AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್ ಶಾ

ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್​ನ ಅಧ್ಯಕ್ಷ ಹುದ್ದೆಗೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಏಕೆಂದರೆ ಹಾಲಿ ಅಧ್ಯಕ್ಷರ ಕಾರ್ಯಾವಧಿಯು ನವೆಂಬರ್ 30 ಕ್ಕೆ ಮುಗಿಯಲಿದೆ. ಇನ್ನು ಡಿಸೆಂಬರ್ 1 ರಿಂದ ನೂತನ ಅಧ್ಯಕ್ಷರು ಕಾರ್ಯಾರಂಭ ಮಾಡಲಿದ್ದಾರೆ. ಇದಕ್ಕೂ ಮುನ್ನ ಐಸಿಸಿ ಮುಖ್ಯಸ್ಥರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ.

ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್ ಶಾ
Jay Shah
ಝಾಹಿರ್ ಯೂಸುಫ್
|

Updated on: Aug 21, 2024 | 9:23 AM

Share

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮುಂಬರುವ ಚುನಾವಣೆಯಲ್ಲಿ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದೆ. ಅಲ್ಲದೆ ಅಧಿಕಾರರಲ್ಲಿ ಮುಂದುವರೆಯಲು ಇಚ್ಛಿಸುತ್ತಿಲ್ಲ ಎಂದು ಬಾರ್ಕ್ಲೇ ಅವರು ಐಸಿಸಿ ಸಭೆಯಲ್ಲಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಐಸಿಸಿ ಅಧ್ಯಕ್ಷರಾಗಲು ಜಯ್ ಶಾ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ವರದಿಯಾಗಿದೆ.

ಗ್ರೆಗ್ ಬಾರ್ಕ್ಲೇ ಅವರನ್ನು ನವೆಂಬರ್ 2020 ರಲ್ಲಿ ಅವಿರೋಧವಾಗಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 2022ರಲ್ಲಿ ಅವರು ಮರು ಚುನಾಯಿತರಾಗಿದ್ದರು. ಇದೀಗ ಮೂರನೇ ಬಾರಿಗೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಂಡಳಿಗೆ ದೃಢಪಡಿಸಿದ್ದಾರೆ.  ಅದರಂತೆ ಈ ಬಾರಿಯ ಐಸಿಸಿ ಚುನಾವಣೆಯ ಮೂಲಕ ಹೊಸ ಅಧ್ಯಕ್ಷರ ನೇಮಕವಾಗಲಿದೆ. ಇನ್ನು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 27. ಇದರೊಳಗೆ ಜಯ್ ಶಾ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

ಅಧ್ಯಕ್ಷರ ಆಯ್ಕೆಯು ಸಾಮಾನ್ಯವಾಗಿ 16 ಮತಗಳನ್ನು ಹೊಂದಿರುತ್ತದೆ. ವಿಜೇತರನ್ನು ನಿರ್ಧರಿಸಲು, ಒಂಬತ್ತು ಮತಗಳ ಬಹುಮತದ ಅಗತ್ಯವಿದೆ (51%). ಈ ಹಿಂದೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡವರಿಗೆ ಮೂರನೇ ಎರಡರಷ್ಟು ಬಹುಮತವಿತ್ತು. ಇದೀಗ ಇತರೆ ಕ್ರಿಕೆಟ್​ ಮಂಡಳಿಗಳ ಬೆಂಬಲದೊಂದಿಗೆ ಜಯ್ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್​ನ ಪ್ರಧಾನ ಹುದ್ದೆಗೇರಲಿದ್ದಾರಾ ಕಾದು ನೋಡಬೇಕಿದೆ.

ಒಂದು ವೇಳೆ ಜಯ್ ಶಾ ಅಧ್ಯಕ್ಷ ಸ್ಥಾನಕ್ಕೇರಿದರೆ, ಐಸಿಸಿಯ ಮುಖ್ಯಸ್ಥರಾದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಳ್ಳಲಿದ್ದಾರೆ. 35 ವರ್ಷದ ಜಯ್ ಶಾ ಸದ್ಯ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇದೀಗ ವಿಶ್ವ ಕ್ರಿಕೆಟ್​ನ ಪ್ರಮುಖ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು: ವಾಸಿಂ ಅಕ್ರಮ್

ಅಂದಹಾಗೆ ಭಾರತದಿಂದ ಈವರೆಗೆ ಕೇವಲ ನಾಲ್ವರು ಮಾತ್ರ ಐಸಿಸಿಯ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದಾರೆ. ಅವರೆಂದರೆ, ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್. ಈ ಬಾರಿಯ ಚುನಾವಣೆಯಲ್ಲಿ ಜಯ್ ಶಾ ಸ್ಪರ್ಧಿಸಿ ಗೆದ್ದರೆ ಈ ಸ್ಥಾನಕ್ಕೇರಿದ ಐದನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್