AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಭಾರತಕ್ಕೆ ಮರಳಿದ ಜಸ್​ಪ್ರೀತ್ ಬುಮ್ರಾ: ಏಷ್ಯಾಕಪ್ ಪಂದ್ಯಕ್ಕೆ ಅಲಭ್ಯ

Jasprit Bumrah: ಶನಿವಾರ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 14 ಎಸೆತಗಳಲ್ಲಿ 3 ಫೋರ್​ಗಳೊಂದಿಗೆ 16 ರನ್ ಬಾರಿಸಿದ್ದರು.  ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (87) ಹಾಗೂ ಇಶಾನ್ ಕಿಶನ್ (82) ನಂತರ ಅತ್ಯಧಿಕ ರನ್​ ಕಲೆಹಾಕಿದ್ದು ಬುಮ್ರಾ (16) ಎಂಬುದು ವಿಶೇಷ.

Asia Cup 2023: ಭಾರತಕ್ಕೆ ಮರಳಿದ ಜಸ್​ಪ್ರೀತ್ ಬುಮ್ರಾ: ಏಷ್ಯಾಕಪ್ ಪಂದ್ಯಕ್ಕೆ ಅಲಭ್ಯ
Jasprit Bumrah
TV9 Web
| Edited By: |

Updated on:Sep 03, 2023 | 9:21 PM

Share

Asia Cup 2023: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಶ್ರೀಲಂಕಾದಿಂದ ಭಾರತಕ್ಕೆ ಮರಳಿದ್ದಾರೆ. ಹೀಗಾಗಿ ಸೋಮವಾರ ನಡೆಯಲಿರುವ ನೇಪಾಳ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಗಾಗಿ ಅವರು ಮುಂಬೈಗೆ ಮರಳಿದ್ದು, ಸೂಪರ್-4 ಹಂತದ ಪಂದ್ಯದ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಜಸ್​ಪ್ರೀತ್ ಬುಮ್ರಾ ಅವರು ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರನ್ನು ಮಾರ್ಚ್ 15, 2020 ರಂದು ಗೋವಾದಲ್ಲಿ ವಿವಾಹವಾಗಿದ್ದರು. ಇದೀಗ ಈ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿಯೇ ಬುಮ್ರಾ ದಿಢೀರ್ ಆಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇತ್ತ ತಂಡವನ್ನು ತೊರೆದಿರುವ ಬುಮ್ರಾ  ಸೆಪ್ಟೆಂಬರ್ 4 ರಂದು ನೇಪಾಳ ವಿರುದ್ಧ ನಡೆಯುವ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ. ಸೂಪರ್-4 ಹಂತದಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಆಡಲಿದೆ.

ಅಂದರೆ ಸೂಪರ್ ಫೋರ್ ಹಂತಕ್ಕೇರಿದರೆ ಭಾರತ ತಂಡದ ಮೊದಲ ಎದುರಾಳಿ ಪಾಕಿಸ್ತಾನ್. ಈ ಪಂದ್ಯದ ವೇಳೆಗೆ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ತಿಳಿದು ಬಂದಿದೆ.

ಶನಿವಾರ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 14 ಎಸೆತಗಳಲ್ಲಿ 3 ಫೋರ್​ಗಳೊಂದಿಗೆ 16 ರನ್ ಬಾರಿಸಿದ್ದರು.  ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (87) ಹಾಗೂ ಇಶಾನ್ ಕಿಶನ್ (82) ನಂತರ ಅತ್ಯಧಿಕ ರನ್​ ಕಲೆಹಾಕಿದ್ದು ಬುಮ್ರಾ (16) ಎಂಬುದು ವಿಶೇಷ.

ಈ ಪಂದ್ಯದ ಬಳಿಕ ವೈಯುಕ್ತಿಕ ಕಾರಣಗಳಿಗಾಗಿ ಅವರು  ಮುಂಬೈಗೆ ಮರಳಿದ್ದು, ಇನ್ನು ಸೂಪರ್-4 ಹಂತದ ಪಂದ್ಯಗಳ ವೇಳೆ ಮತ್ತೆ ಶ್ರೀಲಂಕಾಗೆ ಮರಳಲಿದ್ದಾರೆ.

ಇನ್ನು ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದರು. ಇದೀಗ ನೇಪಾಳ ವಿರುದ್ಧ ಬುಮ್ರಾ ಅಲಭ್ಯರಾಗಿರುವ ಕಾರಣ ಮೊಹಮ್ಮದ್ ಶಮಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೆಎಲ್ ರಾಹುಲ್ ತಂಡಕ್ಕೆ ಎಂಟ್ರಿ:

ಕೆಎಲ್ ರಾಹುಲ್ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಈ ಬಾರಿಯ ಏಷ್ಯಾಕಪ್​ಗೆ ಆಯ್ಕೆಯಾಗಿದ್ದ ರಾಹುಲ್ ಫಿಟ್​ನೆಸ್ ಸಮಸ್ಯೆಯ ಕಾರಣ ಶ್ರೀಲಂಕಾಗೆ ತೆರಳಿರಲಿಲ್ಲ. ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಪಡೆದಿದ್ದು, ಹೀಗಾಗಿ ಸೋಮವಾರ ಅವರು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Published On - 8:15 pm, Sun, 3 September 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ