AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾವಗಲ್ ಶ್ರೀನಾಥ್ ಸರಳತೆಗೆ ಸಲಾಂ ಹೊಡೆದ ನೆಟ್ಟಿಗರು

Javagal Srinath Metro: ಭಾರತೀಯ ಕ್ರಿಕೆಟ್ ದಿಗ್ಗಜ ಜಾವಗಲ್ ಶ್ರೀನಾಥ್ ಅವರ ಸರಳ ಜೀವನ ಅಭಿಮಾನಿಗಳ ಗಮನ ಸೆಳೆದಿದೆ. ಕ್ರಿಕೆಟಿಗರು ಐಷಾರಾಮಿ ಜೀವನ ನಡೆಸುವ ಈ ದಿನಗಳಲ್ಲಿ, ಮೈಸೂರು ಎಕ್ಸ್‌ಪ್ರೆಸ್ ಶ್ರೀನಾಥ್ ಬೆಂಗಳೂರು ಮೆಟ್ರೋದಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸಿರುವುದು ವೈರಲ್ ಆಗಿದೆ. ಅವರ ವಿನಮ್ರತೆ ಮತ್ತು ಸೌಜನ್ಯ ಕ್ರಿಕೆಟ್ ಪ್ರೇಮಿಗಳಲ್ಲಿ ಹೊಸ ಮೆಚ್ಚುಗೆಗೆ ಪಾತ್ರವಾಗಿದೆ. ನಿವೃತ್ತಿಯ ನಂತರವೂ ಅವರು ಸಾಮಾನ್ಯ ವ್ಯಕ್ತಿಯಂತೆ ಬದುಕುತ್ತಿರುವುದು ಸ್ಫೂರ್ತಿದಾಯಕ.

ಜಾವಗಲ್ ಶ್ರೀನಾಥ್ ಸರಳತೆಗೆ ಸಲಾಂ ಹೊಡೆದ ನೆಟ್ಟಿಗರು
Javagal Srinath
ಪೃಥ್ವಿಶಂಕರ
|

Updated on: Aug 30, 2026 | 7:30 PM

Share

ಭಾರತದಲ್ಲಿ ಕ್ರಿಕೆಟ್​ಗೆ ಹಾಗೂ ಕ್ರಿಕೆಟಿಗರಿಗೆ ಸಿಗುವಷ್ಟು ಮನ್ನಣೆ ಬೇರೆ ಯಾವುದೇ ಕ್ರೀಡೆಯ ಜನಪ್ರಿಯ ವ್ಯಕ್ತಿಗೂ ಸಿಗುವುದಿಲ್ಲ. ಕ್ರಿಕೆಟಿಗರು ಯಾವುದಾದರೂ ಸಮಾರಂಭಕ್ಕೆ ಬರುತ್ತಾರೆ ಎಂದರೆ ಅಲ್ಲಿ ಜನಜಂಗುಳಿಯೇ ಸೇರಿರುತ್ತೆ. ಹೀಗಿರುವಾಗ ಕ್ರಿಕೆಟಿಗರು ಸಾಮಾನ್ಯ ಪ್ರಜೆಯಂತೆ ಒಬ್ಬೊಂಟಿಯಾಗಿ ಎಲ್ಲಿಯೂ ತಿರುಗುವ ವ್ಯವಸ್ಥೆ ಭಾರತದಲಿಲ್ಲ. ಇದೇ ಕಾರಣ ನೀಡಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತವನ್ನು ತೊರೆದು ಲಂಡನ್​ನಲ್ಲಿ ವಾಸಿಸುತ್ತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಕೆಲವು ಮಾಜಿ ಕ್ರಿಕೆಟಿಗರು ತಮ್ಮ ಜನಪ್ರಿಯತೆ, ಮನ್ನಣೆ ಇವೆಲ್ಲವನ್ನು ಬದಿಗಿಟ್ಟು ಸಾಮಾನ್ಯರಲ್ಲಿ ಸಾಮಾನ್ಯರಂತೆ ಸರಳ ಜೀವನ ನಡೆಸುತ್ತಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಕನ್ನಡಿಗ ಜಾವಗಲ್ ಶ್ರೀನಾಥ್ (Javagal Srinath) ಕೂಡ ಒಬ್ಬರು.

ಮೈಸೂರು ಎಕ್ಸ್​ಪ್ರೆಸ್ ಜಾವಗಲ್ ಶ್ರೀನಾಥ್

ಮೈಸೂರು ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಯಾರಿಗೆ ತಾನೆ ತಿಳಿದಿಲ್ಲ ಹೇಳಿ. ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಗೂ ಜಾವಗಲ್ ಶ್ರೀನಾಥ್ ಚಿರಪರಿಚಿತರು. ತಮ್ಮ ವೇಗದ ಬೌಲಿಂಗ್ ಮೂಲಕ ಎದುರಾಳಿ ತಂಡದ ಬ್ಯಾಟರ್​ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಶ್ರೀನಾಥ್ 1991 ರಿಂದ 2003 ರವರೆಗೆ ಅಂದರೆ ಸರಿಸುಮಾರು 12 ವರ್ಷಗಳ ಕಾಲ ಭಾರತ ಕ್ರಿಕೆಟ್​ನಲ್ಲಿ ತನ್ನದೇ ಛಾಪು ಮೂಡಿಸಿದ್ದ ಶ್ರೀನಾಥ್ ತಂಡದ ಪರ ಹಲವು ಸ್ಮರಣೀಯ ಪ್ರದರ್ಶನಗಳನ್ನು ನೀಡಿದ್ದಾರೆ. ಅಂತಹ ಶ್ರೀನಾಥ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬಳಿಕ ಪ್ರಸ್ತುತ ಐಸಿಸಿ ಪಂದ್ಯಾವಳಿಗಳಲ್ಲಿ ಮ್ಯಾಚ್ ರೆಫರಿಯಾಗಿ ಆಗಾಗ್ಗೆ ಕಾಣಿಸಿಕೊಳ್ಳುತ್ತಾರೆ.

ಮೆಟ್ರೋದಲ್ಲಿ ಪ್ರಯಾಣ

ಇದೀಗ ಅದೇ ಜಾವಗಲ್ ಶ್ರೀನಾಥ್ ಸರ್ವೆ ಸಾಮಾನ್ಯ ಪ್ರಜೆಯಂತೆ ಬೆಂಗಳೂರಿನ ಮೆಟ್ರೋದಲ್ಲಿ ಪ್ರಯಾಣಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಫೋಟೋ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ. ನೀಲಿ ಜೀನ್ಸ್ ಮತ್ತು ಆಕಾಶ ನೀಲಿ ಶರ್ಟ್ ಧರಿಸಿ, ಕೈಯಲ್ಲಿ ಟ್ರಾಲಿ ಬ್ಯಾಗ್ ಹಿಡಿದು ಮೆಟ್ರೋ ಕೋಚ್‌ನಲ್ಲಿ ಶಾಂತವಾಗಿ ನಿಂತಿರುವ ಜಾವಗಲ್ ಶ್ರೀನಾಥ್ ಅವರ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ. 90 ರ ದಶಕದಲ್ಲಿ ತಮ್ಮ ಘಾತುಕ ವೇಗದ ಮೂಲಕ ವಿಶ್ವದ ದಿಗ್ಗಜ ಬ್ಯಾಟ್ಸ್‌ಮನ್‌ಗಳ ಬೆವರಿಳಿಸುತ್ತಿದ್ದ ಶ್ರೀನಾಥ್, ಇಷ್ಟು ಸರಳ ಜೀವನ ನಡೆಸುತ್ತಿರುವುದನ್ನು ಯಾರಿಗೂ ಊಹಿಸಲು ಅಸಾಧ್ಯ.

ಜಾವಗಲ್ ಶ್ರೀನಾಥ್ ವೃತ್ತಿಜೀವನ

ಮೇಲೆ ಹೇಳಿದಂತೆ ‘ಮೈಸೂರು ಎಕ್ಸ್‌ಪ್ರೆಸ್’ ಎಂದೇ ಖ್ಯಾತರಾಗಿದ್ದ ಶ್ರೀನಾಥ್, ಭಾರತದ ಪರ 67 ಟೆಸ್ಟ್‌ಗಳಲ್ಲಿ 236 ವಿಕೆಟ್‌ಗಳು ಮತ್ತು 229 ಏಕದಿನ ಪಂದ್ಯಗಳಲ್ಲಿ 315 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ 300 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದ ಏಕೈಕ ಭಾರತೀಯ ವೇಗದ ಬೌಲರ್ ಎಂಬ ದಾಖಲೆಯೂ ಶ್ರೀನಾಥ್ ಹೆಸರಿನಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ