್ದು ಕರುಣ್ ನಾಯರ್. 40 ಎಸೆತಗಳನ್ನು ಎದುರಿಸಿದ ಕರುಣ್ 5 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 89 ರನ್ ಬಾರಿಸಿದ್ದರು. ಇದರ ನಡುವೆ ಕರುಣ್ ನಾಯರ್ ಹಾಗೂ ಜಸ್​ಪ್ರೀತ್ ಬುಮ್ರಾ ಕಿತ್ತಾಡಿಕೊಂಡಿದ್ದಾರೆ.

ಕರುಣ್ ನಾಯರ್ ಜೊತೆ ಜಗಳಕ್ಕಿಳಿದ ಬುಮ್ರಾ: ನೋಡ್ತಾ ಖುಷಿಪಟ್ಟ ರೋಹಿತ್ ಶರ್ಮಾ
Karun Nair - Jasprit Bumrah - Rohit Sharma
ಝಾಹಿರ್ ಯೂಸುಫ್
|

Updated on: Apr 14, 2025 | 7:54 AM

Share

IPL 2025: ಐಪಿಎಲ್​ನ 29ನೇ ಪಂದ್ಯದಲ್ಲಿ ಕರುಣ್ ನಾಯರ್ (Karun Nair) ಹಾಗೂ ಜಸ್​ಪ್ರೀತ್ ಬುಮ್ರಾ (Jasprit Bumrah) ಮೈದಾನದಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ (59) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಜೇಕ್ ಫ್ರೇಸರ್ ಮೆಕ್​ಗುರ್ಕ್ (0)​ ಮೊದಲ ಎಸೆತದಲ್ಲೇ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ಹಂತದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್ ನಾಯರ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಅದರಲ್ಲೂ ಜಸ್​ಪ್ರೀತ್ ಬುಮ್ರಾ ಅವರ ಒಂದೇ ಓವರ್​ನಲ್ಲಿ ಕರುಣ್ ನಾಯರ್ 18 ರನ್​ಗಳನ್ನು ಚಚ್ಚಿದ್ದರು. ಇತ್ತ ಕರುಣ್ ಬ್ಯಾಟ್​ನಿಂದ ಸಿಕ್ಸ್-ಫೋರ್​ಗಳನ್ನು ಹೊಡೆಸಿಕೊಂಡ ಬುಮ್ರಾ ವಿಚಲಿತರಾದಂತೆ ಕಂಡು ಬಂದರು.

ಇದರ ನಡುವೆ ಕರುಣ್ ನಾಯರ್ ರನ್ ಓಡುವಾಗ ಗೊತ್ತಿಲ್ಲದೆ ಬುಮ್ರಾ ಅವರ ಮೈಗೆ ತಾಗಿದ್ದಾರೆ. ಇದಕ್ಕೆ ಕೋಪಗೊಂಡ ಜಸ್​ಪ್ರೀತ್ ಬುಮ್ರಾ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್​​ ಜೊತೆ ಜಗಳಕ್ಕಿಳಿದಿದ್ದಾರೆ. ಆದರೆ ಗೊತ್ತಿಲ್ಲದೆ ಮೈಗೆ ತಾಗಿದ್ದರಿಂದ ಅದಾಗಲೇ ಕರುಣ್ ನಾಯಕ ಕ್ಷಮೆ ಸಹ ಕೇಳಿದ್ದರು.

ಇದಾಗ್ಯೂ ಓವರ್ ಮುಕ್ತಾಯದ ಬಳಿಕ ಮತ್ತೆ ಜಸ್​ಪ್ರೀತ್ ಬುಮ್ರಾ ಕರುಣ್ ಅವರೊಂದಿಗೆ ಜಗಳವನ್ನು ಮುಂದುವರೆಸಿದರು. ಭಾರತೀಯ ಆಟಗಾರರ ನಡುವಣ ಈ ಮಾತಿನ ಚಕಮಕಿ ನಡುವೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ನಗುತ್ತಾ ನಿಂತಿದ್ದು ಅಚ್ಚರಿಗೆ ಕಾರಣವಾಗಿತ್ತು.

ಹಿರಿಯ ಆಟಗಾರನಾಗಿರುವ ಹಿಟ್​ಮ್ಯಾನ್ ಇಬ್ಬರ ನಡುವಣ ಜಗಳ ಬಿಡಿಸುವುದನ್ನು ಬಿಟ್ಟು ಖುಷಿಪಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಜಗಳದ ನಡುವೆ ಕರುಣ್ ನಾಯರ್ ತನ್ನ ತಪ್ಪಿಲ್ಲ ಎಂದು ಹಾರ್ದಿಕ್ ಪಾಂಡ್ಯಗೆ ಮನವರಿಕೆ ಮಾಡಲು ಮುಂದಾದರು. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್​ ಬ್ಯಾಟರ್​ ಅನ್ನು ಪಾಂಡ್ಯ ಸಮಾಧಾನಪಡಿಸಿದ್ದಾರೆ.

ಇದನ್ನೂ ಓದಿ: ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ

ಇದೀಗ ಜಸ್​ಪ್ರೀತ್ ಬುಮ್ರಾ ಬುಮ್ರಾ ಹಾಗೂ ಕರುಣ್ ನಾಯರ್ ನಡುವಣ ಜಗಳದ ವಿಡಿಯೋ ವೈರಲ್ ಆಗಿದ್ದು, ರೋಹಿತ್ ಶರ್ಮಾ ನಡೆಗೆ ಪರ – ವಿರೋಧ ಚರ್ಚೆಗಳು ಶುರುವಾಗಿದೆ.

ಕರುಣ್ – ಬುಮ್ರಾ ನಡುವಣ ಜಗಳದ ವಿಡಿಯೋ:

ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಚಕ ಗೆಲುವು:

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನೀಡಿದ 205 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 183 ರನ್​ ಕಲೆಹಾಕಿತ್ತು. ಆದರೆ 19ನೇ ಓವರ್​ನಲ್ಲಿ ಮೂವರು ಬ್ಯಾಟರ್​ಗಳು ರನೌಟ್ ಆಗುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 193 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ.

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ