ಶೇಕ್ ಹ್ಯಾಂಡ್ ಮಾಡಿ ವಿರಾಟ್​ ಕೊಹ್ಲಿಯನ್ನೇ ನೋಡುತ್ತಾ ನಿಂತ ಜಯ್ ಶಾ; ಮುಂದೇನಾಯ್ತು?

ಟೀಂ ಇಂಡಿಯಾ ವಿಶ್ವಕಪ್ ಗೆದ್ದಿದೆ. ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ರೋಚಕ ಫೈನಲ್​ನಲ್ಲಿ ಕಪ್​ನ ತನ್ನದಾಗಿಸಿಕೊಂಡಿದೆ. ವಿಶ್ವಕಪ್​ನ ಮುಂಬೈಗೆ ತರಲಾಯಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರದರ್ಶಿಸಲಾಯಿತು. ಈ ವೇಳೆ ಜಯ್ ಶಾ ಅವರಿಗೆ ವಿರಾಟ್ ಕೊಹ್ಲಿ ಶೇಕ್ ಹ್ಯಾಂಡ್ ಮಾಡಿದ ದೃಶ್ಯ ವೈರಲ್ ಆಗಿದೆ.  

ಶೇಕ್ ಹ್ಯಾಂಡ್ ಮಾಡಿ ವಿರಾಟ್​ ಕೊಹ್ಲಿಯನ್ನೇ ನೋಡುತ್ತಾ ನಿಂತ ಜಯ್ ಶಾ; ಮುಂದೇನಾಯ್ತು?
ಶೇಕ್ ಹ್ಯಾಂಡ್ ಮಾಡಿ ವಿರಾಟ್​ ಕೊಹ್ಲಿಯನ್ನೇ ನೋಡುತ್ತಾ ನಿಂತ ಜಯ್ ಶಾ; ಮುಂದೇನಾಯ್ತು?
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 05, 2024 | 10:35 AM

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಇರೋ ಜನಪ್ರಿಯತೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 27 ಕೋಟಿ ಹಿಂಬಾಲಕರು ಇದ್ದಾರೆ. ಕೊಹ್ಲಿಗೆ ಫ್ಯಾನ್ಸ್ ಆಗದವರೇ ಇಲ್ಲ ಎಂದರೂ ತಪ್ಪಾಗಲಾರದು. ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಕೂಡ ವಿರಾಟ್ ಅವರ ಅಭಿಮಾನಿ. ಇತ್ತೀಚೆಗೆ ವೈರಲ್ ಆಗಿರೋ ವಿಡಿಯೋ ಇದಕ್ಕೆ ಸಾಕ್ಷಿ.

ಟೀಂ ಇಂಡಿಯಾ ವಿಶ್ವಕಪ್ ಗೆದ್ದಿದೆ. ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ರೋಚಕ ಫೈನಲ್​ನಲ್ಲಿ ಕಪ್​ನ ತನ್ನದಾಗಿಸಿಕೊಂಡಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜ ಟಿ20ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್​ನ ಮುಂಬೈಗೆ ತರಲಾಯಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರದರ್ಶಿಸಲಾಯಿತು. ಈ ವೇಳೆ ಜಯ್ ಶಾ ಅವರಿಗೆ ವಿರಾಟ್ ಕೊಹ್ಲಿ ಶೇಕ್ ಹ್ಯಾಂಡ್ ಮಾಡಿದ ದೃಶ್ಯ ವೈರಲ್ ಆಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿರಲಿಲ್ಲ: ಸಂಜಯ್ ಮಂಜ್ರೇಕರ್

ಜಯ್ ಶಾ ಅವರು ಮೊದಲು ಕೆಲ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡಿದರು. ಆ ಬಳಿಕ ಬಂದಿದ್ದು ವಿರಾಟ್ ಕೊಹ್ಲಿ. ಅವರ ಕೈನ ಜಯ್ ಶಾ ಕುಲುಕಿದರು. ಇದಾದ ಬೆನ್ನಲ್ಲೇ ಅವರನ್ನೇ ನೋಡುತ್ತಾ ನಿಂತುಬಿಟ್ಟರು. ಜಯ್ ಶಾ ವಿರಾಟ್​ನ ನೋಡುವುದರಲ್ಲಿ ಎಷ್ಟು ಮಗ್ನರಾಗಿದ್ದರು ಎಂದರೆ ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮುಂಬೈನಲ್ಲಿ ಜುಲೈ 4 ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಬೈನ ಮರೀನ್ ಡ್ರೈವ್​ನಲ್ಲಿ ವಿಶ್ವಕಪ್​ನ ತೆಗೆದುಕೊಂಡು ಹೋಗಲಾಗಿದೆ. ಕ್ರಿಕೆಟ್ ಆಟಗಾರರು ವಾಹನದಲ್ಲಿ ಇದನ್ನು ಕೊಂಡೊಯ್ದಿದ್ದಾರೆ. ಈ ವೇಳೆ ಲಕ್ಷಾಂತರ ಜನರು ನೆರೆದಿದ್ದರು. ಅದೇ ರೀತಿ ವಾಂಖೆಡೆ ಸ್ಟೇಡಿಯಂ ಪೂರ್ತಿಯಾಗಿತ್ತು. ವಿರಾಟ್, ರೋಹಿತ್ ಸೇರಿ ವಿಶ್ವಕಪ್ ಆಡಿದ ಎಲ್ಲರೂ ಇಲ್ಲಿಗೆ ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್