Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯ್​ ಶಾ ಜೊತೆ ರಾಹುಲ್ ದ್ರಾವಿಡ್ ಸೀಕ್ರೆಟ್ ಮೀಟಿಂಗ್..!

ಮುಂಬರುವ ಏಷ್ಯಾಕಪ್​ಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಕೆಲ ಆಟಗಾರರು ಗಾಯದ ಕಾರಣ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅತ್ತ ಎನ್​ಸಿಎ ಯಿಂದ ಆಟಗಾರರ ಫಿಟ್​ನೆಸ್ ಕ್ಲಿಯರೆನ್ಸ್ ಸಿಕ್ಕ ಬಳಿಕವಷ್ಟೇ ತಂಡವನ್ನು ಆಯ್ಕೆ ಮಾಡುವುದಾಗಿ ಆಯ್ಕೆ ಸಮಿತಿ ತಿಳಿಸಿದೆ.

ಜಯ್​ ಶಾ ಜೊತೆ ರಾಹುಲ್ ದ್ರಾವಿಡ್ ಸೀಕ್ರೆಟ್ ಮೀಟಿಂಗ್..!
Rahul Dravid-Jay Shah
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 17, 2023 | 3:49 PM

ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಗೌಪ್ಯ ಸಭೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸೀಕ್ರೆಟ್ ಮೀಟಿಂಗ್ ನಡೆದಿರುವುದು ದೂರದ ಅಮೆರಿಕದಲ್ಲಿ ಎಂಬುದು ವಿಶೇಷ. ಭಾರತ ತಂಡವು ಇತ್ತೀಚೆಗೆ ವೆಸ್ಟ್ ಇಂಡೀಸ್​ ಪ್ರವಾಸ ಕೈಗೊಂಡಿತ್ತು. ಈ ಸರಣಿಯ ಕೊನೆಯ ಎರಡು ಟಿ20 ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಿತು. ಈ ಪಂದ್ಯಗಳಿಗೂ ಮುನ್ನ ಮಿಯಾಮಿಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಜಯ್​ ಶಾ ಭೇಟಿಯಾಗಿ ಸಭೆ ನಡೆಸಿದ್ದಾರೆ.

ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಚರ್ಚಿಸಲಾಗಿರುವ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಇತ್ತ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಜಯ್ ಶಾ ನಡುವಣ ಸಭೆಯು ಇದೀಗ ಮಹತ್ವ ಪಡೆದುಕೊಂಡಿದೆ.

ವಿಶ್ವಕಪ್​ ನಿರೀಕ್ಷೆಯಲ್ಲಿ ಜಯ್ ಶಾ:

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ. ಆದರೆ ಪ್ರಸ್ತುತ ಟೀಮ್ ಇಂಡಿಯಾದ ಪ್ರದರ್ಶನ ಸಾಧಾರಣ ಮಟ್ಟದಲ್ಲಿದೆ. ಇದೇ ವಿಷಯವಾಗಿ ಚರ್ಚೆ ನಡೆಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಕೋಚ್​ ಬದಲಾವಣೆ:

ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಕೋಚ್ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಟಿ20 ಕ್ರಿಕೆಟ್​ಗೆ ಹೊಸ ತರಬೇತುದಾರನನ್ನು ಆಯ್ಕೆ ಮಾಡುವ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಒಂದು ವೇಳೆ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆದ್ದರೆ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯಲಿದ್ದಾರೆ. ಇದಾಗ್ಯೂ ಟಿ20 ಕ್ರಿಕೆಟ್​ಗೆ ಹೊಸ ಕೋಚ್ ಅನ್ನು ನೇಮಿಸುವುದು ಬಹುತೇಕ ಖಚಿತ. ಹೀಗಾಗಿಯೇ ಜಯ್​ ಶಾ ಹಾಗೂ ದ್ರಾವಿಡ್ ಭೇಟಿಯ ಬೆನ್ನಲ್ಲೇ ಮತ್ತೊಮ್ಮೆ ಕೋಚ್ ಬದಲಾವಣೆ ಸಾಧ್ಯತೆ ಸುದ್ದಿಗಳು ಮುನ್ನಲೆಗೆ ಬಂದಿವೆ.

ಟೀಮ್ ಇಂಡಿಯಾ ಆಯ್ಕೆ:

ಮುಂಬರುವ ಏಷ್ಯಾಕಪ್​ಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಕೆಲ ಆಟಗಾರರು ಗಾಯದ ಕಾರಣ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅತ್ತ ಎನ್​ಸಿಎ ಯಿಂದ ಆಟಗಾರರ ಫಿಟ್​ನೆಸ್ ಕ್ಲಿಯರೆನ್ಸ್ ಸಿಕ್ಕ ಬಳಿಕವಷ್ಟೇ ತಂಡವನ್ನು ಆಯ್ಕೆ ಮಾಡುವುದಾಗಿ ಆಯ್ಕೆ ಸಮಿತಿ ತಿಳಿಸಿದೆ. ಈ ಬಗ್ಗೆ ಕೂಡ ಬಿಸಿಸಿಐ ಕಾರ್ಯದರ್ಶಿ ಜೊತೆ ಟೀಮ್ ಇಂಡಿಯಾ ಕೋಚ್ ಚರ್ಚಿಸಿರಬಹುದು.

ಇದನ್ನೂ ಓದಿ: ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

ಒಟ್ಟಿನಲ್ಲಿ ಮಹತ್ವದ ಟೂರ್ನಿಗೂ ಮುನ್ನ ದೂರದಲ್ಲಿ ಅಮೆರಿಕದಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗೌಪ್ಯ ಸಭೆ ನಡೆಸಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿರುವುದಂತು ಸುಳ್ಳಲ್ಲ.

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ