AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಜಸ್ಪ್ರೀತ್ ಬುಮ್ರಾಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಮೈದಾನಕ್ಕೆ ರೀ ಎಂಟ್ರಿ ಯಾವಾಗ ಗೊತ್ತಾ?

Jasprit Bumrah: ಶಸ್ತ್ರಚಿಕಿತ್ಸೆಯಿಂದಾಗಿ ಜಸ್ಪ್ರೀತ್ ಬುಮ್ರಾ ಈ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ. ಇದರೊಂದಿಗೆ ಸೆಪ್ಟಂಬರ್‌ನಲ್ಲಿ ನಡೆಯಲಿರುವ ಏಷ್ಯಾಕಪ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ.

Jasprit Bumrah: ಜಸ್ಪ್ರೀತ್ ಬುಮ್ರಾಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಮೈದಾನಕ್ಕೆ ರೀ ಎಂಟ್ರಿ ಯಾವಾಗ ಗೊತ್ತಾ?
ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Mar 08, 2023 | 3:06 PM

Share

ಹೋಳಿ ಹಬ್ಬದಂದು ಟೀಂ ಇಂಡಿಯಾ (Team India) ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah) ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಬಹಳ ದಿನಗಳಿಂದ ಗಾಯದಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್‌ನಲ್ಲಿ ಬುಮ್ರಾ ಶಸ್ತ್ರಚಿಕಿತ್ಸೆ ನಡೆದಿದ್ದು, ಫೋರ್ಟೆ ಆರ್ಥೋಪೆಡಿಕ್ಸ್ ಆಸ್ಪತ್ರೆಯಲ್ಲಿ ಡಾ. ರೋವನ್ ಶೋಟೆನ್ ಅವರು ನಡೆಸಿದ ಶಸ್ತ್ರಚಿಕಿತ್ಸೆ (surgery) ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ. ಈಗ ಪ್ರಶ್ನೆ ಏನೆಂದರೆ, ಈ ಶಸ್ತ್ರಚಿಕಿತ್ಸೆಯ ನಂತರ ಜಸ್ಪ್ರೀತ್ ಬುಮ್ರಾ ಯಾವಾಗ ಮೈದಾನಕ್ಕೆ ಮರಳುತ್ತಾರೆ? ಎಂಬುದು. ಕ್ರಿಕ್‌ಬಝ್‌ನ ವರದಿಯ ಪ್ರಕಾರ, ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗಲು ಗರಿಷ್ಠ 24 ವಾರಗಳು ಅಂದರೆ 6 ತಿಂಗಳು ಬೇಕಾಗುತ್ತದೆ. ಆದರೆ ಜಸ್ಪ್ರೀತ್ ಬುಮ್ರಾ ಈ ಸಮಯಕ್ಕಿಂತ ಮುಂಚೆಯೇ ಚೇತರಿಸಿಕೊಳ್ಳಬಹುದು ಎಂತಲೂ ಹೇಳಲಾಗುತ್ತಿದೆ.

ಬುಮ್ರಾ ವಿಶ್ವಕಪ್ ಆಡಬಹುದು

ಒಂದು ವೇಳೆ ಈಗಿನ ವರದಿಯಂತೆ 6 ತಿಂಗಳ ನಂತರ ಬುಮ್ರಾ ಸಂಪೂರ್ಣ ಫಿಟ್‌ ಆದರೆ, ಆಗ ಅವರು ಏಕದಿನ ವಿಶ್ವಕಪ್‌ನಲ್ಲಿ ಆಡುವ ಸಾಧ್ಯತೆಗಳು ಹೆಚ್ಚಿವೆ. 2023ರ ವಿಶ್ವಕಪ್ ಭಾರತದಲ್ಲಿಯೇ ನಡೆಯುತ್ತಿದ್ದು, ಅಕ್ಟೋಬರ್‌ನಲ್ಲಿ ಆರಂಭವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಮ್ಯಾಚ್ ವಿನ್ನರ್‌ಗಳಲ್ಲಿ ಬುಮ್ರಾ ಕೂಡ ಒಬ್ಬರಾಗಿದ್ದು, ಈ ಆಟಗಾರ ಫಿಟ್‌ ಆಗಿದ್ದರೆ, ಭಾರತದ ಗೆಲುವಿನ ಸಾಧ್ಯತೆಗಳು ಬಲಗೊಳ್ಳುತ್ತವೆ.

ಟೀಂ ಇಂಡಿಯಾಕ್ಕೆ ಬಿಗ್ ಶಾಕ್! ಐಪಿಎಲ್ ಜೊತೆಗೆ ಡಬ್ಲ್ಯುಟಿಸಿ ಫೈನಲ್, ಏಷ್ಯಾಕಪ್‌ನಿಂದಲೂ ಬುಮ್ರಾ ಔಟ್?

ಆದರೆ ಈ ಶಸ್ತ್ರಚಿಕಿತ್ಸೆಯಿಂದಾಗಿ ಜಸ್ಪ್ರೀತ್ ಬುಮ್ರಾ ಈ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ. ಇದರೊಂದಿಗೆ ಸೆಪ್ಟಂಬರ್‌ನಲ್ಲಿ ನಡೆಯಲಿರುವ ಏಷ್ಯಾಕಪ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌ನಿಂದ ಗಾಯದ ಸಮಸ್ಯೆಗೆ ತುತ್ತಾಗಿರುವ ಬುಮ್ರಾಗೆ ಕಳೆದ ಏಷ್ಯಾಕಪ್, ಟಿ20 ವಿಶ್ವಕಪ್ ಕೂಡ ಆಡಲಾಗಲಿಲ್ಲ.

ಬಾಂಡ್‌ ಸಲಹೆ ಮೇರೆಗೆ ಬುಮ್ರಾಗೆ ಶಸ್ತ್ರಚಿಕಿತ್ಸೆ?

ಮುಂಬೈ ಇಂಡಿಯನ್ಸ್ ಬೌಲಿಂಗ್ ಕೋಚ್ ಮತ್ತು ನ್ಯೂಜಿಲೆಂಡ್ ಮಾಜಿ ವೇಗದ ಬೌಲರ್ ಶೇನ್ ಬಾಂಡ್ ಅವರ ಸಲಹೆಯ ಮೇರೆಗೆ ಜಸ್ಪ್ರೀತ್ ಬುಮ್ರಾ ಅವರನ್ನು ಕ್ರೈಸ್ಟ್‌ಚರ್ಚ್‌ಗೆ ಕಳುಹಿಸಲಾಗಿದೆ ಎಂಬ ಸುದ್ದಿಯೂ ಇದೆ. ಆದರೆ ಈ ಬಗ್ಗೆ ಯಾವದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಬುಮ್ರಾಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಜೋಫ್ರಾ ಆರ್ಚರ್, ಜೇಮ್ಸ್ ಪ್ಯಾಟಿನ್ಸನ್, ಜೇಸನ್ ಬೆಹ್ರೆಂಡಾರ್ಫ್ ಅವರಂತಹ ಬೌಲರ್‌ಗಳಿಗೂ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Wed, 8 March 23

Follow Us
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ