AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Michael Vaughan: ಈ ಆಟಗಾರ RCB ತಂಡದ ನಾಯಕನಾಗಬೇಕು

ಆರ್​ಸಿಬಿ ಫ್ರಾಂಚೈಸಿ ಮುಂದಿನ ಸೀಸನ್​ಗಾಗಿ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್​ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಅಂದರೆ ಈ ಅತಿರಥ ಮಹಾರಥರನ್ನು ಮುನ್ನಡೆಸುವ ಒಬ್ಬ ಅತ್ಯುತ್ತಮ ನಾಯಕನ ಅವಶ್ಯಕತೆ ಆರ್​ಸಿಬಿಗಿದೆ.

Michael Vaughan: ಈ ಆಟಗಾರ RCB ತಂಡದ ನಾಯಕನಾಗಬೇಕು
RCB
TV9 Web
| Edited By: |

Updated on: Oct 15, 2021 | 5:09 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 ಗೆ (IPL 2021) ಇಂದು ತೆರೆ ಬೀಳಲಿದೆ. ಇದರ ಬೆನ್ನಲ್ಲೇ ಐಪಿಎಲ್​ ಸೀಸನ್​ 15ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಿದೆ. ಇತ್ತ ಆರ್​ಸಿಬಿ ತಂಡವು ಮುಂದಿನ ಸೀಸನ್​ಗಾಗಿ ಹೊಸ ನಾಯಕನ ಹುಡುಕಾಟದಲ್ಲಿದೆ. ಈ ಬಾರಿಯ ಐಪಿಎಲ್​ ಮೂಲಕ ತಂಡದ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ಘೋಷಿಸಿದ್ದು, ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ. ಆದರೆ ಆ ನಾಯಕ ಯಾರಾಗಲಿದ್ದಾರೆ ಎಂಬುದೇ ಕುತೂಹಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಮುಂದಿನ ಸೀಸನ್​ಗಾಗಿ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್​ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ. ಅಂದರೆ ಈ ಅತಿರಥ ಮಹಾರಥರನ್ನು ಮುನ್ನಡೆಸುವ ಒಬ್ಬ ಅತ್ಯುತ್ತಮ ನಾಯಕನ ಅವಶ್ಯಕತೆ ಆರ್​ಸಿಬಿಗಿದೆ. ಹೀಗಾಗಿಯೇ ಇಂಗ್ಲೆಂಡ್​ ತಂಡದ ಮಾಜಿ ನಾಯಕ ಮೈಕಲ್ ವಾನ್ ಆ ಸ್ಥಾನವನ್ನು ಜೋಸ್ ಬಟ್ಲರ್ ತುಂಬಲಿದ್ದಾರೆ ಎಂದಿದ್ದಾರೆ.

ಪ್ರಸ್ತುತ ರಾಜಸ್ಥಾನ್ ರಾಯಲ್ಸ್​ ತಂಡದ ಭಾಗವಾಗಿರುವ ಇಂಗ್ಲೆಂಡ್ ಆಟಗಾರ ಜೋಸ್​ ಬಟ್ಲರ್ ಅವರನ್ನು ಆರ್​ಸಿಬಿ ನಾಯಕನಾಗಿ ಆಯ್ಕೆ ಮಾಡುವುದು ಸೂಕ್ತ ಎಂದು ಮೈಕಲ್ ವಾನ್ ಅಭಿಪ್ರಾಯಪಟ್ಟಿದ್ದಾರೆ. ಬಟ್ಲರ್ ಪ್ರಸ್ತುತ ಇಂಗ್ಲೆಂಡ್ ತಂಡದ ಉಪನಾಯಕ. ಮಹೇಂದ್ರ ಸಿಂಗ್ ಧೋನಿಯಂತೆ ಅವರು ಕೂಡ ಅತ್ಯುತ್ತಮ ನಾಯಕನಾಗಲಿದ್ದಾರೆ ಎಂದು ವಾನ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮೈಕೆಲ್ ವಾನ್, ಜೋಸ್ ಬಟ್ಲರ್, ಧೋನಿಯಂತೆ ವಿಕೆಟ್ ಕೀಪಿಂಗ್ ಜೊತೆ ನಾಯಕತ್ಬವನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರುವ ಆಟಗಾರ. ಒಂದು ವೇಳೆ ರಾಜಸ್ಥಾನ್ ರಾಯಲ್ಸ್​ ಫ್ರಾಂಚೈಸಿ ಬಟ್ಲರ್​ ಅನ್ನು ಬಿಡುಗಡೆ ಮಾಡಿದರೆ, ಅವರನ್ನು ಆರ್​ಸಿಬಿ ಖರೀದಿಸಬೇಕು. ಈ ಮೂಲಕ ನಾಯಕನ್ನಾಗಿ ಮಾಡುವುದು ಉತ್ತಮ. ಬಟ್ಲರ್ ಕೂಡ ಧೋನಿಯಂತೆ ಯಶಸ್ವಿ ನಾಯಕ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ ಮೈಕಲ್ ವಾನ್.

ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ

(Jos Buttler should be RCB’s next captain says Michael Vaughan)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ