AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಭಾರತ ಟೆಸ್ಟ್ ತಂಡದ ನಾಯಕತ್ವ ಬೇಡ ಎಂದ ಜಸ್ಪ್ರೀತ್ ಬುಮ್ರಾ: ಈ ಕಾರಣಕ್ಕಾಗಿ ನಿರಾಕರಣೆ

India New Test Captain: ಉಪ ನಾಯಕನಾಗಿದ್ದ ಬುಮ್ರಾ ರೋಹಿತ್ ಬಳಿಕ ನಾಯಕನಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಜಸ್ಪ್ರೀತ್ ಬುಮ್ರಾ ಸ್ವತಃ ಭಾರತೀಯ ಟೆಸ್ಟ್ ತಂಡದ ನಾಯಕನಾಗಲು ಬಯಸುವುದಿಲ್ಲವಂತೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

Jasprit Bumrah: ಭಾರತ ಟೆಸ್ಟ್ ತಂಡದ ನಾಯಕತ್ವ ಬೇಡ ಎಂದ ಜಸ್ಪ್ರೀತ್ ಬುಮ್ರಾ: ಈ ಕಾರಣಕ್ಕಾಗಿ ನಿರಾಕರಣೆ
Jasprit Bumrah
Vinay Bhat
|

Updated on: May 12, 2025 | 10:30 AM

Share

ಬೆಂಗಳೂರು (ಮೇ. 12): ಭಾರತ ಟೆಸ್ಟ್ ತಂಡದಲ್ಲಿ (Indian Test Cricket Team) ಕೆಲ ಮಹತ್ವದ ಬದಲಾವಣೆ ಆಗುತ್ತಿದೆ. ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡಕ್ಕೆ ಹೊಸ ನಾಯಕನ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಇಂಗ್ಲೆಂಡ್ ವಿರುದ್ಧದ ಸರಣಿ ಆರಂಭವಾಗಲು ಕೆಲವೇ ವಾರಗಳು ಬಾಕಿ ಉಳಿದಿದ್ದು, ಆಯ್ಕೆದಾರರ ಮುಂದೆ ದೊಡ್ಡ ಸವಾಲು ಎದುರಾಗಿದೆ. ರೋಹಿತ್ ನಾಯಕತ್ವದ ಅವಧಿಯಲ್ಲಿ, ಜಸ್ಪ್ರೀತ್ ಬುಮ್ರಾ ಉಪನಾಯಕನ ಪಾತ್ರದಲ್ಲಿದ್ದರು.

ಬುಮ್ರಾಗೆ ನಾಯಕನಾಗುವ ಆಸೆ ಇಲ್ಲ:

ಉಪ ನಾಯಕನಾಗಿದ್ದ ಬುಮ್ರಾ ರೋಹಿತ್ ಬಳಿಕ ನಾಯಕನಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಜಸ್ಪ್ರೀತ್ ಬುಮ್ರಾ ಸ್ವತಃ ಭಾರತೀಯ ಟೆಸ್ಟ್ ತಂಡದ ನಾಯಕನಾಗಲು ಬಯಸುವುದಿಲ್ಲವಂತೆ. ಸ್ಕೈ ಸ್ಪೋರ್ಟ್ಸ್ ವರದಿಯಲ್ಲಿ ಈ ಹೇಳಿಕೆ ನೀಡಲಾಗಿದೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಗಾಯಗಳು ಬುಮ್ರಾ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. 2022-23 ರಲ್ಲಿ, ಅವರು ಗಾಯದಿಂದಾಗಿ ಸುಮಾರು ಒಂದು ವರ್ಷ ಮೈದಾನದಿಂದ ದೂರವಿದ್ದರು. ಜನವರಿಯಲ್ಲಿ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಗಾಯಗೊಂಡ ನಂತರ ಅವರು ಫಿಟ್ನೆಸ್ ಅನ್ನು ಮರಳಿ ಪಡೆಯಲು ನಾಲ್ಕು ತಿಂಗಳುಗಳನ್ನು ತೆಗೆದುಕೊಂಡರು.

ಪಂತ್ ಮತ್ತು ಗಿಲ್ ಕ್ಯಾಪ್ಟನ್ ಓಟದ ಮುಂಚೂಣಿಯಲ್ಲಿದ್ದಾರೆ:

ಜಸ್ಪ್ರೀತ್ ಬುಮ್ರಾ ನಿರಾಕರಿಸಿದ ನಂತರ, ಈಗ ಶುಭ್​ಮನ್ ಗಿಲ್ ಮತ್ತು ರಿಷಭ್ ಪಂತ್ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಗಿಲ್ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಆಗಿದ್ದು, ಮೂರನೇ ಸ್ಥಾನದಲ್ಲಿ ಆಡುತ್ತಾರೆ. ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಟೆಸ್ಟ್ ನಲ್ಲಿ ಭಾರತ ಪರ ಉತ್ತಮ ದಾಖಲೆ ಹೊಂದಿದ್ದಾರೆ. ವರದಿಯ ಪ್ರಕಾರ, ‘ಭಾರತ ಈಗ ಗಿಲ್ ಅಥವಾ ಪಂತ್ ಅವರನ್ನು ಮುಂದಿನ ಟೆಸ್ಟ್ ನಾಯಕರನ್ನಾಗಿ ಆಯ್ಕೆ ಮಾಡಬಹುದು. ಆಯ್ಕೆದಾರರು ಮುಂದಿನ ವಾರ ಇದರ ಬಗ್ಗೆ ಮಾತನಾಡಲಿದ್ದಾರೆ’ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
ಐಪಿಎಲ್ ಆರಂಭವಾಗುತ್ತೊ ಇಲ್ವೊ ಗೊತ್ತಿಲ್ಲ: ಅಭ್ಯಾಸ ಆರಂಭಿಸಿದ ಗುಜರಾತ್ ತಂಡ
Image
ಇಂಗ್ಲೆಂಡ್‌ ಪ್ರವಾಸಕ್ಕೆ ಕರುಣ್ ನಾಯರ್ ಆಯ್ಕೆ ಸಾಧ್ಯತೆ
Image
ಐಪಿಎಲ್ ಫೈನಲ್ ಕೋಲ್ಕತ್ತಾದಿಂದ ಶಿಫ್ಟ್..!
Image
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ

IPL 2025: ಐಪಿಎಲ್ ಆರಂಭವಾಗುತ್ತೊ ಇಲ್ವೊ ಗೊತ್ತಿಲ್ಲ: ಅಭ್ಯಾಸ ಆರಂಭಿಸಿದ ಗುಜರಾತ್ ಟೈಟಾನ್ಸ್ ತಂಡ

ಟೆಸ್ಟ್‌ನಲ್ಲಿ ಪಂತ್ ದಾಖಲೆ ಉತ್ತಮವಾಗಿದೆ:

ಶುಭ್​ಮನ್ ಗಿಲ್ ಹೆಸರು ಈಗಾಗಲೇ ಭಾರತ ತಂಡದ ನಾಯಕ ಆಯ್ಕೆಗೆ ಚರ್ಚೆಯಲ್ಲಿದೆ, ಆದರೆ ಪಂತ್ ಹೆಸರು ಕೇಳಿ ಅನೇಕ ಜನರು ಆಶ್ಚರ್ಯಚಕಿತರಾಗಿದ್ದಾರೆ. ಆದಾಗ್ಯೂ, ಟೆಸ್ಟ್ ಕ್ರಿಕೆಟ್‌ನಲ್ಲಿ ಪಂತ್ ಅವರ ಪ್ರದರ್ಶನ ಟೆಸ್ಟ್ ಲೋಕದಲ್ಲಿ ಅತ್ಯುತ್ತಮವಾಗಿದೆ. ಅವರು ಅನೇಕ ಸಂಕಷ್ಟದ ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ. ಪಂತ್ ಇತ್ತೀಚೆಗೆ ಫಾರ್ಮ್ ನಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

ರಿಷಭ್ ಪಂತ್ ಐಪಿಎಲ್ 2025 ರಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದರ ಜೊತೆಗೆ, ಈ ಅವಧಿಯಲ್ಲಿ ಆಸ್ಟ್ರೇಲಿಯಾ ಯಾವುದೇ ದೊಡ್ಡ ಸಾಧನೆಯನ್ನು ಮಾಡಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಸರಣಿಯಲ್ಲಿ ಅವರು ಅನೇಕ ಕೆಟ್ಟ ಹೊಡೆತಗಳನ್ನು ಆಡಿದರು, ಇದಕ್ಕಾಗಿ ಅವರು ತೀವ್ರ ಟೀಕೆಗೆ ಗುರಿಯಾದರು. ಹೀಗಿರುವಾಗ ಪಂತ್ ಅಥವಾ ಗಿಲ್ ಪೈಕಿ ಯಾರು ಟೀಮ್ ಇಂಡಿಯಾದ ಟೆಸ್ಟ್ ನಾಯಕತ್ವ ವಹಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ