AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಪ್ರೀತ್ ಬುಮ್ರಾ ಮುಡಿಗೆ ವರ್ಷದ ಟೆಸ್ಟ್ ಕ್ರಿಕೆಟಿಗ ಕಿರೀಟ ತೊಡಿಸಿದ ಐಸಿಸಿ

ICC Test Cricketer of the Year 2024: ಐಸಿಸಿ 2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನದ್ದಾರೆ. 2024ರಲ್ಲಿ ಅವರ ಅದ್ಭುತ ಪ್ರದರ್ಶನ, ವಿಶೇಷವಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಸ್ಥಿರತೆ, 71 ವಿಕೆಟ್‌ಗಳ ಸಾಧನೆ ಈ ಪ್ರಶಸ್ತಿಯನ್ನು ಅವರಿಗೆ ಗಳಿಸಿಕೊಟ್ಟಿದೆ. ಬುಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮೊದಲ ವೇಗದ ಬೌಲರ್ ಆಗಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂಬುದು ವಿಶೇಷ.

ಜಸ್ಪ್ರೀತ್ ಬುಮ್ರಾ ಮುಡಿಗೆ ವರ್ಷದ ಟೆಸ್ಟ್ ಕ್ರಿಕೆಟಿಗ ಕಿರೀಟ ತೊಡಿಸಿದ ಐಸಿಸಿ
ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Jan 27, 2025 | 4:26 PM

Share

ಐಸಿಸಿ, 2024 ರ ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಿದೆ. 2024 ರಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದ ಜಸ್ಪ್ರೀತ್ ಬುಮ್ರಾ ಇದೀಗ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅದರಲ್ಲೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಪರವಾಗಿ ಸ್ಥಿರ ಪ್ರದರ್ಶನ ನೀಡಿದ ಏಕೈಕ ಆಟಗಾರನೆಂದರೆ ಅದು ಬುಮ್ರಾ. ಇಡೀ ಸರಣಿಯಲ್ಲಿ ಬುಮ್ರಾ ತಮ್ಮ ಕರಾರುವಕ್ಕಾದ ದಾಳಿಯಿಂದ ಆಸೀಸ್ ಆಟಗಾರರನ್ನು ಕಟ್ಟಿಹಾಕದಿದ್ದರೆ, ಟೀಂ ಇಂಡಿಯಾ ಇಡೀ ಸರಣಿಯಲ್ಲಿ ವೈಟ್ ವಾಶ್ ಮುಖಭಂಗ ಅನುಭವಿಸುವ ಸಾಧ್ಯತೆಗಳಿದ್ದವು. ಆಸೀಸ್ ವಿರುದ್ಧದ ಪ್ರದರ್ಶನಕ್ಕಾಗಿ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಐಸಿಸಿ, ಬುಮ್ರಾರನ್ನು ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಆಯ್ಕೆ ಮಾಡಿದೆ.

ಬುಮ್ರಾ ಅವರ ಐತಿಹಾಸಿಕ ಪ್ರದರ್ಶನ

ಜಸ್ಪ್ರೀತ್ ಬುಮ್ರಾ ಭಾರತವಲ್ಲದೆ, ವಿದೇಶಿ ಪರಿಸ್ಥಿತಿಗಳಲ್ಲಿಯೂ ಉತ್ತಮವಾಗಿ ಆಡಿದರು. 2023 ರ ಕೊನೆಯಲ್ಲಿ ಬೆನ್ನುನೋವಿನಿಂದ ಚೇತರಿಸಿಕೊಂಡ ನಂತರ ಟೆಸ್ಟ್‌ಗೆ ಮರಳಿದ್ದ ಬುಮ್ರಾ 2024 ರಲ್ಲಿ ಭಾರತದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರಾಗಿದ್ದರು. ತವರಿನ ಪರಿಸ್ಥಿತಿಯಲ್ಲಿ ಕಳೆದ ವರ್ಷ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬುಮ್ರಾ ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದರು.

ಜಸ್ಪ್ರೀತ್ ಬುಮ್ರಾ 2024 ರಲ್ಲಿ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಎನಿಸಿಕೊಂಡಿದ್ದರು. ಅವರನ್ನು ಬಿಟ್ಟರೆ ಬೇರಾವ ಬೌಲರ್‌ಗೂ 60 ವಿಕೆಟ್‌ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ಟೆಸ್ಟ್ ಇತಿಹಾಸದಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ 70+ ವಿಕೆಟ್‌ಗಳನ್ನು ಪಡೆದ 17 ಬೌಲರ್‌ಗಳ ಪೈಕಿ ಬುಮ್ರಾ ಮಾತ್ರ ಕಡಿಮೆ ಸರಾಸರಿ ಹೊಂದಿರುವ ಬೌಲರ್ ಎನಿಸಿಕೊಂಡಿದ್ದಾರೆ​. ಇದರ ಜೊತೆಗೆ ಕ್ಯಾಲೆಂಡರ್ ವರ್ಷದಲ್ಲಿ 70+ ಟೆಸ್ಟ್ ವಿಕೆಟ್‌ಗಳನ್ನು ಪಡೆದ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೂ ಬುಮ್ರಾ ಪಾತ್ರರಾಗಿದ್ದಾರೆ.

ಅನುಭವಿಗಳ ಪಟ್ಟಿಯಲ್ಲಿ ಬುಮ್ರಾ

ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದ ಆರನೇ ಭಾರತೀಯ ಜಸ್ಪ್ರೀತ್ ಬುಮ್ರಾ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ರವಿಚಂದ್ರನ್ ಅಶ್ವಿನ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆದರೆ ಈ ಐವರು ಆಟಗಾರರು ಬ್ಯಾಟ್ಸ್‌ಮನ್​ಗಳಾಗಿದ್ದು, ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾದ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.

ಸಂತಸ ವ್ಯಕ್ತಪಡಿಸಿದ ಬುಮ್ರಾ

ವರ್ಷದ ಐಸಿಸಿ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾದ ನಂತರ ಮಾತನಾಡಿರುವ ಜಸ್ಪ್ರೀತ್ ಬುಮ್ರಾ, ‘ಈ ಸ್ವರೂಪ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ. ನಾನು ಯಾವಾಗಲೂ ಟೆಸ್ಟ್ ಕ್ರಿಕೆಟ್ ಆಡಲು ಬಯಸುತ್ತೇನೆ. ಕಳೆದ ವರ್ಷ ನನಗೆ ತುಂಬಾ ವಿಶೇಷವಾಗಿತ್ತು. ನಾನು ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ ಮತ್ತು ಪಂದ್ಯಗಳನ್ನೂ ಗೆದ್ದಿದ್ದೇನೆ. ವೈಜಾಗ್‌ನಲ್ಲಿ ಒಲಿ ಪೋಪ್ ಅವರ ವಿಕೆಟ್ ನನ್ನ ಪಾಲಿಗೆ ಅತ್ಯಂತ ವಿಶೇಷವಾಗಿತ್ತು. ಆ ವಿಕೆಟ್ ನಿಂದಾಗಿ ಪಂದ್ಯದ ಗತಿಯೇ ಬದಲಾಗಿತ್ತು. ಈ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Mon, 27 January 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?