AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್

Kane Williamson: ಸೆಮಿಫೈನಲ್ ತಲುಪುವ ಹಾದಿಯಲ್ಲಿ ನಾವು ಒಂದೆರಡು ಸೋಲುಗಳನ್ನು ಮತ್ತು ಕೆಲವು ಗೆಲುವುಗಳನ್ನು ನೋಡಿದ್ದೇವೆ. ಈ ಗೆಲುವುಗಳು ನಮ್ಮನ್ನು ಈ ಸ್ಥಾನದಲ್ಲಿ ಇರಿಸಿದೆ. ಹಾಗಾಗಿ ನಾವು ಮುಂದಿರುವ ಸವಾಲಿನ ಬಗ್ಗೆ ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಫೈನಲ್​ಗೆ ತಲುಪಿದಾಗ, ಎಲ್ಲವೂ ಮತ್ತೆ ಶುರುವಾಗುತ್ತೆ: ಕೇನ್ ವಿಲಿಯಮ್ಸನ್
Kane Williamson
TV9 Web
| Edited By: |

Updated on: Nov 14, 2023 | 9:01 PM

Share

ಏಕದಿನ ವಿಶ್ವಕಪ್​ 2023ರ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡರು. ಮಂಗಳವಾರ ನಡೆದ ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿವೀಸ್ ನಾಯಕ, ಭಾರತದ ವಿರುದ್ಧ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೆಮಿಫೈನಲ್​ನಲ್ಲಿ ಬಲಿಷ್ಠ ಭಾರತದ ವಿರುದ್ಧ ಕಣಕ್ಕಿಳಿಯುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ತಾಳ್ಮೆಯಿಂದ ಉತ್ತರಿಸಿದ ಕೇನ್ ವಿಲಿಯಮ್ಸನ್, ಟೀಮ್ ಇಂಡಿಯಾ ವಿರುದ್ಧ ಆಡುವುದು ಕಠಿಣ ಸವಾಲು. ಏಕೆಂದರೆ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ. ಆದರೆ ಫೈನಲ್​ಗೆ (ಸೆಮಿ ಫೈನಲ್​) ತಲುಪಿದರೆ ಎಲ್ಲವೂ ಮತ್ತೆ ಪ್ರಾರಂಭವಾಗುತ್ತದೆ. ಇಲ್ಲಿ ಆ ದಿನ ಒಂದು ತಂಡವಾಗಿ ಹೇಗೆ ಆಡುತ್ತೀರಿ ಎಂಬುದು ಮುಖ್ಯವಾಗುತ್ತದೆ. ಹೀಗಾಗಿ ನಾವು ಒಂದು ತಂಡವಾಗಿ ನಮ್ಮ ಗುರಿಯತ್ತ ಹೆಚ್ಚು ಗಮಹರಿಸುತ್ತೇವೆ ಎಂದು ತಿಳಿಸಿದ್ದಾರೆ.

ಸೆಮಿಫೈನಲ್ ತಲುಪುವ ಹಾದಿಯಲ್ಲಿ ನಾವು ಒಂದೆರಡು ಸೋಲುಗಳನ್ನು ಮತ್ತು ಕೆಲವು ಗೆಲುವುಗಳನ್ನು ನೋಡಿದ್ದೇವೆ. ಈ ಗೆಲುವುಗಳು ನಮ್ಮನ್ನು ಈ ಸ್ಥಾನದಲ್ಲಿ ಇರಿಸಿದೆ. ಹಾಗಾಗಿ ನಾವು ಮುಂದಿರುವ ಸವಾಲಿನ ಬಗ್ಗೆ ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಇದೇ ವೇಳೆ ನ್ಯೂಝಿಲೆಂಡ್ ತಂಡದ 15 ಆಟಗಾರರು ಕೂಡ ಫಿಟ್ ಆಗಿದ್ದಾರೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳಲು ಉತ್ತಮ ಆಯ್ಕೆಗಳಿವೆ. ಸೆಮಿಫೈನಲ್​ಗೂ ಮುನ್ನ ಪಿಚ್ ನೋಡಿ, ಆ ಬಳಿಕ ಮೌಲ್ಯಮಾಪನ ಮಾಡಿ ಆಡುವ ಬಳಗವನ್ನು ರೂಪಿಸಲಿದ್ದೇವೆ ಎಂದು ನ್ಯೂಝಿಲೆಂಡ್ ನಾಯಕ ತಿಳಿಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ