AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್​ಪ್ರೀತ್​ ಬುಮ್ರಾರನ್ನು ಚೆಂಡಾಡುತ್ತಿರುವ ಬ್ಯಾಟರ್​ಗಳು..!

Jasprit Bumrah: ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಈವರೆಗೆ 86 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಪಡೆದಿರುವ ಒಟ್ಟು ವಿಕೆಟ್​ಗಳ ಸಂಖ್ಯೆ 107. ಇದಾಗ್ಯೂ ಅವರು ಒಮ್ಮೆಯೂ 5 ವಿಕೆಟ್​ಗಳ ಸಾಧನೆ ಮಾಡಿಲ್ಲ ಎಂಬುದು ವಿಶೇಷ. ಅಷ್ಟೇ ಅಲ್ಲದೆ ಒಂದೇ ಒಂದು ಪಂದ್ಯದಲ್ಲಿ ಅವರು 4 ವಿಕೆಟ್​ಗಳ ಗೊಂಚಲನ್ನು ಸಹ ಪಡೆದಿಲ್ಲ.

ಜಸ್​ಪ್ರೀತ್​ ಬುಮ್ರಾರನ್ನು ಚೆಂಡಾಡುತ್ತಿರುವ ಬ್ಯಾಟರ್​ಗಳು..!
Jasprit Bumrah
ಝಾಹಿರ್ ಯೂಸುಫ್
|

Updated on: Jan 29, 2026 | 11:57 AM

Share

ಪ್ರಸ್ತುತ ಕ್ರಿಕೆಟ್​ನ ಶ್ರೇಷ್ಠ ಬೌಲರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೂಡ ಒಬ್ಬರು. ಅದರಲ್ಲೂ ಬುಮ್ರಾ ಅವರಿಗಿಂತ ನಿಖರವಾಗಿ ಯಾರ್ಕರ್ ದಾಳಿ ಸಂಘಟಿಸುವ ಮತ್ತೋರ್ವ ಬೌಲರ್ ಇಲ್ಲ ಎನ್ನಬಹುದು. ಇದಾಗ್ಯೂ ಕಳೆದ ಕೆಲ ಪಂದ್ಯಗಳಲ್ಲಿ ಟೀಮ್ ಇಂಡಿಯಾ ವೇಗಿಯನ್ನು ಬ್ಯಾಟರ್​ಗಳು ಚೆಂಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

  • ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಒಂದೇ ಓವರ್​ನಲ್ಲಿ ನೀಡಿದ್ದು ಬರೋಬ್ಬರಿ 19 ರನ್​ಗಳು. 2017ರ ಬಳಿಕ ಬುಮ್ರಾ ಒಮ್ಮೆಯೂ ಟಿ20 ಪಂದ್ಯದ ಓವರ್​ವೊಂದರಲ್ಲಿ 18 ಕ್ಕಿಂತ ಹೆಚ್ಚು ರನ್ ಬಿಟ್ಟು ಕೊಟ್ಟಿರಲಿಲ್ಲ. ಆದರೆ ಈ ಬಾರಿ ನ್ಯೂಝಿಲೆಂಡ್ ಬ್ಯಾಟರ್​ಗಳು ಬರೋಬ್ಬರಿ 19 ರನ್​ ಚಚ್ಚಿದ್ದಾರೆ. ಅದು ಸಹ 19ನೇ ಓವರ್​ನಲ್ಲಿ ಎಂಬುದು ವಿಶೇಷ.
  • ನ್ಯೂಝಿಲೆಂಡ್ ವಿರುದ್ಧದ ಈ ಸರಣಿಯ ಮೊದಲ ಪಂದ್ಯದಲ್ಲೂ ಬುಮ್ರಾ 18ನೇ ಓವರ್​ನಲ್ಲಿ 15 ರನ್​ ಚಚ್ಚಿಸಿಕೊಂಡಿದ್ದರು. ಅಂದರೆ ಒಂದೇ ಸರಣಿಯಲ್ಲಿ ಎರಡು ಬಾರಿ ಡೆತ್ ಓವರ್‌ಗಳಲ್ಲಿ 15 ಅಥವಾ ಅದಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟಿದ್ದಾರೆ.
  • ಇದಕ್ಕೂ ಮುನ್ನ ಡಿಸೆಂಬರ್ 2025 ರಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಒಂದೇ ಪಂದ್ಯದಲ್ಲಿ ಎರಡು ಓವರ್‌ಗಳಲ್ಲಿ 15 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ನೀಡಿದ್ದರು.
  • ಡಿಸೆಂಬರ್ 11 ರಂದು ನ್ಯೂ ಚಂಡೀಗಢದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಪವರ್‌ಪ್ಲೇನಲ್ಲಿ ಬುಮ್ರಾ ಒಂದೇ ಓವರ್‌ನಲ್ಲಿ 16 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಅದೇ ಪಂದ್ಯದ ಕೊನೆಯ ಓವರ್​ನಲ್ಲಿ 17 ರನ್‌ಗಳನ್ನು ಚಚ್ಚಿಸಿಕೊಂಡಿದ್ದರು.
  • ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ 4 ಓವರ್‌ಗಳಲ್ಲಿ ನೀಡಿದ್ದು ಬರೋಬ್ಬರಿ 38 ರನ್​ಗಳು ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದಲ್ಲದೇ ಜಸ್​ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಇದೀಗ ಬ್ಯಾಟರ್​ಗಳು ಲೀಲಾಜಾಲವಾಗಿ ಸಿಕ್ಸರ್​ ಸಿಡಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಎರಡು ವರ್ಷಗಳಲ್ಲಿ ಬುಮ್ರಾ ಹೊಡೆಸಿಕೊಂಡಿರುವ ಸಿಕ್ಸರ್​​ಗಳ ಸಂಖ್ಯೆ.

  • 2024 ರಲ್ಲಿ ಜಸ್​ಪ್ರೀತ್ ಬುಮ್ರಾ ಬರೋಬ್ಬರಿ 15 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ.
  • 2025 ರಲ್ಲಿ ಬುಮ್ರಾ ಬೌಲಿಂಗ್​ನಲ್ಲಿ 13 ಸಿಕ್ಸರ್​ಗಳು ಮೂಡಿಬಂದಿವೆ.
  • 2025 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಬುಮ್ರಾ ಒಂದೇ ಪಂದ್ಯದಲ್ಲಿ 4 ಸಿಕ್ಸರ್ ಚಚ್ಚಿಸಿಕೊಂಡಿದ್ದರು. ಇದಕ್ಕೂ ಮುನ್ನ ಅವರು ತಮ್ಮ ಕೆರಿಯರ್​ನಲ್ಲಿ ಒಂದೇ ಪಂದ್ಯದಲ್ಲಿ ನಾಲ್ಕು ಸಿಕ್ಸ್ ಹೊಡೆಸಿಕೊಂಡಿರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.
  • ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲೂ ಬುಮ್ರಾ 2 ಸಿಕ್ಸರ್ ಹೊಡೆಸಿಕೊಂಡಿದ್ದಾರೆ.

2024ರ ಅಂತ್ಯದ ವೇಳೆಗೆ ಜಸ್​ಪ್ರೀತ್ ಬುಮ್ರಾ 250 ಓವರ್‌ಗಳಲ್ಲಿ ನೀಡಿರುವುದು ಕೇವಲ 35 ಸಿಕ್ಸರ್‌ಗಳನ್ನು ಮಾತ್ರ. ಆದರೆ ಇದೀಗ ಒಂದೇ ವರ್ಷದೊಳಗೆ 15 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಕಳೆದ 12 ತಿಂಗಳುಗಳಲ್ಲಿ ಬುಮ್ರಾ ಅವರ ಪ್ರದರ್ಶನವು ಕ್ಷೀಣಿಸಿರುವುದು ಸ್ಪಷ್ಟ. ಏಕೆಂದರೆ ಕಳೆದ ವರ್ಷ ಅವರು 16 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 18 ವಿಕೆಟ್‌ಗಳನ್ನು ಮಾತ್ರ.

ಇದನ್ನೂ ಓದಿ: ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

ಈ 16 ಪಂದ್ಯಗಳಲ್ಲಿ ಅವರು ಒಮ್ಮೆಯೂ 4 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್ ಪಡೆದಿಲ್ಲ. ಅಂದರೆ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಸಾಮರ್ಥ್ಯವು ನಿಧಾನಕ್ಕೆ ಕುಂದುತ್ತಿದೆ ಎನ್ನಬಹುದು. ಅದರಲ್ಲೂ ಬುಮ್ರಾಸ್ತ್ರದ ವಿರುದ್ಧ ಬ್ಯಾಟರ್​ಗಳು ಸಿಕ್ಸರ್​ ಅಸ್ತ್ರಗಳ ಪ್ರಯೋಗಿಸುತ್ತಿದ್ದಾರೆ ಎಂಬುದಕ್ಕೆ ಈ ಮೇಲಿನ ಅಂಕಿ ಅಂಶಗಳೇ ಸಾಕ್ಷಿ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​