AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ರಾಜಸ್ಥಾನ ತಂಡಕ್ಕೆ ಬಿಗ್ ಶಾಕ್! ತಂಡದ ಸ್ಟಾರ್ ಬ್ಯಾಟ್ಸ್​ಮನ್ ಜೊತೆಗೆ ಬೌಲರ್​ ಕೂಡ ಪಂದ್ಯಾವಳಿಗೆ ಗೈರು

IPL 2021: ಫ್ರಾಂಚೈಸಿ ಬಟ್ಲರ್ ಬದಲಿಗೆ ನ್ಯೂಜಿಲೆಂಡ್ನ ಗ್ಲೆನ್ ಫಿಲಿಪ್ಸ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದೆ. ಅವರು ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬಾರ್ಬಡೋಸ್ ರಾಯಲ್ಸ್ ಫ್ರಾಂಚೈಸ್‌ನ ಭಾಗವಾಗಿದ್ದಾರೆ.

IPL 2021: ರಾಜಸ್ಥಾನ ತಂಡಕ್ಕೆ ಬಿಗ್ ಶಾಕ್! ತಂಡದ ಸ್ಟಾರ್ ಬ್ಯಾಟ್ಸ್​ಮನ್ ಜೊತೆಗೆ ಬೌಲರ್​ ಕೂಡ ಪಂದ್ಯಾವಳಿಗೆ ಗೈರು
ಜೋಸ್ ಬಟ್ಲರ್
Follow us
TV9 Web
| Updated By: ಪೃಥ್ವಿಶಂಕರ

Updated on: Aug 21, 2021 | 9:43 PM

ಸೆಪ್ಟೆಂಬರ್ 19 ರಿಂದ ಐಪಿಎಲ್ 14 ನೇ (ಐಪಿಎಲ್ -14) ಸೀಸನ್ ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಇಂಗ್ಲೆಂಡ್‌ನ ಜೋಸ್ ಬಟ್ಲರ್ ಉಳಿದ ಐಪಿಎಲ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಫ್ರ್ಯಾಂಚೈಸ್ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದೆ. ಬಟ್ಲರ್ ಹೊರಗಿರುವ ಕಾರಣವೆಂದರೆ ಅವರ ಹೆಂಡತಿ ಇನ್ನೊಂದು ಮಗುವಿಗೆ ಜನ್ಮ ನೀಡಲಿದ್ದಾರೆ. ಅಂತಹ ಸಮಯದಲ್ಲಿ ಅವರು ತನ್ನ ಹೆಂಡತಿಯೊಂದಿಗೆ ಇರಲು ಬಯಸುತ್ತಿರುವುದರಿಂದ ಅವರು ಪಂದ್ಯಾವಳಿಗೆ ಅಲಭ್ಯರಾಗಲಿದ್ದಾರೆ. ಐಪಿಎಲ್ -14 ರ ಮೊದಲಾರ್ಧದಲ್ಲಿ ರಾಜಸ್ಥಾನ ಪರ ಬಟ್ಲರ್ ಏಳು ಪಂದ್ಯಗಳನ್ನು ಆಡಿ 254 ರನ್ ಗಳಿಸಿದರು. ಈ ಸಮಯದಲ್ಲಿ, ಅವರು ಶತಕವನ್ನೂ ಗಳಿಸಿದರು, ಇದು ಅವರ ಐಪಿಎಲ್ ವೃತ್ತಿಜೀವನದ ಮೊದಲ ಶತಕವಾಗಿದೆ.

ಫ್ರಾಂಚೈಸಿ ಬಟ್ಲರ್ ಬದಲಿಗೆ ನ್ಯೂಜಿಲೆಂಡ್ನ ಗ್ಲೆನ್ ಫಿಲಿಪ್ಸ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದೆ. ಅವರು ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬಾರ್ಬಡೋಸ್ ರಾಯಲ್ಸ್ ಫ್ರಾಂಚೈಸ್‌ನ ಭಾಗವಾಗಿದ್ದಾರೆ. ಫಿಲಿಪ್ಸ್ 2017 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಐ ಸರಣಿಯೊಂದಿಗೆ ಅಂತರಾಷ್ಟ್ರೀಯ ಪಾದಾರ್ಪಣೆ ಮಾಡಿದರು. ಅವರು 25 ಟಿ 20 ಪಂದ್ಯಗಳಲ್ಲಿ 506 ರನ್ ಗಳಿಸಿದ್ದಾರೆ ಮತ್ತು ಈ ಅವಧಿಯಲ್ಲಿ 149.70 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಪ್ರಸ್ತುತ ರಾಜಸ್ಥಾನ ಐದನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ, ಅವರು ಮೂರರಲ್ಲಿ ಗೆದ್ದಿದ್ದಾರೆ ಮತ್ತು ನಾಲ್ಕರಲ್ಲಿ ಸೋತಿದ್ದಾರೆ.

ಬಟ್ಲರ್ ಹೊರತಾಗಿ, ಆರ್ಚರ್ ಕೂಡ ಔಟ್ ಅದೇ ಸಮಯದಲ್ಲಿ, ಫ್ರಾಂಚೈಸಿ ಬಟ್ಲರ್ ಜೊತೆಗೆ ಜೊಫ್ರಾ ಆರ್ಚರ್ ಕೂಡ ಐಪಿಎಲ್​ನ ಉಳಿದ ಪಂದ್ಯಗಳನ್ನು ಆಡುವುದಿಲ್ಲ ಎಂದು ಹೇಳಿದೆ. ಆರ್ಚರ್ ಗಾಯದಿಂದಾಗಿ ಐಪಿಎಲ್‌ನಲ್ಲಿ ಆಡುವುದಿಲ್ಲ. ಅವರು ಪ್ರಸ್ತುತ ಭಾರತದ ವಿರುದ್ಧ ಆಡುತ್ತಿರುವ ಟೆಸ್ಟ್ ಸರಣಿಯ ಒಂದು ಭಾಗವಾಗಿದ್ದಾರೆ. ಆರ್ಚರ್ ಉತ್ತಮ ಆರೋಗ್ಯ ಮತ್ತು ಗಾಯದಿಂದ ಚೇತರಿಸಿಕೊಳ್ಳಬೇಕೆಂದು ಫ್ರಾಂಚೈಸ್ ಹಾರೈಸಿದೆ. ಹಾಗೆಯೇ, ಜೋಸ್ ಬಟ್ಲರ್ ಮತ್ತು ಅವರ ಪತ್ನಿಗೆ ಅವರ ಎರಡನೇ ಮಗುವಿಗೆ ಶುಭಾಶಯ ತಿಳಿಸಿದೆ.

ಕೋವಿಡ್‌ನಿಂದಾಗಿ ಐಪಿಎಲ್ ನಿಲ್ಲಿಸಲಾಯಿತು ಐಪಿಎಲ್‌ನ 14 ನೇ ಸೀಸನ್ ಅನ್ನು ಭಾರತದ ಆರು ನಗರಗಳಲ್ಲಿ ಆಡಲಾಗುತ್ತಿತ್ತು. ಆದರೆ ಮೇ ಮೊದಲ ವಾರದಲ್ಲಿ, ಆಟಗಾರರಿಗೆ ಸೋಂಕು ತಗುಲಿದ ನಂತರ ಪಂದ್ಯಾವಳಿಯನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಕೋಲ್ಕತ್ತಾ ನೈಟ್ ರೈಡರ್ಸ್‌ನ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಈ ವೈರಸ್ ಸೋಂಕಿಗೆ ಒಳಗಾಗಿದ್ದರು. ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಅದಕ್ಕಾಗಿಯೇ ಪಂದ್ಯಾವಳಿಯನ್ನ ನಿಲ್ಲಿಸಲಾಯಿತು. ಈಗ ಲೀಗ್‌ನ ಉಳಿದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ. ಲೀಗ್‌ನ ಫೈನಲ್ ಅಕ್ಟೋಬರ್ 15 ರಂದು ನಡೆಯಲಿದೆ.

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್