AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯ್​ ಶಾ ಜೊತೆ ರಾಹುಲ್ ದ್ರಾವಿಡ್ ಸೀಕ್ರೆಟ್ ಮೀಟಿಂಗ್..!

ಮುಂಬರುವ ಏಷ್ಯಾಕಪ್​ಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಕೆಲ ಆಟಗಾರರು ಗಾಯದ ಕಾರಣ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅತ್ತ ಎನ್​ಸಿಎ ಯಿಂದ ಆಟಗಾರರ ಫಿಟ್​ನೆಸ್ ಕ್ಲಿಯರೆನ್ಸ್ ಸಿಕ್ಕ ಬಳಿಕವಷ್ಟೇ ತಂಡವನ್ನು ಆಯ್ಕೆ ಮಾಡುವುದಾಗಿ ಆಯ್ಕೆ ಸಮಿತಿ ತಿಳಿಸಿದೆ.

ಜಯ್​ ಶಾ ಜೊತೆ ರಾಹುಲ್ ದ್ರಾವಿಡ್ ಸೀಕ್ರೆಟ್ ಮೀಟಿಂಗ್..!
Rahul Dravid-Jay Shah
TV9 Web
| Edited By: |

Updated on: Aug 17, 2023 | 3:49 PM

Share

ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಗೌಪ್ಯ ಸಭೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸೀಕ್ರೆಟ್ ಮೀಟಿಂಗ್ ನಡೆದಿರುವುದು ದೂರದ ಅಮೆರಿಕದಲ್ಲಿ ಎಂಬುದು ವಿಶೇಷ. ಭಾರತ ತಂಡವು ಇತ್ತೀಚೆಗೆ ವೆಸ್ಟ್ ಇಂಡೀಸ್​ ಪ್ರವಾಸ ಕೈಗೊಂಡಿತ್ತು. ಈ ಸರಣಿಯ ಕೊನೆಯ ಎರಡು ಟಿ20 ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಿತು. ಈ ಪಂದ್ಯಗಳಿಗೂ ಮುನ್ನ ಮಿಯಾಮಿಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಜಯ್​ ಶಾ ಭೇಟಿಯಾಗಿ ಸಭೆ ನಡೆಸಿದ್ದಾರೆ.

ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಚರ್ಚಿಸಲಾಗಿರುವ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಇತ್ತ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಜಯ್ ಶಾ ನಡುವಣ ಸಭೆಯು ಇದೀಗ ಮಹತ್ವ ಪಡೆದುಕೊಂಡಿದೆ.

ವಿಶ್ವಕಪ್​ ನಿರೀಕ್ಷೆಯಲ್ಲಿ ಜಯ್ ಶಾ:

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ. ಆದರೆ ಪ್ರಸ್ತುತ ಟೀಮ್ ಇಂಡಿಯಾದ ಪ್ರದರ್ಶನ ಸಾಧಾರಣ ಮಟ್ಟದಲ್ಲಿದೆ. ಇದೇ ವಿಷಯವಾಗಿ ಚರ್ಚೆ ನಡೆಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಕೋಚ್​ ಬದಲಾವಣೆ:

ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಕೋಚ್ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಟಿ20 ಕ್ರಿಕೆಟ್​ಗೆ ಹೊಸ ತರಬೇತುದಾರನನ್ನು ಆಯ್ಕೆ ಮಾಡುವ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಒಂದು ವೇಳೆ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆದ್ದರೆ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯಲಿದ್ದಾರೆ. ಇದಾಗ್ಯೂ ಟಿ20 ಕ್ರಿಕೆಟ್​ಗೆ ಹೊಸ ಕೋಚ್ ಅನ್ನು ನೇಮಿಸುವುದು ಬಹುತೇಕ ಖಚಿತ. ಹೀಗಾಗಿಯೇ ಜಯ್​ ಶಾ ಹಾಗೂ ದ್ರಾವಿಡ್ ಭೇಟಿಯ ಬೆನ್ನಲ್ಲೇ ಮತ್ತೊಮ್ಮೆ ಕೋಚ್ ಬದಲಾವಣೆ ಸಾಧ್ಯತೆ ಸುದ್ದಿಗಳು ಮುನ್ನಲೆಗೆ ಬಂದಿವೆ.

ಟೀಮ್ ಇಂಡಿಯಾ ಆಯ್ಕೆ:

ಮುಂಬರುವ ಏಷ್ಯಾಕಪ್​ಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಕೆಲ ಆಟಗಾರರು ಗಾಯದ ಕಾರಣ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅತ್ತ ಎನ್​ಸಿಎ ಯಿಂದ ಆಟಗಾರರ ಫಿಟ್​ನೆಸ್ ಕ್ಲಿಯರೆನ್ಸ್ ಸಿಕ್ಕ ಬಳಿಕವಷ್ಟೇ ತಂಡವನ್ನು ಆಯ್ಕೆ ಮಾಡುವುದಾಗಿ ಆಯ್ಕೆ ಸಮಿತಿ ತಿಳಿಸಿದೆ. ಈ ಬಗ್ಗೆ ಕೂಡ ಬಿಸಿಸಿಐ ಕಾರ್ಯದರ್ಶಿ ಜೊತೆ ಟೀಮ್ ಇಂಡಿಯಾ ಕೋಚ್ ಚರ್ಚಿಸಿರಬಹುದು.

ಇದನ್ನೂ ಓದಿ: ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

ಒಟ್ಟಿನಲ್ಲಿ ಮಹತ್ವದ ಟೂರ್ನಿಗೂ ಮುನ್ನ ದೂರದಲ್ಲಿ ಅಮೆರಿಕದಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗೌಪ್ಯ ಸಭೆ ನಡೆಸಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿರುವುದಂತು ಸುಳ್ಳಲ್ಲ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ