AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akash Madhwal: 5 ರನ್​ಗೆ 5 ವಿಕೆಟ್: ಆಕಾಶ್ ಮಧ್ವಾಲ್ ಬೌಲಿಂಗ್ ಕಂಡು ಥ್ರಿಲ್ ಆದ ಬುಮ್ರಾ, ಕುಂಬ್ಳೆ

LSG vs MI, IPL 2023: 5 ವಿಕೆಟ್‌ ಸಾಧನೆ ಮಾಡಿದ ಬೆನ್ನಲ್ಲೆ ಆಕಾಶ್‌ ಮಧ್ವಾಲ್ ಅವರನ್ನು ಹಾಲಿ ಕ್ರಿಕೆಟಿಗರು ಹಾಗೂ ಮಾಜಿ ಕ್ರಿಕೆಟಿಗರು ಹಾಡಿಹೊಗಳಿದ್ದಾರೆ.

Akash Madhwal: 5 ರನ್​ಗೆ 5 ವಿಕೆಟ್: ಆಕಾಶ್ ಮಧ್ವಾಲ್ ಬೌಲಿಂಗ್ ಕಂಡು ಥ್ರಿಲ್ ಆದ ಬುಮ್ರಾ, ಕುಂಬ್ಳೆ
jasprit bumrah and Akash Madhwal
Vinay Bhat
| Edited By: |

Updated on:May 25, 2023 | 12:10 PM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ (IPL 2023) ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ (LSG vs MI) ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದರೆ, ಲಖನೌ ಟೂರ್ನಿಯಿಂದ ಹೊರಬಿದ್ದಿದೆ. ಮೇ 26 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ (GT vs MI) ತಂಡಗಳು ಮುಖಾಮುಖಿಯಾಗಲಿದೆ. ಇದರಲ್ಲಿ ಗೆಲ್ಲುವ ತಂಡ ಮೇ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಎಲ್​ಎಸ್​ಜಿ ವಿರುದ್ಧ ರೋಹಿತ್ ಪಡೆ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿ ಬರೋಬ್ಬರಿ 81 ರನ್​ಗಳ ಜಯ ಸಾಧಿಸಿತು. ಅದರಲ್ಲೂ ಮುಂಬೈ ಬೌಲರ್ 29 ವರ್ಷ ಪ್ರಾಯದ ಅಕಾಶ್ ಮಧ್ವಾಲ್ 5 ರನ್​ಗೆ 5 ವಿಕೆಟ್ ಪಡೆದು ಮಿಂಚಿದರು. ಪ್ರೇರಕ್‌ ಮಂಕಡ್‌, ನಿಕೋಲಸ್‌ ಪೂರನ್‌, ಆಯುಷ್‌ ಬದೋನಿ, ರವಿ ಬಿಷ್ಣೋಯ್‌ ಹಾಗೂ ಮೊಹ್ಸೀನ್‌ ಖಾನ್‌ ಸೇರಿ 5 ವಿಕೆಟ್‌ಗಳನ್ನು ಕಬಳಿಸಿ ಸಾಧನೆ ಗೈದರು. ಈ ಮೂಲಕ ಸ್ಪಿನ್‌ ದಿಗ್ಗಜ ಅನಿಲ್‌ ಕುಂಬ್ಳೆ ಒಳಗೊಂಡ ಎಲೈಟ್‌ ಕ್ಲಬ್‌ಗೆ ಸೇರಿದರು.

ಇದನ್ನೂ ಓದಿ
Image
IPL 2023: ಮುಗಿಯುತ್ತಾ ಬಂತು ಐಪಿಎಲ್ 2023: ಟೀಮ್ ಇಂಡಿಯಾದ ಮುಂದಿನ ಟಾರ್ಗೆಟ್ ಏನು?
Image
Rohit Sharma: ಲಖನೌ ವಿರುದ್ಧ ಗೆದ್ದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ
Image
MS Dhoni: ಜಿಯೋಸಿನಿಮಾದಲ್ಲಿ ಹೊಸ ದಾಖಲೆ: ಧೋನಿ ಬ್ಯಾಟಿಂಗ್‌ಗೆ ಬಂದಾಗ 2.5 ಕೋಟಿ ವೀಕ್ಷಣೆ
Image
IPL 2023 Orange Cap And Purple Cap: ಟೂರ್ನಿಯಿಂದ ಹೊರಬಿದ್ದ ಲಖನೌ: ಉಳಿದಿರುವುದು ಮೂರು ತಂಡ: ಆರೆಂಜ್-ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2023: ಔಟಾ ಅಥವಾ ನಾಟೌಟಾ? ಹೊಸ ಚರ್ಚೆಗೆ ಕಾರಣವಾದ ಅಂಪೈರ್ ತೀರ್ಪು

ಇದೀಗ 5 ವಿಕೆಟ್‌ ಸಾಧನೆ ಮಾಡಿದ ಬೆನ್ನಲ್ಲೆ ಆಕಾಶ್‌ ಮಧ್ವಾಲ್ ಅವರನ್ನು ಹಾಲಿ ಕ್ರಿಕೆಟಿಗರು ಹಾಗೂ ಮಾಜಿ ಕ್ರಿಕೆಟಿಗರು ಹಾಡಿಹೊಗಳಿದ್ದಾರೆ. “ಹೊಸಬರು ಈರೀತಿಯ ಉತ್ತಮ ಪ್ರದರ್ಶನ ತೋರುತ್ತಿರುವುದನ್ನು ನೋಡಲು ಖುಷಿಯಾಗುತ್ತಿದೆ. ಅನುಭವಿಗಳ ಪಾಲಿಗೆ ಈ ಆವೃತ್ತಿಯು ಅದ್ಬುತವಾಗಿದ್ದು, ಹೊಸಬರು ಕೂಡ ದೊಡ್ಡ ಮೈಲುಗಲ್ಲು ಸ್ಥಾಪಿಸಿದ್ದಾರೆ,” ಎಂದು ವಿರೇಂದ್ರ ಸೆಹ್ವಾಗ್ ತಮ್ಮ ಟ್ವಿಟ್ಟರ್​ನಲ್ಲಿ ಬರೆದಿದ್ದಾರೆ. ಅಂತೆಯೆ, “ಆಕಾಶ್‌ ಮಧ್ವಾಲ್‌ ಅವರಿಂದ ಎಂಥಾ ಸ್ಪೆಲ್‌. ಅದ್ಭುತ ಗೆಲುವಿಗಾಗಿ ಮುಂಬೈ ಇಂಡಿಯನ್ಸ್‌ಗೆ ಅಭಿನಂದನೆ,” ಎಂದು ಜಸ್‌ಪ್ರೀತ್‌ ಬುಮ್ರಾ ಟ್ವೀಟ್‌ ಮಾಡಿದ್ದಾರೆ. ಅನಿಲ್‌ ಕುಂಬ್ಳೆ ಅವರು 5 ರನ್​ಗೆ 5 ವಿಕೆಟ್ ಪಡೆದವರ ಕ್ಲಬ್​ಗೆ ಸ್ವಾಗತ ಎಂದು ಹೇಳಿದ್ದಾರೆ.

ಇನ್ನು ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ಕೂಡ ಮಧ್ವಾಲ್ ಆಟವನ್ನು ಕೊಂಡಾಡಿದ್ದಾರೆ. “ಆಕಾಶ್ 2022ರಲ್ಲಿ ನಮ್ಮ ತಂಡದಲ್ಲಿ ಸಹಾಯಕ ಬೌಲರ್ ಆಗಿದ್ದರು. ಆದರೆ, ಪ್ಲೇಯಿಂಗ್ XIನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ಸಿಕ್ಕ ಅವಕಾಶವನ್ನು ಉಪಯೋಗಿಸಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಗಾಯದ ಸಮಸ್ಯೆಯಿಂದ ಅನುಭವಿ ವೇಗಿ ಜೋಫ್ರ ಆರ್ಚರ್ ತಂಡ ತೊರೆದ ಮೇಲೆ, ಮಧ್ವಾಲ್ ಅವರು ತಂಡಕ್ಕೆ ಆಸರೆಯಾಗಲಿದ್ದಾರೆ. ಬ್ಯಾಂಕೆಡ್‌ನಲ್ಲಿ ಬೌಲ್‌ ಮಾಡಲು ಒಬ್ಬ ಬೌಲರ್ ಅವಶ್ಯಕತೆ ಇತ್ತು. ಈ ಕಾರ್ಯವನ್ನು ಮಧ್ವಾಲ್ ನಿಭಾಯಿಸಿದ್ದಾರೆ,” ರೋಹಿತ್ ಶರ್ಮಾ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Thu, 25 May 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ