AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ಎರಡಂಕಿ ಮೊತ್ತ ಗಳಿಸಿದರೆ ಜೋಶ್ ಹೇಝಲ್​ವುಡ್ ನಾಗಾಲೋಟಕ್ಕೆ ಬ್ರೇಕ್

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 212 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ 138 ರನ್​ಗಳಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 207 ರನ್​ಗಳಿಸಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ 282 ರನ್​ಗಳ ಗುರಿ ನೀಡಿದೆ. ಈ ಬೆನ್ನತ್ತಿರುವ ಸೌತ್ ಆಫ್ರಿಕಾ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ.

ಸೌತ್ ಆಫ್ರಿಕಾ ಎರಡಂಕಿ ಮೊತ್ತ ಗಳಿಸಿದರೆ ಜೋಶ್ ಹೇಝಲ್​ವುಡ್ ನಾಗಾಲೋಟಕ್ಕೆ ಬ್ರೇಕ್
Josh Hazlewood
ಝಾಹಿರ್ ಯೂಸುಫ್
|

Updated on: Jun 14, 2025 | 8:32 AM

Share

ಫೈನಲ್ ಪಂದ್ಯದಲ್ಲಿ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಜೋಶ್ ಹೇಝಲ್​ವುಡ್​ನ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕುವ ಸನಿಹದಲ್ಲಿದೆ ಸೌತ್ ಆಫ್ರಿಕಾ ತಂಡ. ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೌತ್ ಆಫ್ರಿಕಾ 69 ರನ್​ ಕಲೆಹಾಕಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಇತಿಹಾಸದೊಂದಿಗೆ ಅತ್ತ ಕಳೆದ ಒಂದು ದಶಕದಿಂದ ಫೈನಲ್​ನಲ್ಲಿ ಸೋಲು ಕಾಣದ ಹೇಝಲ್​ವುಡ್ ಅವರ ವಿಜಯಯಾತ್ರೆಗೆ ತೆರೆಬೀಳಲಿದೆ.

ಜೋಶ್ ಹೇಝಲ್​ವುಡ್ 2012 ರಿಂದ ಒಂದೇ ಒಂದು ಫೈನಲ್ ಸೋತಿಲ್ಲ ಎಂಬುದು ವಿಶೇಷ. 2012 ರಲ್ಲಿ ನಡೆದ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಫೈನಲ್ ಆಡಿದ್ದ ಹೇಝಲ್​​ವುಡ್ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು. ಇದಾದ ಬಳಿಕ 2015 ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಕಣಕ್ಕಿಳಿದಿದ್ದ ಹೇಝಲ್​ವುಡ್ ಆಸ್ಟ್ರೇಲಿಯಾ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇನ್ನು 2020 ರ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದಾಗ ಜೋಶ್ ಹೇಝಲ್​ವುಡ್ ತಂಡದಲ್ಲಿದ್ದರು. ಹಾಗೆಯೇ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಐಪಿಎಲ್​ ಟ್ರೋಫಿ ಮುಡಿಗೇರಿಸಿದಾಗಲೂ ಹೇಝಲ್​ವುಡ್ ತಂಡದಲ್ಲಿದ್ದರು.

2021 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಜೋಶ್ ಹೇಝಲ್​ವುಡ್ ಪ್ರಮುಖ ಪಾತ್ರವಹಿಸಿದ್ದರು. ಇನ್ನು 2023 ರಲ್ಲಿ ಆಸ್ಟ್ರೇಲಿಯಾ ತಂಡದ ಏಕದಿನ ವಿಶ್ವಕಪ್ ಗೆಲ್ಲುವಲ್ಲಿಯೂ ಹೇಝಲ್​ವುಡ್ ಅವರ ಕೊಡುಗೆ ಅಪಾರ.

ಅಷ್ಟೇ ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಚಾಂಪಿಯನ್ ಪಟ್ಟಕ್ಕೇರಲು ಜೋಶ್ ಹೇಝಲ್​ವುಡ್ ಮುಖ್ಯ ಕಾರಣ.

ಹೀಗೆ ಕಳೆದ ಒಂದು ದಶಕದಿಂದ ಜೋಶ್ ಹೇಝಲ್​ವುಡ್ ಫೈನಲ್​ ಸೋಲಿನ ರುಚಿ ನೋಡಿಲ್ಲ. ಹೀಗಾಗಿಯೇ ಹೇಝಲ್​ವುಡ್ ಅವರನ್ನು ಅಂತಿಮ ಪಂದ್ಯದ ಲಕ್ಕಿ ಚಾರ್ಮ್​ ಎಂದು ಪರಿಗಣಿಸಲಾಗುತ್ತದೆ.

ಆದರೆ ಈ ಬಾರಿ ಈ ಫೈನಲ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬೀಳುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಗೆಲುವಿನ ಸನಿಹದಲ್ಲಿದ್ದು, ಶನಿವಾರ ನಡೆಯಲಿರುವ 4ನೇ ದಿನದಾಟದಲ್ಲಿ ಕೇವಲ 69 ರನ್​ಗಳಿಸಿದರೆ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳಬಹುದು.

ಇದನ್ನೂ ಓದಿ: ಭರ್ಜರಿ ಸೆಂಚುರಿಯೊಂದಿಗೆ ಹೊಸ ಇತಿಹಾಸ ರಚಿಸಿದ ಐಡೆನ್ ಮಾರ್ಕ್ರಾಮ್ 

ಅತ್ತ ಸೌತ್ ಆಫ್ರಿಕಾ ತಂಡ ಜಯಭೇರಿ ಬಾರಿಸಿದರೆ, ಕಳೆದ 13 ವರ್ಷಗಳಿಂದ ಫೈನಲ್ ಸೋಲನನ್ನು ನೋಡದ ಜೋಶ್ ಹೇಝಲ್​ವುಡ್ ಅವರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬೀಳಲಿದೆ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ