AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾವ್ಹ್​… ಜಸ್​ಪ್ರೀತ್ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ..!

Jasprit Bumrah: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳನ್ನಾಡಿದ್ದ ಜಸ್​ಪ್ರೀತ್ ಬುಮ್ರಾ ಒಟ್ಟು 15 ವಿಕೆಟ್​ಗಳನ್ನು ಉರುಳಿಸಿದ್ದರು. ಅದರಲ್ಲೂ ಫೈನಲ್ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಬುಮ್ರಾ 4 ಓವರ್​ಗಳಲ್ಲಿ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಭಾರತ ತಂಡವು ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಝಾಹಿರ್ ಯೂಸುಫ್
|

Updated on: Aug 27, 2024 | 2:52 PM

Share

ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹವಾ ಜೋರಾಗಿದೆ. ಇದಕ್ಕೆ ಸಾಕ್ಷಿ ಚೆನ್ನೈನಲ್ಲಿ ನಡೆದ ಇತ್ತೀಚಿನ ಕಾರ್ಯಕ್ರಮ. ಚೆನ್ನೈನ ಸತ್ಯಬಾಮಾ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಜಸ್​ಪ್ರೀತ್ ಬುಮ್ರಾ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಹೀಗೆ ಆಗಮಿಸಿದ ಬುಮ್ರಾಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಅದು ಸಹ ಸಿನಿಮಾ ತಾರೆಗಳಿಗೆ ನೀಡುವಂತಹ ಗ್ರ್ಯಾಂಡ್ ವೆಲ್ಕಂ ಮೂಲಕ ಎಂಬುದು ವಿಶೇಷ. ಇದೀಗ ಈ ಅದ್ಧೂರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಪ್ರಿಯರಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅಂದಹಾಗೆ ಟಿ20 ವಿಶ್ವಕಪ್ ಬಳಿಕ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಲಂಕಾ ವಿರುದ್ಧದ ಸೀಮಿತ ಓವರ್​ಗಳಿಂದ ಸರಣಿಗೆ ಅಲಭ್ಯರಾಗಿದ್ದ ಬುಮ್ರಾ ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಏಕೆಂದರೆ ಭಾರತ ತಂಡವು ಮುಂಬರುವ ದಿನಗಳಲ್ಲಿ ಬ್ಯಾಕ್ ಟು ಬ್ಯಾಕ್ ಟೆಸ್ಟ್ ಸರಣಿಗಳನ್ನು ಆಡಲಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಇದಾದ ಬಳಿಕ ಆಸ್ಟ್ರೇಲಿಯಾ, ಇಂಗ್ಲೆಂಡ್ ವಿರುದ್ಧ ಕೂಡ ಟೆಸ್ಟ್ ಪಂದ್ಯಗಳನ್ನಾಡಬೇಕಿದೆ. ಹೀಗಾಗಿ ಭಾರತ ತಂಡದ ಪ್ರಮುಖ ವೇಗಿಯಾಗಿರುವ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ಕಲ್ಪಿಸಲು ಬಿಸಿಸಿಐ ಮುಂದಾಗಿದೆ.

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ