AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justin Langer: ಆಸ್ಟ್ರೇಲಿಯಾ ಹೆಡ್ ಕೋಚ್ ಸ್ಥಾನದಿಂದ ದಿಢೀರ್ ಕೆಳಗಿಳಿದ ಲ್ಯಾಂಗರ್: ಅನುಮಾನ ಮೂಡಿಸಿದ ಜಸ್ಟಿನ್ ನಡೆ

ಆಸ್ಟ್ರೇಲಿಯಾ ಪುರುಷ ತಂಡದ ಹೆಡ್ ಕೋಚ್ (Australia Head Coach) ಸ್ಥಾನದಿಂದ ಜಸ್ಟಿನ್ ಲ್ಯಾಂಗರ್ (Justin Langer) ದಿಢೀರ್ ಕೆಳಗಿಳಿದಿದ್ದಾರೆ. ಇವರ ಈ ನಡೆ ಸಾಕಷ್ಟು ಅನುಮಾನಗಳಿಗೆ ಎಡಮಾಡಿಕೊಟ್ಟಿದೆ.

Justin Langer: ಆಸ್ಟ್ರೇಲಿಯಾ ಹೆಡ್ ಕೋಚ್ ಸ್ಥಾನದಿಂದ ದಿಢೀರ್ ಕೆಳಗಿಳಿದ ಲ್ಯಾಂಗರ್: ಅನುಮಾನ ಮೂಡಿಸಿದ ಜಸ್ಟಿನ್ ನಡೆ
justin langer
TV9 Web
| Updated By: Vinay Bhat|

Updated on:Feb 05, 2022 | 9:47 AM

Share

ಕ್ರಿಕೆಟ್ ಜಗತ್ತಿನಲ್ಲಿ ಅಚ್ಚರಿ ಎಂಬಂತೆ ಆಸ್ಟ್ರೇಲಿಯಾ ಪುರುಷ ತಂಡದ ಹೆಡ್ ಕೋಚ್ (Australia Head Coach) ಸ್ಥಾನದಿಂದ ಜಸ್ಟಿನ್ ಲ್ಯಾಂಗರ್ (Justin Langer) ದಿಢೀರ್ ಕೆಳಗಿಳಿದಿದ್ದಾರೆ. ಇವರ ಈ ನಡೆ ಸಾಕಷ್ಟು ಅನುಮಾನಗಳಿಗೆ ಎಡಮಾಡಿಕೊಟ್ಟಿದೆ. ಯಾಕೆಂದರೆ ಮೊನ್ನೆಯಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಆ್ಯಷಸ್‌ (Ashes Series) ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲ್ಲುವಂತೆ ಮಾಡಲು ಲ್ಯಾಂಗರ್‌ ಬಹುಮುಖ್ಯ ಪಾತ್ರ ವಹಿಸಿದ್ದರು. ಇಲ್ಲಿ ಪ್ಯಾಟ್‌ ಕಮಿನ್ಸ್‌ ಮುಂದಾಳತ್ವದ ಆಸ್ಟ್ರೇಲಿಯಾ 4-0 ಅಂತರದ ಭರ್ಜರಿ ಜಯ ದಾಖಲಿಸಿತ್ತು. ಅಲ್ಲದೆ ಬರೋಬ್ಬರಿ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್ ಪ್ರವಾಸ ಕೈಗೊಳ್ಳುತ್ತಿದ್ದು,ಇಲ್ಲಿ ಮೂರು ಟೆಸ್ಟ್​ ಪಂದ್ಯ ಹಾಗೂ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿವೆ. ಇದಕ್ಕೂ ಮುನ್ನ ಕೋಚ್‌ ಲ್ಯಾಂಗರ್‌ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಕ್ರಿಕೆಟ್‌ನ ಮೂರೂ ಪ್ರಕಾರಗಳಿಗೆ ಆಸ್ಪ್ರೇಲಿಯಾ ತಂಡದ ನೂತನ ಪ್ರಧಾನ ಕೋಚ್‌ ಆಗಿ ಮಾಜಿ ಎಡಗೈ ಆರಂಭಕಾರ ಜಸ್ಟಿನ್‌ ಲ್ಯಾಂಗರ್‌ ಅವರನ್ನು ಕ್ರಿಕೆಟ್‌ ಆಸ್ಪ್ರೇಲಿಯಾ 2018 ಮೇನಲ್ಲಿ ಆಯ್ಕೆ ಮಾಡಿತ್ತು.

ಲ್ಯಾಂಗರ್‌ ಅವರ ಹಠಾತ್‌ ರಾಜಿನಾಮೆಗೆ ಮುಖ್ಯ ಕಾರಣ ಏನೆಂಬುದು ಬಹಿರಂಗವಾಗಿಲ್ಲ. ಅವರ ಅನುಪಸ್ಥಿತಿಯಲ್ಲಿ ಸಹಾಯಕ ಕೋಚ್‌ ಆಂಡ್ರೂ ಮೆಕ್‌ಡೊನಾಲ್ಡ್‌ ತಂಡದ ಕೋಚಿಂಗ್‌ ಜವಾಬ್ದಾರಿ ಹೊರುವ ಸಾಧ್ಯತೆ ಇದೆ. ಕ್ರೀಡಾ ನಿರ್ವಹಣಾ ಸಂಸ್ಥೆಯಾದ ಡಿಎಸ್‌ಇಜಿ ಮತ್ತು ಕ್ರಿಕೆಟ್‌ ಆಸ್ಟ್ರೇಲಿಯಾ ಲ್ಯಾಂಗರ್ ರಾಜಿನಾಮೆ ಸುದ್ದಿಯನ್ನು ಖಚಿತ ಪಡಿಸಿದೆ. “ಆಸ್ಟ್ರೇಲಿಯಾ ಪುರುಷರ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ಜಸ್ಟಿನ್‌ ಲ್ಯಾಂಗರ್‌ ಇಂದು ಮುಂಜಾನೆ ರಾಜೀನಾಮೆ ಘೋಷಿಸಿದ್ದಾರೆ,” ಎಂದು ಹೇಳಿದೆ.

2019ರಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಮೂಲಕ ಆಸ್ಟ್ರೇಲಿಯಾ ಹೆಡ್ ಕೋಚ್ ಜಸ್ಟಿನ್ ಲ್ಯಾಂಗರ್ ನೇತೃತ್ವದಲ್ಲಿ ತನ್ನ ಮೊದಲನೇ ಐಸಿಸಿ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತು. ಹಾಗೂ ಆ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಸೆಮಿಫೈನಲ್ ಹಂತವನ್ನು ತಲುಪಿ ಫೈನಲ್ ಪ್ರವೇಶಿಸಿರುವ ಅವಕಾಶವನ್ನು ಕೊನೆಯಲ್ಲಿ ಕೈ ತಪ್ಪಿಸಿಕೊಂಡಿತ್ತು. ಹೀಗೆ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದ್ದ ಆಸ್ಟ್ರೇಲಿಯಾ ನಂತರ ಅದೇ ವರ್ಷದಲ್ಲಿ ಇಂಗ್ಲೆಂಡ್ ನೆಲದಲ್ಲಿ ನಡೆದ ಆ್ಯಶಸ್ ಸರಣಿಯಲ್ಲಿ ಆಂಗ್ಲರನ್ನು ಬಗ್ಗುಬಡಿದಿತ್ತು.

2021 ರಲ್ಲಿ ಯುಎಇ ಆತಿಥ್ಯದಲ್ಲಿ ನಡೆದ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಜಸ್ಟಿನ್‌ ಲ್ಯಾಂಗರ್‌ ಮಾರ್ಗದರ್ಶನದಲ್ಲಿ ಆಸ್ಟ್ರೇಲಿಯಾ ತಂಡ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡ ವಿಶೇಷ ಸಾಧನೆ ಮಾಡಿತ್ತು. ಅಲ್ಲದೆ ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ನಡೆಯಲಿದೆ.

24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್​ ಪ್ರವಾಸ:

ಬರೋಬ್ಬರಿ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್​ ಪ್ರವಾಸ ಕೈಗೊಳ್ಳುತ್ತಿದ್ದು,ಇಲ್ಲಿ ಮೂರು ಟೆಸ್ಟ್​ ಪಂದ್ಯ ಹಾಗೂ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿವೆ. ಈ ಕುರಿತು ಮಾಹಿತಿ ನೀಡಿದ ಕ್ರಿಕೆಟ್​ ಆಸ್ಟ್ರೇಲಿಯಾ, ಮಾರ್ಚ್ 4ರಿಂದ ಉಭಯ ತಂಡಗಳ ನಡುವಿನ ಕ್ರಿಕೆಟ್​ ಟೂರ್ನಿ ಆರಂಭಗೊಳ್ಳಲಿದೆ ಎಂದು ತಿಳಿಸಿದೆ. ಆಸ್ಟ್ರೇಲಿಯಾ 1998ರಲ್ಲಿ ಕೊನೆಯದಾಗಿ ಪಾಕಿಸ್ತಾನದ ಪ್ರವಾಸ ಕೈಗೊಂಡಿತ್ತು. ಆ ಬಳಿಕ 2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ಭಯೋತ್ಪಾದಕರ ದಾಳಿ ನಡೆದ ಬಳಿಕ ಅನೇಕ ವರ್ಷಗಳ ಕಾಲ ಯಾವುದೇ ತಂಡಗಳು ಇಲ್ಲಿಗೆ ಪ್ರವಾಸ ಕೈಗೊಂಡಿರಲಿಲ್ಲ.

ಇಂಗ್ಲೆಂಡ್‌ ಕೋಚ್‌ ಸಿಲ್ವರ್‌ವುಡ್‌ ವಜಾ:

ಆ್ಯಷಸ್ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ ತಂಡ ಅತ್ಯಂತ ಹೀನಾಯ ಪ್ರದರ್ಶನ ತೋರಿದ ಕಾರಣ ಹೆಡ್‌ ಕೋಚ್‌ ಸ್ಥಾನದಿಂದ ಕ್ರಿಸ್‌ ಸಿಲ್ವರ್‌ವುಡ್‌ ಅವರನ್ನು ವಜಾಗೊಳಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ಆಯಶ್ಲೆ ಜೈಲ್ಸ್‌ ಅವರನ್ನು ಕೆಳಗಿಳಿಸಿದ 24 ಗಂಟೆಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಆಸ್ಟ್ರೇಲಿಯ ವಿರುದ್ಧ ಇಂಗ್ಲೆಂಡ್‌ 0-4 ಅಂತರದ ಹೀನಾಯ ಸೋಲನುಭವಿಸಿತ್ತು. “ಇಷ್ಟು ಕಾಲ ಇಂಗ್ಲೆಂಡ್‌ ತಂಡದ ಕೋಚ್‌ ಆಗಿ ಕಾರ್ಯ ನಿರ್ವಹಿಸಿರುವುದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಇಲ್ಲಿನ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಜತೆ ಕೆಲಸ ಮಾಡಿರುವುದಕ್ಕೆ ಖುಷಿ ಇದೆ’ ಎಂದು ಸಿಲ್ವರ್‌ವುಡ್‌ ಹೇಳಿದ್ದಾರೆ.

U19 World Cup Final: ಇಂದು ಅಂಡರ್-19 ವಿಶ್ವಕಪ್ ಫೈನಲ್: 5ನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಭಾರತಕ್ಕೆ ಇಂಗ್ಲೆಂಡ್ ಸವಾಲು

Published On - 8:48 am, Sat, 5 February 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ