AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಎರಡನೇ ಟೆಸ್ಟ್​ಗು ಮುನ್ನ ಭಾರತಕ್ಕೆ ಶಾಕ್: ಜಸ್ಪ್ರೀತ್ ಬುಮ್ರಾ ಹೊರಕ್ಕೆ?

India vs England 2nd Test: ಜಸ್ಪ್ರೀತ್ ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದರು, ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅವರಿಗೆ ಯಾವುದೇ ವಿಕೆಟ್ ಸಿಗಲಿಲ್ಲ. ಪಂದ್ಯದ ಕೊನೆಯಲ್ಲಿ, ಭಾರತ ಹೊಸ ಚೆಂಡನ್ನು ತೆಗೆದುಕೊಂಡಾಗ, ಶುಭ್‌ಮನ್ ಗಿಲ್ ಬುಮ್ರಾಗೆ ಕೊನೆಯ ಅವಕಾಶ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ನಾಯಕ ಗಿಲ್ ಚೆಂಡನ್ನು ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಅವರಿಗೆ ಹಸ್ತಾಂತರಿಸಿದರು.

Jasprit Bumrah: ಎರಡನೇ ಟೆಸ್ಟ್​ಗು ಮುನ್ನ ಭಾರತಕ್ಕೆ ಶಾಕ್: ಜಸ್ಪ್ರೀತ್ ಬುಮ್ರಾ ಹೊರಕ್ಕೆ?
Jasprit Bumrah (2)
Vinay Bhat
|

Updated on:Jun 25, 2025 | 11:11 AM

Share

ಬೆಂಗಳೂರು (ಜೂ. 25): ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ (Indian Cricket Team) ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳಿಂದ ಸೋತಿತು. ಪಂದ್ಯಕ್ಕೂ ಮುನ್ನ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಕೆಲಸದ ಹೊರೆ ಪರಿಗಣಿಸಿ ಅವರನ್ನು ಕೇವಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಆಡಿಸಲಾಗುವುದು ಎಂದು ತಂಡದ ಆಡಳಿತ ಮಂಡಳಿ ಸೂಚಿಸಿತ್ತು. ಬುಮ್ರಾ ಉಪಸ್ಥಿತಿಯಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತದೆ ಎಂದು ತಂಡ ಆಶಿಸಿತ್ತು, ಆದರೆ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

ಬುಮ್ರಾ ಮುಂದಿನ ಟೆಸ್ಟ್ ಆಡುತ್ತಾರಾ?

ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದರು, ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅವರಿಗೆ ಯಾವುದೇ ವಿಕೆಟ್ ಸಿಗಲಿಲ್ಲ. ಪಂದ್ಯದ ಕೊನೆಯಲ್ಲಿ, ಭಾರತ ಹೊಸ ಚೆಂಡನ್ನು ತೆಗೆದುಕೊಂಡಾಗ, ಶುಭ್‌ಮನ್ ಗಿಲ್ ಬುಮ್ರಾಗೆ ಕೊನೆಯ ಅವಕಾಶ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ನಾಯಕ ಗಿಲ್ ಚೆಂಡನ್ನು ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಅವರಿಗೆ ಹಸ್ತಾಂತರಿಸಿದರು. ಇದು ಬುಮ್ರಾ ಸರಣಿಯ ಮುಂದಿನ ಪಂದ್ಯದಲ್ಲಿ ಆಡುವ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು. ಎರಡನೇ ಟೆಸ್ಟ್‌ಗೆ ಮೊದಲು ತಂಡದ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಪಂದ್ಯದ ನಂತರ ಗಿಲ್ ಕೂಡ ಹೇಳಿದ್ದಾರೆ. ಕ್ಯಾಚ್‌ಗಳನ್ನು ಕೈಬಿಡುವುದು ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ಸೋಲಿಗೆ ಕಾರಣವೆಂದು ಗಿಲ್ ಉಲ್ಲೇಖಿಸಿದರು.

ಇದನ್ನೂ ಓದಿ
Image
ಸೋಲುಗಳ ಸರಮಾಲೆ... ಭಾರತ ಟೆಸ್ಟ್ ತಂಡಕ್ಕೆ 'ಗಂಭೀರ' ಸಮಸ್ಯೆ
Image
ಟೀಮ್ ಇಂಡಿಯಾ ಸೋಲಿಗೆ ಶುಭ್​ಮನ್ ಗಿಲ್ ದೂರಿದ್ದು ಯಾರನ್ನ..!
Image
ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
Image
ಟಿ20ಯಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೀರನ್ ಪೊಲಾರ್ಡ್

ಟೀಮ್ ಇಂಡಿಯಾದ ಫೀಲ್ಡಿಂಗ್ ಕಳಪೆಯಾಗಿತ್ತು

ಭಾರತದ ಕೆಳ ಕ್ರಮಾಂಕದ ಬ್ಯಾಟಿಂಗ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಶೋಚನೀಯವಾಗಿ ವಿಫಲವಾಯಿತು. ಫೀಲ್ಡಿಂಗ್ ಕೂಡ ಕಳಪೆಯಾಗಿತ್ತು. ಯಶಸ್ವಿ ಜೈಸ್ವಾಲ್ ನಾಲ್ಕು ಕ್ಯಾಚ್‌ಗಳನ್ನು ಕೈಬಿಟ್ಟರೆ, ಜಡೇಜಾ ಒಂದು ಕ್ಯಾಚ್ ಅನ್ನು ಕೈಬಿಟ್ಟರು. ಇತರ ಆಟಗಾರರ ಪ್ರದರ್ಶನವೂ ಉತ್ತಮವಾಗಿಲ್ಲ. ಈ ಕ್ಷೇತ್ರದಲ್ಲಿ ತಂಡ ಸುಧಾರಿಸಬೇಕಾಗಿದೆ ಎಂದು ಗಿಲ್ ಹೇಳಿದ್ದಾರೆ. ಪಂದ್ಯದ ನಂತರ, ಗಿಲ್ ಹೇಳಿದರು, ‘ಇದು ಉತ್ತಮ ಟೆಸ್ಟ್ ಆಗಿತ್ತು, ನಮಗೆ ಅವಕಾಶಗಳು ಸಿಕ್ಕವು. ಕ್ಯಾಚ್‌ಗಳನ್ನು ಕೈಬಿಟ್ಟಿದ್ದು ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕೊಡುಗೆ ನೀಡದಿರುವುದು ನಮಗೆ ನೋವುಂಟು ಮಾಡಿತು. ನಾವು ಅವರಿಗೆ 430 ರನ್‌ಗಳನ್ನು ನೀಡುವ ಬಗ್ಗೆ ಯೋಚಿಸುತ್ತಿದ್ದೆವು, ಆದರೆ ನಮ್ಮ ಕೊನೆಯ ವಿಕೆಟ್‌ಗಳು 25 ರನ್‌ಗಳಿಗೆ ಬಿದ್ದವು’ ಎಂದರು.

ನಮಗೆ ಉತ್ತಮ ಚಾನ್ಸ್ ಇತ್ತು, ಆದರೆ… ಸೋಲಿಗೆ ಶುಭ್​ಮನ್ ಗಿಲ್ ದೂರಿದ್ದು ಯಾರನ್ನ..!

‘ಇಂಗ್ಲೆಂಡ್​ನ ಮೊದಲ ವಿಕೆಟ್ ನಂತರ ನಮಗೆ ಅವಕಾಶಗಳಿವೆ ಎಂದು ನನಗೆ ಅನಿಸಿತು. ಆದರೆ, ಅಂದುಕೊಡಂತೆ ನಡೆಯಲಿಲ್ಲ. ನಾವು ಮೊದಲ ಇನ್ನಿಂಗ್ಸ್ ಕುಸಿತದ ವಿಚಾರದಲ್ಲಿ ಮುಂದೆ ನಾವು ಅದನ್ನು ಸರಿಪಡಿಸಬೇಕು. ಅಂತಹ ಪಿಚ್‌ಗಳಲ್ಲಿ ಅವಕಾಶಗಳು ಸುಲಭವಾಗಿ ಬರುವುದಿಲ್ಲ, ಆದರೆ ನಮ್ಮ ತಂಡ ಚಿಕ್ಕದಾಗಿದೆ. ಇದು ಕಲಿಯಬೇಕಾದ ವಿಷಯ. ಅದು ಸುಧಾರಿಸುತ್ತದೆ ಎಂದು ಆಶಿಸುತ್ತೇವೆ’ ಎಂದಿದ್ದಾರೆ.

ಬುಮ್ರಾ ಆಟದ ಬಗ್ಗೆ ಗಿಲ್ ಹೇಳಿದ್ದೇನು?

ಬುಮ್ರಾಗೆ ಹೊಸ ಚೆಂಡನ್ನು ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಗಿಲ್, ಈ ನಿರ್ಧಾರವನ್ನು ಪಂದ್ಯದಿಂದ ಪಂದ್ಯಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಅವರು, ‘ಇದು ಪಂದ್ಯದಿಂದ ಪಂದ್ಯಕ್ಕೆ ನಿರ್ಧಾರವಾಗುತ್ತದೆ. ದೀರ್ಘ ವಿರಾಮದ ನಂತರ ಮುಂದಿನ ಪಂದ್ಯ ಹತ್ತಿರ ಬಂದಾಗ ನೋಡೋಣ’ ಎಂದು ಹೇಳಿದರು. ಇದರರ್ಥ ಬುಮ್ರಾ ಅವರ ಆಟವು ಅವರ ಫಿಟ್ನೆಸ್ ಮತ್ತು ತಂಡದ ತಂತ್ರವನ್ನು ಅವಲಂಬಿಸಿರುತ್ತದೆ. ಹೀಗಾಗಿ ಬುಮ್ರಾ ಮುಂದಿನ ಪಂದ್ಯ ಆಡುವುದು ಅನುಮಾನ ಎಂಬಂತೆ ಕಾಣುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Wed, 25 June 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ