AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Michael Vaughan: ಈ ಆಟಗಾರ RCB ತಂಡದ ನಾಯಕನಾಗಬೇಕು

ಆರ್​ಸಿಬಿ ಫ್ರಾಂಚೈಸಿ ಮುಂದಿನ ಸೀಸನ್​ಗಾಗಿ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್​ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಅಂದರೆ ಈ ಅತಿರಥ ಮಹಾರಥರನ್ನು ಮುನ್ನಡೆಸುವ ಒಬ್ಬ ಅತ್ಯುತ್ತಮ ನಾಯಕನ ಅವಶ್ಯಕತೆ ಆರ್​ಸಿಬಿಗಿದೆ.

Michael Vaughan: ಈ ಆಟಗಾರ RCB ತಂಡದ ನಾಯಕನಾಗಬೇಕು
RCB
TV9 Web
| Updated By: ಝಾಹಿರ್ ಯೂಸುಫ್|

Updated on: Oct 15, 2021 | 5:09 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 ಗೆ (IPL 2021) ಇಂದು ತೆರೆ ಬೀಳಲಿದೆ. ಇದರ ಬೆನ್ನಲ್ಲೇ ಐಪಿಎಲ್​ ಸೀಸನ್​ 15ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಿದೆ. ಇತ್ತ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಹೊಸ ನಾಯಕನ ಹುಡುಕಾಟದಲ್ಲಿದೆ. ಈ ಬಾರಿಯ ಐಪಿಎಲ್​ ಮೂಲಕ ತಂಡದ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ಘೋಷಿಸಿದ್ದು, ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಆದರೆ ಆ ನಾಯಕ ಯಾರಾಗಲಿದ್ದಾರೆ ಎಂಬುದೇ ಕುತೂಹಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಮುಂದಿನ ಸೀಸನ್​ಗಾಗಿ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್​ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಅಂದರೆ ಈ ಅತಿರಥ ಮಹಾರಥರನ್ನು ಮುನ್ನಡೆಸುವ ಒಬ್ಬ ಅತ್ಯುತ್ತಮ ನಾಯಕನ ಅವಶ್ಯಕತೆ ಆರ್​ಸಿಬಿಗಿದೆ. ಹೀಗಾಗಿಯೇ ಇಂಗ್ಲೆಂಡ್​ ತಂಡದ ಮಾಜಿ ನಾಯಕ ಮೈಕಲ್ ವಾನ್ ಆ ಸ್ಥಾನವನ್ನು ಜೋಸ್ ಬಟ್ಲರ್ ತುಂಬಲಿದ್ದಾರೆ ಎಂದಿದ್ದಾರೆ.

ಪ್ರಸ್ತುತ ರಾಜಸ್ಥಾನ್ ರಾಯಲ್ಸ್​ ತಂಡದ ಭಾಗವಾಗಿರುವ ಇಂಗ್ಲೆಂಡ್ ಆಟಗಾರ ಜೋಸ್​ ಬಟ್ಲರ್ ಅವರನ್ನು ಆರ್​ಸಿಬಿ ನಾಯಕನಾಗಿ ಆಯ್ಕೆ ಮಾಡುವುದು ಸೂಕ್ತ ಎಂದು ಮೈಕಲ್ ವಾನ್ ಅಭಿಪ್ರಾಯಪಟ್ಟಿದ್ದಾರೆ. ಬಟ್ಲರ್ ಪ್ರಸ್ತುತ ಇಂಗ್ಲೆಂಡ್ ತಂಡದ ಉಪನಾಯಕ. ಮಹೇಂದ್ರ ಸಿಂಗ್ ಧೋನಿಯಂತೆ ಅವರು ಕೂಡ ಅತ್ಯುತ್ತಮ ನಾಯಕನಾಗಲಿದ್ದಾರೆ ಎಂದು ವಾನ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮೈಕೆಲ್ ವಾನ್, ಜೋಸ್ ಬಟ್ಲರ್, ಧೋನಿಯಂತೆ ವಿಕೆಟ್ ಕೀಪಿಂಗ್ ಜೊತೆ ನಾಯಕತ್ಬವನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರುವ ಆಟಗಾರ. ಒಂದು ವೇಳೆ ರಾಜಸ್ಥಾನ್ ರಾಯಲ್ಸ್​ ಫ್ರಾಂಚೈಸಿ ಬಟ್ಲರ್​ ಅನ್ನು ಬಿಡುಗಡೆ ಮಾಡಿದರೆ, ಅವರನ್ನು ಆರ್​ಸಿಬಿ ಖರೀದಿಸಬೇಕು. ಈ ಮೂಲಕ ನಾಯಕನ್ನಾಗಿ ಮಾಡುವುದು ಉತ್ತಮ. ಬಟ್ಲರ್ ಕೂಡ ಧೋನಿಯಂತೆ ಯಶಸ್ವಿ ನಾಯಕ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ ಮೈಕಲ್ ವಾನ್.

ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ

(Jos Buttler should be RCB’s next captain says Michael Vaughan)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?