AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jhulan Goswami: ಜೂಲನ್ ಗೋಸ್ವಾಮಿ TKR ತಂಡದ ಮೆಂಟರ್

Jhulan Goswami: ಭಾರತದ ಪರ 204 ಏಕದಿನ ಪಂದ್ಯಗಳನ್ನಾಡಿರುವ ಜೂಲನ್ ಗೋಸ್ವಾಮಿ ಒಟ್ಟು 255 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 12 ಟೆಸ್ಟ್ ಪಂದ್ಯಗಳಿಂದ 44 ವಿಕೆಟ್, 68 ಟಿ20 ಪಂದ್ಯಗಳಿಂದ 56 ವಿಕೆಟ್​ಗಳನ್ನು ಪಡೆದಿದ್ದಾರೆ. 2022 ರಲ್ಲಿ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಜೂಲನ್ ಇದೀಗ ಫ್ರಾಂಚೈಸಿ ಲೀಗ್​ಗಳಲ್ಲಿ ಕೋಚ್ ಹಾಗೂ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Jhulan Goswami: ಜೂಲನ್ ಗೋಸ್ವಾಮಿ TKR ತಂಡದ ಮೆಂಟರ್
Jhulan Goswami - TKR
ಝಾಹಿರ್ ಯೂಸುಫ್
|

Updated on: Jul 14, 2024 | 12:07 PM

Share

ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಮಾಜಿ ವೇಗಿ ಜೂಲನ್ ಗೋಸ್ವಾಮಿ (Jhulan Goswami) ಅವರು ಟ್ರಿನ್‌ಬಾಗೊ ನೈಟ್ ರೈಡರ್ಸ್‌ (TKR) ಮಹಿಳಾ ತಂಡದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವನ್ನು ಹೊಂದಿದ್ದು, ಇದೀಗ ಟಿಕೆಆರ್​ ಮಹಿಳಾ ತಂಡದ ಮಾರ್ಗದರ್ಶಕವಾಗಿ ಜೂಲನ್ ಅವರನ್ನು ನೇಮಿಸಲಾಗಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL) ನಲ್ಲಿ ಜೂಲನ್ ಗೋಸ್ವಾಮಿ ಮುಂಬೈ ಇಂಡಿಯನ್ಸ್ (MI) ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಇದೇ ಮೊದಲ ಬಾರಿಗೆ ವಿದೇಶಿ ಲೀಗ್​ನಲ್ಲಿ ಕಾರ್ಯ ನಿರ್ವಹಿಸಲು ಭಾರತದ ಮಾಜಿ ವೇಗಿ ಸನ್ನದ್ಧರಾಗಿದ್ದಾರೆ.

ಇನ್ನು ಈ ಬಾರಿಯ ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾರತೀಯ ಆಟಗಾರ್ತಿಯರು ಸಹ ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲೂ ಟ್ರಿನ್‌ಬಾಗೊ ನೈಟ್ ರೈಡರ್ಸ್‌ ತಂಡದಲ್ಲಿ ಟೀಮ್ ಇಂಡಿಯಾದ ಜೆಮಿಮಾ ರೊಡ್ರಿಗಸ್ ಮತ್ತು ಶಿಖಾ ಪಾಂಡೆ ಆಯ್ಕೆಯಾಗಿದ್ದಾರೆ.

ಈ ತಂಡವನ್ನು ವೆಸ್ಟ್ ಇಂಡೀಸ್​ನ ಡಿಯಾಂಡ್ರಾ ಡಾಟಿನ್ ಮುನ್ನಡೆಸಲಿದ್ದು, ಇದೇ ತಂಡದಲ್ಲಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸ್ಸೆನ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲು ಕೆಕೆಆರ್ ಫ್ರಾಂಚೈಸಿ ಮುಂದಾಗಿದೆ.

ಟ್ರಿನ್‌ಬಾಗೊ ನೈಟ್ ರೈಡರ್ಸ್ ಪ್ರಿ-ಡ್ರಾಫ್ಟ್ ಸ್ಕ್ವಾಡ್:

ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಶಿಖಾ ಪಾಂಡೆ, ಕಿಸಿಯಾ ನೈಟ್, ಶಮಿಲಾ ಕಾನ್ನೆಲ್, ಜೈದಾ ಜೇಮ್ಸ್, ಸಮರಾ ರಾಮನಾಥ್.

ಇದನ್ನೂ ಓದಿ: James Anderson: 3 ವಿಶ್ವ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಜೇಮ್ಸ್ ಅ್ಯಂಡರ್ಸನ್

ವುಮೆನ್ಸ್ ಕೆರಿಬಿಯನ್ ಪ್ರೀಮಿಯರ್ ಲೀಗ್​ ಯಾವಾಗ ಶುರು?

ಈ ಬಾರಿಯ ಡಬ್ಲ್ಯೂಸಿಪಿಎಲ್ ಟೂರ್ನಿಯು ಆಗಸ್ಟ್ 21 ರಿಂದ 29 ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಬಾರ್ಬಡೋಸ್ ರಾಯಲ್ಸ್, ಗಯಾನಾ ಅಮೆಝಾನ್ ವಾರಿಯರ್ಸ್ ಮತ್ತು ಟ್ರಿನ್‌ಬಾಗೊ ನೈಟ್ ರೈಡರ್ಸ್‌ ತಂಡಗಳು ಕಣಕ್ಕಿಳಿಯಲಿವೆ.

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ