AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗ್ಗಜರ ಪುನರ್ಮಿಲನ: ಇದುವೇ ಟೀಮ್ ಇಂಡಿಯಾದ ನೈಜ ಬಲ

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಜುಲೈ 14 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದರೆ, ದ್ವಿತೀಯ ಪಂದ್ಯವು ಜುಲೈ 16 ರಂದು ಕಾರ್ಡಿಫ್​ನಲ್ಲಿ ಜರುಗಲಿದೆ. ಹಾಗೆಯೇ ಈ ಸರಣಿಯ ಕೊನೆಯ ಮ್ಯಾಚ್ ಜುಲೈ 19 ರಂದು ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿದೆ.

ದಿಗ್ಗಜರ ಪುನರ್ಮಿಲನ: ಇದುವೇ ಟೀಮ್ ಇಂಡಿಯಾದ ನೈಜ ಬಲ
Team India Image Credit source: BCCI
ಝಾಹಿರ್ ಯೂಸುಫ್
|

Updated on:Jul 14, 2026 | 7:38 AM

Share

ಬರೋಬ್ಬರಿ 968 ದಿನಗಳ ಬಳಿಕ ಮೂವರು ದಿಗ್ಗಜರ ಪುನರ್ಮಿಲನ. ಅಚ್ಚರಿ ಎನಿಸಿದರೂ ಇದುವೇ ಸತ್ಯ. ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾ ಜೊತೆಯಾಗಿ ಕಣಕ್ಕಿಳಿದು ಬರೋಬ್ಬರಿ 968 ದಿನಗಳು ಕಳೆದಿವೆ. ಅಂದರೆ ಈ ಮೂವರು ಮೂರು ವರ್ಷಗಳ ಹಿಂದೆ ಜೊತೆಯಾಗಿ ಏಕದಿನ ಪಂದ್ಯವಾಡಿದ್ದರು. ಇದಾದ ಬಳಿಕ ಬುಮ್ರಾ ಭಾರತದ ಪರ ಒಂದೇ ಒಂದು ಏಕದಿನ ಪಂದ್ಯವಾಡಿಲ್ಲ.

ಕೊನೆಯ ಬಾರಿ ಮೂವರು ಕಣಕ್ಕಿಳಿದದ್ದು ಯಾವಾಗ?

ನವೆಂಬರ್ 19, 2023 ರಂದು ಅಹಮದಾಬಾದ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿ ಜಸ್​ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೊನೆಯ ಬಾರಿ ಜೊತೆಯಾಗಿ ಏಕದಿನ ಪಂದ್ಯವಾಡಿದ್ದರು.

ಆ ನಂತರ ಕಾರ್ಯಭಾರ ನಿರ್ವಹಣೆಯ ಕಾರಣ ಜಸ್​ಪ್ರೀತ್ ಬುಮ್ರಾಗೆ ಸತತ ವಿಶ್ರಾಂತಿ ನೀಡಲಾಗಿತ್ತು. ಇದರ ನಡುವೆ ಟೀಮ್ ಇಂಡಿಯಾ ಒಟ್ಟು 26 ಏಕದಿನ ಪಂದ್ಯಗಳನ್ನು ಆಡಿದೆ.

ಆದರೆ, ಟೆಸ್ಟ್ ಕ್ರಿಕೆಟ್ ಮತ್ತು ಟಿ20 ವಿಶ್ವಕಪ್‌ಗಳಿಗೆ ಬುಮ್ರಾ ಅವರ ಫಿಟ್‌ನೆಸ್ ಕಾಯ್ದುಕೊಳ್ಳಲು ಬಿಸಿಸಿಐ ಅವರಿಗೆ ದ್ವಿಪಕ್ಷೀಯ ಏಕದಿನ ಸರಣಿಗಳಿಂದ ವಿಶ್ರಾಂತಿ ನೀಡಿತ್ತು. ಹೀಗಾಗಿ 2023ರ ಏಕದಿನ ವಿಶ್ವಕಪ್​ ಬಳಿಕ ಮೂವರು ದಿಗ್ಗಜರು ಜೊತೆಯಾಗಿ ಕಣಕ್ಕಿಳಿದಿರಲಿಲ್ಲ.

ಬುಮ್ರಾ ಕಂಬ್ಯಾಕ್:

2027 ರ ಐಸಿಸಿ ಏಕದಿನ ವಿಶ್ವಕಪ್‌ಗೆ ಬಲಿಷ್ಠ ತಂಡವನ್ನು ಸಿದ್ಧಪಡಿಸುವ ಯೋಜನೆಯ ಭಾಗವಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಈಗ ಮತ್ತೆ ಏಕದಿನ ತಂಡಕ್ಕೆ ಕರೆತರಲಾಗಿದೆ.

ಈ ಪಂದ್ಯವು ಬುಮ್ರಾ ಅವರಿಗೆ ಮಾತ್ರವಲ್ಲದೆ ಇಡೀ ಭಾರತೀಯ ಕ್ರಿಕೆಟ್‌ಗೆ ವಿಶೇಷವಾಗಿದೆ. 2023 ರ ವಿಶ್ವಕಪ್ ಫೈನಲ್ ಬಳಿಕ ಇದೇ ಮೊದಲ ಬಾರಿಗೆ ಭಾರತದ ಮೂವರು ಆಧಾರಸ್ತಂಭಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ ಒಟ್ಟಿಗೆ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ ದೃಷ್ಟಿಯಿಂದ ಬುಮ್ರಾ  ಅವರ ಈ ಮರಳುವಿಕೆ ಭಾರತ ತಂಡದ ಬೌಲಿಂಗ್ ವಿಭಾಗಕ್ಕೆ ಆನೆ ಬಲ ತಂದಿದೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೋತು ಸುಣ್ಣವಾಗಿರುವ ಟೀಮ್ ಇಂಡಿಯಾ ಇದೀಗ ಮೂವರು ದಿಗ್ಗಜರ ಪುನರ್ಮಿಲನದೊಂದಿಗೆ ಗೆಲುವಿನ ಲಯಕ್ಕೆ ಮರಳುವುದನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

Published On - 7:37 am, Tue, 14 July 26

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​