AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾವ್ಹ್​… ಜಸ್​ಪ್ರೀತ್ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ..!

Jasprit Bumrah: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳನ್ನಾಡಿದ್ದ ಜಸ್​ಪ್ರೀತ್ ಬುಮ್ರಾ ಒಟ್ಟು 15 ವಿಕೆಟ್​ಗಳನ್ನು ಉರುಳಿಸಿದ್ದರು. ಅದರಲ್ಲೂ ಫೈನಲ್ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಬುಮ್ರಾ 4 ಓವರ್​ಗಳಲ್ಲಿ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಭಾರತ ತಂಡವು ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಝಾಹಿರ್ ಯೂಸುಫ್
|

Updated on: Aug 27, 2024 | 2:52 PM

Share

ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹವಾ ಜೋರಾಗಿದೆ. ಇದಕ್ಕೆ ಸಾಕ್ಷಿ ಚೆನ್ನೈನಲ್ಲಿ ನಡೆದ ಇತ್ತೀಚಿನ ಕಾರ್ಯಕ್ರಮ. ಚೆನ್ನೈನ ಸತ್ಯಬಾಮಾ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಜಸ್​ಪ್ರೀತ್ ಬುಮ್ರಾ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಹೀಗೆ ಆಗಮಿಸಿದ ಬುಮ್ರಾಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಅದು ಸಹ ಸಿನಿಮಾ ತಾರೆಗಳಿಗೆ ನೀಡುವಂತಹ ಗ್ರ್ಯಾಂಡ್ ವೆಲ್ಕಂ ಮೂಲಕ ಎಂಬುದು ವಿಶೇಷ. ಇದೀಗ ಈ ಅದ್ಧೂರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಪ್ರಿಯರಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅಂದಹಾಗೆ ಟಿ20 ವಿಶ್ವಕಪ್ ಬಳಿಕ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಲಂಕಾ ವಿರುದ್ಧದ ಸೀಮಿತ ಓವರ್​ಗಳಿಂದ ಸರಣಿಗೆ ಅಲಭ್ಯರಾಗಿದ್ದ ಬುಮ್ರಾ ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಏಕೆಂದರೆ ಭಾರತ ತಂಡವು ಮುಂಬರುವ ದಿನಗಳಲ್ಲಿ ಬ್ಯಾಕ್ ಟು ಬ್ಯಾಕ್ ಟೆಸ್ಟ್ ಸರಣಿಗಳನ್ನು ಆಡಲಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಇದಾದ ಬಳಿಕ ಆಸ್ಟ್ರೇಲಿಯಾ, ಇಂಗ್ಲೆಂಡ್ ವಿರುದ್ಧ ಕೂಡ ಟೆಸ್ಟ್ ಪಂದ್ಯಗಳನ್ನಾಡಬೇಕಿದೆ. ಹೀಗಾಗಿ ಭಾರತ ತಂಡದ ಪ್ರಮುಖ ವೇಗಿಯಾಗಿರುವ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ಕಲ್ಪಿಸಲು ಬಿಸಿಸಿಐ ಮುಂದಾಗಿದೆ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!