ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್

Kane Williamson: ಸೆಮಿಫೈನಲ್ ತಲುಪುವ ಹಾದಿಯಲ್ಲಿ ನಾವು ಒಂದೆರಡು ಸೋಲುಗಳನ್ನು ಮತ್ತು ಕೆಲವು ಗೆಲುವುಗಳನ್ನು ನೋಡಿದ್ದೇವೆ. ಈ ಗೆಲುವುಗಳು ನಮ್ಮನ್ನು ಈ ಸ್ಥಾನದಲ್ಲಿ ಇರಿಸಿದೆ. ಹಾಗಾಗಿ ನಾವು ಮುಂದಿರುವ ಸವಾಲಿನ ಬಗ್ಗೆ ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್
Kane Williamson
Follow us
| Updated By: ಝಾಹಿರ್ ಯೂಸುಫ್

Updated on: Nov 14, 2023 | 9:01 PM

ಏಕದಿನ ವಿಶ್ವಕಪ್​ 2023ರ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡರು. ಮಂಗಳವಾರ ನಡೆದ ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿವೀಸ್ ನಾಯಕ, ಭಾರತದ ವಿರುದ್ಧ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೆಮಿಫೈನಲ್​ನಲ್ಲಿ ಬಲಿಷ್ಠ ಭಾರತದ ವಿರುದ್ಧ ಕಣಕ್ಕಿಳಿಯುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ತಾಳ್ಮೆಯಿಂದ ಉತ್ತರಿಸಿದ ಕೇನ್ ವಿಲಿಯಮ್ಸನ್, ಟೀಮ್ ಇಂಡಿಯಾ ವಿರುದ್ಧ ಆಡುವುದು ಕಠಿಣ ಸವಾಲು. ಏಕೆಂದರೆ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ. ಆದರೆ ಫೈನಲ್​ಗೆ (ಸೆಮಿ ಫೈನಲ್​) ತಲುಪಿದರೆ ಎಲ್ಲವೂ ಮತ್ತೆ ಪ್ರಾರಂಭವಾಗುತ್ತದೆ. ಇಲ್ಲಿ ಆ ದಿನ ಒಂದು ತಂಡವಾಗಿ ಹೇಗೆ ಆಡುತ್ತೀರಿ ಎಂಬುದು ಮುಖ್ಯವಾಗುತ್ತದೆ. ಹೀಗಾಗಿ ನಾವು ಒಂದು ತಂಡವಾಗಿ ನಮ್ಮ ಗುರಿಯತ್ತ ಹೆಚ್ಚು ಗಮಹರಿಸುತ್ತೇವೆ ಎಂದು ತಿಳಿಸಿದ್ದಾರೆ.

ಸೆಮಿಫೈನಲ್ ತಲುಪುವ ಹಾದಿಯಲ್ಲಿ ನಾವು ಒಂದೆರಡು ಸೋಲುಗಳನ್ನು ಮತ್ತು ಕೆಲವು ಗೆಲುವುಗಳನ್ನು ನೋಡಿದ್ದೇವೆ. ಈ ಗೆಲುವುಗಳು ನಮ್ಮನ್ನು ಈ ಸ್ಥಾನದಲ್ಲಿ ಇರಿಸಿದೆ. ಹಾಗಾಗಿ ನಾವು ಮುಂದಿರುವ ಸವಾಲಿನ ಬಗ್ಗೆ ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಇದೇ ವೇಳೆ ನ್ಯೂಝಿಲೆಂಡ್ ತಂಡದ 15 ಆಟಗಾರರು ಕೂಡ ಫಿಟ್ ಆಗಿದ್ದಾರೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳಲು ಉತ್ತಮ ಆಯ್ಕೆಗಳಿವೆ. ಸೆಮಿಫೈನಲ್​ಗೂ ಮುನ್ನ ಪಿಚ್ ನೋಡಿ, ಆ ಬಳಿಕ ಮೌಲ್ಯಮಾಪನ ಮಾಡಿ ಆಡುವ ಬಳಗವನ್ನು ರೂಪಿಸಲಿದ್ದೇವೆ ಎಂದು ನ್ಯೂಝಿಲೆಂಡ್ ನಾಯಕ ತಿಳಿಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್