AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ನೋ ಬಾಲ್ ಎಸೆದು 2 ವಿಕೆಟ್ ಉರುಳಿಸಿದ ಜಸ್​ಪ್ರೀತ್ ಬುಮ್ರಾ

Jasprit Bumrah: ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.

Jasprit Bumrah: ನೋ ಬಾಲ್ ಎಸೆದು 2 ವಿಕೆಟ್ ಉರುಳಿಸಿದ ಜಸ್​ಪ್ರೀತ್ ಬುಮ್ರಾ
Jasprit Bumrah
TV9 Web
| Edited By: |

Updated on: Jul 03, 2022 | 12:49 PM

Share

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England 5th Test) ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಮ್ ಇಂಡಿಯಾ (Team India) ಮೇಲುಗೈ ಸಾಧಿಸಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಪರ ರಿಷಭ್ ಪಂತ್ (146) ಶತಕ ಸಿಡಿಸಿದರೆ, 2ನೇ ದಿನದಾಟದಲ್ಲಿ ರವೀಂದ್ರ ಜಡೇಜಾ (104) ಶತಕ ಬಾರಿಸಿ ಅಬ್ಬರಿಸಿದರು. ಇನ್ನು ಅಂತಿಮ ಅಂತದಲ್ಲಿ ಓಂದೇ ಓವರ್​ನಲ್ಲಿ 35 ರನ್​ ಕಲೆಹಾಕುವ ಮೂಲಕ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಮೊತ್ತವನ್ನು 416 ಕ್ಕೆ ತಂದು ನಿಲ್ಲಿಸಿದ್ದರು. ಮೊದಲ ಇನಿಂಗ್ಸ್​ನಲ್ಲಿ 416 ರನ್​ಗಳ ಟಾರ್ಗೆಟ್ ನೀಡಿ ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾ ಪರ ನಾಯಕ ಬುಮ್ರಾ (Jasprit Bumrah) ಆರಂಭದಲ್ಲೇ ಕರಾರುವಾಕ್ ದಾಳಿ ಸಂಘಟಿಸಿದರು. ಪರಿಣಾಮ ತಂಡದ 100 ರನ್ ಆಗುವುದರೊಳಗೆ ಇಂಗ್ಲೆಂಡ್ ತಂಡವು 5 ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡಿದೆ.

ಇನ್ನು ಈ ಐದು ವಿಕೆಟ್​ಗಳಲ್ಲಿ ಮೂರು ವಿಕೆಟ್​ಗಳನ್ನು ಬುಮ್ರಾ ಉರುಳಿಸಿದ್ದಾರೆ. ಅದರಲ್ಲಿ 2 ವಿಕೆಟ್ ಲಭಿಸಿರುವುದು ನೋ ಬಾಲ್ ಮೂಲಕ ಎಂಬುದು ವಿಶೇಷ. ಅಂದರೆ ಬುಮ್ರಾ ಈ ಪಂದ್ಯದಲ್ಲಿ 2 ಓವರ್​ಗಳಲ್ಲಿ ನೋ ಬಾಲ್ ಎಸೆದಿದ್ದರು. ಈ ಹೆಚ್ಚುವರಿ ಎಸೆತಗಳಲ್ಲೇ ವಿಕೆಟ್ ಕೂಡ ಲಭಿಸಿದೆ. ಮೂರನೇ ಓವರ್‌ನ ಆರನೇ ಎಸೆತದಲ್ಲಿ ಅಲೆಕ್ಸ್ ಲೀಸ್ 2 ರನ್ ಗಳಿಸಿದ್ದರು. ಆದರೆ ಅದು ನೋಬಾಲ್ ಆಗಿದ್ದ ಕಾರಣ ಬುಮ್ರಾ ಹೆಚ್ಚುವರಿ ಎಸೆತ ಎಸೆಯಬೇಕಾಯಿತು. ಈ ಹೆಚ್ಚುವರಿ ಎಸೆತದಲ್ಲಿ ಲೀಸ್ (6) ಅವರನ್ನು ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದರು.

ಇದಾದ ಬಳಿಕ ಬುಮ್ರಾ ಅವರ 11ನೇ ಓವರ್‌ನ ಕೊನೆಯ ಎಸೆತ ನೋಬಾಲ್ ಆಗಿತ್ತು. ಈ ವೇಳೆ ಓಲಿ ಪೋಪ್​ ಕ್ರೀಸ್​ನಲ್ಲಿದ್ದರು. ನೋಬಾಲ್​ನಿಂದ ಸಿಕ್ಕ ಹೆಚ್ಚುವರಿ ಎಸೆತವನ್ನು ಡ್ರೈವ್ ಮಾಡಲು ಹೋದ ಪೋಪ್​ ಸ್ಲಿಪ್‌ನಲ್ಲಿದ್ದ ಶ್ರೇಯಸ್‌ ಅಯ್ಯರ್‌ಗೆ ಕ್ಯಾಚ್‌ ನೀಡಿದರು. ಈ ಮೂಲಕ ಎರಡು ಓವರ್​ಗಳಲ್ಲಿ 7 ಎಸೆತಗಳನ್ನು ಎಸೆಯುವ ಮೂಲಕ ಬುಮ್ರಾ 2 ವಿಕೆಟ್ ಉರುಳಿಸಿದರು.

ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದ್ದು, ಇಂಗ್ಲೆಂಡ್ ತಂಡವು ಕೇವಲ 84 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ