ಜೆಮಿಮಾ ಅರ್ಧಶತಕ: ಫೈನಲ್​ಗೆ ಪ್ರವೇಶಿಸಿದ TKR

Womens Caribbean Premier League 2024: ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಒಟ್ಟು ಮೂರು ತಂಡಗಳು ಕಣಕ್ಕಿಳಿದಿವೆ. ಈ ತಂಡಗಳಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಟೀಮ್ ಈಗಾಗಲೇ ಎಲಿಮಿನೇಟ್ ಆಗಿದ್ದು, ಇದೀಗ ಬಾರ್ಬಡೋಸ್ ರಾಯಲ್ಸ್ ಹಾಗೂ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಗಳು ಫೈನಲ್​ಗೆ ಪ್ರವೇಶಿಸಿದೆ.

ಜೆಮಿಮಾ ಅರ್ಧಶತಕ: ಫೈನಲ್​ಗೆ ಪ್ರವೇಶಿಸಿದ TKR
|

Updated on:Aug 28, 2024 | 2:56 PM

ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡ ಫೈನಲ್​ಗೆ ಪ್ರವೇಶಿಸಿದೆ. ಈ ಪಂದ್ಯದ ಗೆಲುವಿನ ರೂವಾರಿ ಟೀಮ್ ಇಂಡಿಯಾ ಆಟಗಾರ್ತಿ ಜೆಮಿಮಾ ರೊಡ್ರಿಗಸ್ ಎಂಬುದು ವಿಶೇಷ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ರಾಯಲ್ಸ್ ತಂಡವು ಚಾಮರಿ ಅಥಾಪತ್ತು (70) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 130 ರನ್​ ಕಲೆಹಾಕಿತು.

131 ರನ್​ಗಳ ಗುರಿ ಬೆನ್ನತ್ತಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 18 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟಿಕೆಆರ್​ ತಂಡಕ್ಕೆ ಜೆಮಿಮಾ ರೊಡ್ರಿಗಸ್ ಆಸರೆಯಾಗಿ ನಿಂತರು. ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಜೆಮಿಮಾ ರನ್ ಪೇರಿಸುತ್ತಾ ಸಾಗಿದರೆ, ಮತ್ತೊಂದೆಡೆ ವಿಕೆಟ್ ಕಳೆದುಕೊಳ್ಳುತ್ತಿತ್ತು.

ಇದಾಗ್ಯೂ ಕ್ರೀಸ್ ಕಚ್ಚಿ ನಿಂತ ಜೆಮಿಮಾ 50 ಎಸೆತಗಳಲ್ಲಿ 4 ಫೋರ್​ಗಳೊಂದಿಗೆ ಅಜೇಯ 59 ರನ್ ಬಾರಿಸಿದರು. ಈ ಮೂಲಕ 19.4 ಓವರ್​ಗಳಲ್ಲಿ ತಂಡವನ್ನು ಗೆಲುವಿನ ಗುರಿ ತಲುಪಿಸುವ ಮೂಲಕ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಆಗಸ್ಟ್ 30 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಬಾರ್ಬಡೋಸ್ ರಾಯಲ್ಸ್ ಹಾಗೂ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ.

 

Published On - 2:56 pm, Wed, 28 August 24

Follow us
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ