AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಕ್ ಹ್ಯಾಂಡ್ ಮಾಡಿ ವಿರಾಟ್​ ಕೊಹ್ಲಿಯನ್ನೇ ನೋಡುತ್ತಾ ನಿಂತ ಜಯ್ ಶಾ; ಮುಂದೇನಾಯ್ತು?

ಟೀಂ ಇಂಡಿಯಾ ವಿಶ್ವಕಪ್ ಗೆದ್ದಿದೆ. ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ರೋಚಕ ಫೈನಲ್​ನಲ್ಲಿ ಕಪ್​ನ ತನ್ನದಾಗಿಸಿಕೊಂಡಿದೆ. ವಿಶ್ವಕಪ್​ನ ಮುಂಬೈಗೆ ತರಲಾಯಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರದರ್ಶಿಸಲಾಯಿತು. ಈ ವೇಳೆ ಜಯ್ ಶಾ ಅವರಿಗೆ ವಿರಾಟ್ ಕೊಹ್ಲಿ ಶೇಕ್ ಹ್ಯಾಂಡ್ ಮಾಡಿದ ದೃಶ್ಯ ವೈರಲ್ ಆಗಿದೆ.  

ಶೇಕ್ ಹ್ಯಾಂಡ್ ಮಾಡಿ ವಿರಾಟ್​ ಕೊಹ್ಲಿಯನ್ನೇ ನೋಡುತ್ತಾ ನಿಂತ ಜಯ್ ಶಾ; ಮುಂದೇನಾಯ್ತು?
ಶೇಕ್ ಹ್ಯಾಂಡ್ ಮಾಡಿ ವಿರಾಟ್​ ಕೊಹ್ಲಿಯನ್ನೇ ನೋಡುತ್ತಾ ನಿಂತ ಜಯ್ ಶಾ; ಮುಂದೇನಾಯ್ತು?
TV9 Web
| Edited By: |

Updated on: Jul 05, 2024 | 10:35 AM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಇರೋ ಜನಪ್ರಿಯತೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 27 ಕೋಟಿ ಹಿಂಬಾಲಕರು ಇದ್ದಾರೆ. ಕೊಹ್ಲಿಗೆ ಫ್ಯಾನ್ಸ್ ಆಗದವರೇ ಇಲ್ಲ ಎಂದರೂ ತಪ್ಪಾಗಲಾರದು. ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಕೂಡ ವಿರಾಟ್ ಅವರ ಅಭಿಮಾನಿ. ಇತ್ತೀಚೆಗೆ ವೈರಲ್ ಆಗಿರೋ ವಿಡಿಯೋ ಇದಕ್ಕೆ ಸಾಕ್ಷಿ.

ಟೀಂ ಇಂಡಿಯಾ ವಿಶ್ವಕಪ್ ಗೆದ್ದಿದೆ. ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ರೋಚಕ ಫೈನಲ್​ನಲ್ಲಿ ಕಪ್​ನ ತನ್ನದಾಗಿಸಿಕೊಂಡಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜ ಟಿ20ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್​ನ ಮುಂಬೈಗೆ ತರಲಾಯಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರದರ್ಶಿಸಲಾಯಿತು. ಈ ವೇಳೆ ಜಯ್ ಶಾ ಅವರಿಗೆ ವಿರಾಟ್ ಕೊಹ್ಲಿ ಶೇಕ್ ಹ್ಯಾಂಡ್ ಮಾಡಿದ ದೃಶ್ಯ ವೈರಲ್ ಆಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ: ಸಂಜಯ್ ಮಂಜ್ರೇಕರ್

ಜಯ್ ಶಾ ಅವರು ಮೊದಲು ಕೆಲ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡಿದರು. ಆ ಬಳಿಕ ಬಂದಿದ್ದು ವಿರಾಟ್ ಕೊಹ್ಲಿ. ಅವರ ಕೈನ ಜಯ್ ಶಾ ಕುಲುಕಿದರು. ಇದಾದ ಬೆನ್ನಲ್ಲೇ ಅವರನ್ನೇ ನೋಡುತ್ತಾ ನಿಂತುಬಿಟ್ಟರು. ಜಯ್ ಶಾ ವಿರಾಟ್​ನ ನೋಡುವುದರಲ್ಲಿ ಎಷ್ಟು ಮಗ್ನರಾಗಿದ್ದರು ಎಂದರೆ ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮುಂಬೈನಲ್ಲಿ ಜುಲೈ 4 ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಬೈನ ಮರೀನ್ ಡ್ರೈವ್​ನಲ್ಲಿ ವಿಶ್ವಕಪ್​ನ ತೆಗೆದುಕೊಂಡು ಹೋಗಲಾಗಿದೆ. ಕ್ರಿಕೆಟ್ ಆಟಗಾರರು ವಾಹನದಲ್ಲಿ ಇದನ್ನು ಕೊಂಡೊಯ್ದಿದ್ದಾರೆ. ಈ ವೇಳೆ ಲಕ್ಷಾಂತರ ಜನರು ನೆರೆದಿದ್ದರು. ಅದೇ ರೀತಿ ವಾಂಖೆಡೆ ಸ್ಟೇಡಿಯಂ ಪೂರ್ತಿಯಾಗಿತ್ತು. ವಿರಾಟ್, ರೋಹಿತ್ ಸೇರಿ ವಿಶ್ವಕಪ್ ಆಡಿದ ಎಲ್ಲರೂ ಇಲ್ಲಿಗೆ ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ