AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಗೆಲುವಿನ ಗುಟ್ಟು ರಟ್ಟು ಮಾಡಿದ ಜಿತೇಶ್ ಶರ್ಮಾ

IPL 2026 RCB vs PBKS: ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 222 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಭರ್ಜರಿ ಜಯ ಸಾಧಿಸಿದೆ.

RCB ತಂಡದ ಗೆಲುವಿನ ಗುಟ್ಟು ರಟ್ಟು ಮಾಡಿದ ಜಿತೇಶ್ ಶರ್ಮಾ
Jitesh Sharma (2)
ಝಾಹಿರ್ ಯೂಸುಫ್
|

Updated on:May 18, 2026 | 2:26 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ 9 ಪಂದ್ಯಗಳನ್ನು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​​ಸಿಬಿ 20 ಓವರ್​ಗಳಲ್ಲಿ 222 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಗೆಲುವು ಸಾಧಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ಹಂಗಾಮಿ ನಾಯಕ ಜಿತೇಶ್ ಶರ್ಮಾ,  ಈ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ನಾವು ಸಂಪೂರ್ಣ ನಿಯಂತ್ರಣ ಹೊಂದಿದ್ದೆವು. ಇನಿಂಗ್ಸ್‌ನ ಮಧ್ಯದ ವೇಳೆಗೆ ತಂಡವು ಯಾವುದೇ ಒತ್ತಡದಲ್ಲಿ ಇರಲಿಲ್ಲ. ಮೊದಲು ಬ್ಯಾಟ್ ಮಾಡಿದ ತಮ್ಮದೇ ತಂಡದ ಬ್ಯಾಟರ್‌ಗಳು ಪಿಚ್ ಹೇಗಿದೆ ಎಂಬ ನಿಖರವಾದ ಮಾಹಿತಿ ನೀಡಿದ್ದರು. ಈ ಫೀಡ್‌ಬ್ಯಾಕ್ ಆಧಾರದ ಮೇಲೆ ಎದುರಾಳಿ ಬ್ಯಾಟರ್‌ಗಳಿಗೆ ತಕ್ಕಂತೆ ವಿಶೇಷ ಬೌಲಿಂಗ್ ಯೋಜನೆಗಳನ್ನು ರೂಪಿಸಿ, ಅದನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ್ದಾಗಿ ಎಂದು ತಿಳಿಸಿದ್ದಾರೆ.

ಇದೇ ವೇಳೆ ನಾಯಕತ್ವದ ಜವಾಬ್ದಾರಿಯ ಬಗ್ಗೆ ಮಾತನಾಡಿದ ಜಿತೇಶ್ ಶರ್ಮಾ, ಇದು ನನ್ನ ಕೆಲಸದ ಒಂದು ಭಾಗ. ಮ್ಯಾನೇಜ್‌ಮೆಂಟ್ ನೀಡಿದ ಜವಾಬ್ದಾರಿಗೆ ನೂರಕ್ಕೆ ನೂರರಷ್ಟು ಶ್ರಮವನ್ನು ಹಾಕಿದ್ದೇನೆ. ವಿಕೆಟ್ ಕೀಪಿಂಗ್ ಜೊತೆಗೆ ನಾಯಕತ್ವ ನಿಭಾಯಿಸುವಾಗ ತಂಡದಲ್ಲಿದ್ದ ಹಿರಿಯ ಆಟಗಾರರು ತಮಗೆ ಸಾಕಷ್ಟು ಮಾರ್ಗದರ್ಶನ ನೀಡಿದರು. ಹೀಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಆರ್​ಸಿಬಿ ತಂಡದಲ್ಲಿ  ಅನುಭವಿ ಆಟಗಾರರು ಇರುವುದು ನಮ್ಮ ಸೌಭಾಗ್ಯ. ಮೈದಾನದಲ್ಲಿ ಅವರು ನೀಡಿದ ಬೆಂಬಲ ಅತ್ಯುತ್ತಮ ಅನುಭವವಾಗಿತ್ತು. ಅವರ ಬೆಂಬಲದೊಂದಿಗೆ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದೇನೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

ಇನ್ನು ಮುಂದಿನ ಪಂದ್ಯದಲ್ಲಿ ರಜತ್ ಪಾಟಿದಾರ್ ನಾಯಕನಾಗಿ ಕಣಕ್ಕಿಳಿಯುವುದನ್ನು ಖಚಿತಡಪಡಿಸಿರುವ ಜಿತೇಶ್ ಶರ್ಮಾ, ನಮ್ಮ ಕ್ಯಾಪ್ಟನ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಪಂದ್ಯdಲ್ಲಿ ಆರ್​ಸಿಬಿ ತಂಡವನ್ನು ಅವರೇ ಮುನ್ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: IPL 2026: CSK ಗೆದ್ದರೆ RCB ಗೆ ಪ್ಲಸ್ ಪಾಯಿಂಟ್..!

ಕೊನೆಯದಾಗಿ ಆರ್​ಸಿಬಿ ತಂಡದ ಗೆಲುವಿನ ಗುಟ್ಟನ್ನು ಬಹಿರಂಗಪಡಿಸಿದ ಜಿತೇಶ್ ಶರ್ಮಾ, “ಆರ್​ಸಿಬಿ ಮಂತ್ರ ಅತ್ಯಂತ ಸರಳವಾಗಿದೆ. ನಾವು ಮುಂದಿನ ಪಂದ್ಯಗಳ ಬಗ್ಗೆ ಅತಿಯಾಗಿ ಯೋಚಿಸದೆ, ‘ಒಂದೊಂದೇ ಪಂದ್ಯದ ಮೇಲೆ ಗಮನ’ ಹರಿಸುತ್ತೇವೆ. ಅಲ್ಲದೆ ಪ್ರತಿ ಪಂದ್ಯದಲ್ಲೂ ನಮ್ಮ ಅತ್ಯುತ್ತಮ ಕ್ರಿಕೆಟ್ ಆಡಲು ಬಯಸುತ್ತೇವೆ. ಇದುವೇ ನಮ್ಮ ಯಶಸ್ಸಿನ ಗುಟ್ಟು ಎಂದಿದ್ದಾರೆ.

ಒಟ್ಟಾರೆಯಾಗಿ, ಕಠಿಣ ಪರಿಸ್ಥಿತಿಯಲ್ಲೂ ಜಿತೇಶ್ ಶರ್ಮಾ ತೋರಿದ ಪ್ರಬುದ್ಧ ನಾಯಕತ್ವ ಮತ್ತು ಹಿರಿಯ ಆಟಗಾರರ ಒಗ್ಗಟ್ಟು ಆರ್​ಸಿಬಿ ತಂಡದ ಯಶಸ್ಸಿಗೆ ಕಾರಣವಾಗಿದೆ. ಅಲ್ಲದೆ ಮುಂದಿನ ಪಂದ್ಯದಲ್ಲಿ ರಜತ್ ಪಾಟೀದಾರ್ ಅವರ ಸೇರ್ಪಡೆಯೊಂದಿಗೆ ತಂಡವು ಮತ್ತಷ್ಟು ಬಲಗೊಳ್ಳಲಿದ್ದು, ಈ ಮೂಲಕ ಆರ್​ಸಿಬಿ 20 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸುವ ಇರಾದೆಯಲ್ಲಿದೆ.

Published On - 2:24 pm, Mon, 18 May 26

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ