AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jitesh Sharma: ಆರ್​ಸಿಬಿಗೆ ಸಿಕ್ಕ ಮತ್ತೋರ್ವ ದಿನೇಶ್ ಕಾರ್ತಿಕ್: ಜಿತೇಶ್ ಶರ್ಮಾರ ಒಂದೊಂದು ಶಾಟ್ ಕೂಡ ವಾವ್…

MI vs RCB, IPL 2025: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್- ಬ್ಯಾಟರ್ ಜಿತೇಶ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಕೇವಲ 19 ಎಸೆತಗಳಲ್ಲಿ 2 ಫೋರ್ ಹಾಗೂ 4 ಅಮೋಘ ಸಿಕ್ಸ್ ಸಿಡಿಸಿ ಅಜೇಯ 40 ರನ್ ಗಳಿಸಿ ತಂಡದ ಮೊತ್ತವನ್ನು 221ಕ್ಕೆ ತಲುಪುವಲ್ಲಿ ಪ್ರಮುಖ ಪಾತ್ರವಹಿಸಿದರು.

Jitesh Sharma: ಆರ್​ಸಿಬಿಗೆ ಸಿಕ್ಕ ಮತ್ತೋರ್ವ ದಿನೇಶ್ ಕಾರ್ತಿಕ್: ಜಿತೇಶ್ ಶರ್ಮಾರ ಒಂದೊಂದು ಶಾಟ್ ಕೂಡ ವಾವ್...
Jitesh Sharma
Follow us
Vinay Bhat
|

Updated on: Apr 07, 2025 | 9:39 PM

ಬೆಂಗಳೂರು (ಏ. 07): ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2025ರ 10ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (Mumbai Indians vs Royal Challengers Bengaluru) ಭರ್ಜರು ಬ್ಯಾಟಿಂಗ್ ಮಾಡಿದೆ. 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 225 ರನ್​ಗಳ ಬೃಹತ್ ರನ್ ಕಲೆಹಾಕಿದೆ. ಈ ಮೂಲಕ ಎದುರಾಳಿಗೆ ಕಠಿಣ ಸವಾಲು ನೀಡಿದೆ. ವಿರಾಟ್ ಕೊಹ್ಲಿ ಹಾಗೂ ನಾಯಕ ರಜತ್ ಪಾಟಿದಾರ್ ಅರ್ಧಶತಕ ಸಿಡಿಸಿದರೆ, ಮತ್ತೊಂದೆಡೆ ಎಲ್ಲರ ಗಮನ ಸೆಳೆದಿದ್ದ ಜಿತೇಶ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್. ಇವರ ಆಟ ಆರ್​ಸಿಬಿಯ ಮಾಜಿ ಬ್ಯಾಟರ್ ದಿನೇಶ್ ಕಾರ್ತಿಕ್ ಅವರನ್ನು ನೆನಪಿಸಿತು.

ಲಿಯಾಮ್ ಲಿವಿಂಗ್​ಸ್ಟೋನ್ ಶೂನ್ಯಕ್ಕೆ ನಿರ್ಗಮಿಸಿದ ಬಳಿಕ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಜಿತೇಶ್ ಶರ್ಮಾ ಆರಂಭದಿಂದಲೂ ಬಿರುಸಿನ ಆಟ ಪ್ರದರ್ಶಿಸಿದರು. ಇನ್ನಿಂಗ್ಸ್​ನ ಕೊನೆಯ ಎಸೆದ ವರೆಗೂ ಕ್ರೀಸ್​ನಲ್ಲಿ ಇದ್ದ ಇವರು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಕೇವಲ 19 ಎಸೆತಗಳಲ್ಲಿ 2 ಫೋರ್ ಹಾಗೂ 4 ಅಮೋಘ ಸಿಕ್ಸ್ ಸಿಡಿಸಿ ಅಜೇಯ 40 ರನ್ ಗಳಿಸಿ ತಂಡದ ಮೊತ್ತವನ್ನು 221ಕ್ಕೆ ತಲುಪುವಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಜಸ್​ಪ್ರಿತ್ ಬುಮ್ರಾ ರಂತಹ ವಿಶ್ವ ಶ್ರೇಷ್ಠಾ ಬೌಲರ್​ನ 20ನೇ ಓವರ್​ನಲ್ಲಿ ಜಿತೇಶ್ ಸಿಡಿಸಿದ ಸಿಕ್ಸ್ ಅದ್ಭುತವಾಗಿತ್ತು.

ಇದನ್ನೂ ಓದಿ
Image
ಸ್ಫೋಟಕ ಅರ್ಧಶತಕ ಸಿಡಿಸಿ ಟಿ20ಯಲ್ಲಿ 13 ಸಾವಿರ ರನ್ ಪೂರೈಸಿದ ವಿರಾಟ್
Image
ಆರ್​ಸಿಬಿಗೆ ರುಚಿ ಹತ್ತಿಸದ ಫಿಲ್ ಸಾಲ್ಟ್ ಆಟ
Image
ಟಾಸ್ ಗೆದ್ದ ಮುಂಬೈ: ಬುಮ್ರಾ ಕಣಕ್ಕೆ, ಆರ್​ಸಿಬಿ ಪ್ಲೇಯಿಂಗ್ XI ಇಲ್ಲಿದೆ
Image
ಪಾಕ್ ತಂಡದ ಎಲ್ಲಾ ಆಟಗಾರರಿಗೆ ದಂಡ ವಿಧಿಸಿದ ಐಸಿಸಿ

ಜಿತೇಶ್ ಶರ್ಮಾ ಸಿಡಿಸಿದ ಸಿಕ್ಸ್ ವಿಡಿಯೋ:

ಮುಂಬೈ ಬೌಲರ್​ಗಳ ಚೆಂಡಾಡಿದ ಜಿತೇಶ್ ಅವರ ಈ ಆಟ ನೋಡಲು ಥೇಟ್ ದಿನೇಶ್ ಕಾರ್ತಿಕ್​ರಂತೇ ಇತ್ತು. ಕಳೆದ ಸೀಸನ್​ಗಳಲ್ಲೆಲ್ಲ ಕಾರ್ತಿಕ್ ಆರ್​ಸಿಬಿಗಾಗಿ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದರು. ಅಂತಿಮ ಹಂತದಲ್ಲಿ ಬಂದು ಸಿಕ್ಸರ್​ಗಳ ಮಳೆ ಸುರಿಸಿ ತಂಡಕ್ಕೆ ನೆರವಾಗುತ್ತಿದ್ದರು. ಈ ಬಾರಿ ಅವರ ಸ್ಥಾನ ಯಾರು ತುಂಬ ಬಹುದು ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಜಿತೇಶ್ ಶರ್ಮಾ ಮೂಲಕ ಉತ್ತರ ಸಿಕ್ಕಿದೆ. ಕಾರ್ತಿಕ್​ರಂತೆ ಮಿಡ್ ವಿಕೆಟ್​ ಮೇಲೆ, ಲಾಂಗ್ ಆನ್ ಮೇಲೆ ಶಾಟ್ ಬಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ ಜಿತೇಶ್.

IPL 2025: ಬುಮ್ರಾರನ್ನು ಸಿಕ್ಸರ್ ಮೂಲಕ ಸ್ವಾಗತಿಸಿದ ಕಿಂಗ್ ಕೊಹ್ಲಿ; ವಿಡಿಯೋ ನೋಡಿ

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಮೊದಲ ಓವರ್​ನ 2ನೇ ಎಸೆತದಲ್ಲಿ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡಿತು. ಆದರೆ, ಎರಡನೇ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಅದ್ಭುತ ಆಟವಾಡಿದರು. ಪವರ್ ಪ್ಲೇಯನ್ನು ಅತ್ಯುತ್ತಮವಾಗಿ ಉಪಯೋಗಿಸಿದ ಇವರು 6 ಓವರ್ ಆಗುವ ಹೊತ್ತಿಗೆ ತಂಡದ ಮೊತ್ತವನ್ನು 70ರ ಅಂಚಿಗೆ ತಂದಿಟ್ಟರು. ಪಡಿಕ್ಕಲ್ 22 ಎಸೆತಗಳಲ್ಲಿ 37 ರನ್ ಸಿಡಿಸಿ ಔಟಾದರು.

ನಂತರ ನಾಯಕ ರಜತ್ ಪಾಟಿದಾರ್ ಜೊತೆಯಾದ ಕೊಹ್ಲಿ ಅದೇ ವೇಗದಲ್ಲಿ ರನ್ ಕಲೆಹಾಕಿದರು. ಕೊಹ್ಲಿ 42 ಎಸೆತಗಳಲ್ಲಿ 8 ಫೋರ್, 2 ಸಿಕ್ಸರ್​ನೊಂದಿಗೆ 67 ರನ್ ಬಾರಿಸಿದರೆ, ರಜತ್ 32 ಎಸೆತಗಳಲ್ಲಿ 5 ಫೋರ್, 4 ಸಿಕ್ಸರ್​ನೊಂದಿಗೆ 64 ರನ್ ಚಚ್ಚಿದರು. ಈ ಮೂಲಕ ಆರ್​ಸಿಬಿ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 221 ರನ್ ಕಲೆಹಾಕಿತು. ಮುಂಬೈ ಪರ ಟ್ರೆಂಟ್ ಬೌಲ್ಟ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 2 ವಿಕೆಟ್ ಕಿತ್ತರೆ ವಿಘ್ನೇಶ್ ಪುತ್ತೂರ್ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು