AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡಕ್ಕೆ ಬಿಗ್ ಶಾಕ್: ಕೈಕೊಟ್ಟ ರವೀಂದ್ರ ಜಡೇಜಾ..?

Ravindra Jadeja: ಐಪಿಎಲ್​ನಲ್ಲಿ ಇದುವರೆಗೆ 210 ಪಂದ್ಯಗಳನ್ನು ಆಡಿರುವ ಜಡೇಜಾ 132 ವಿಕೆಟ್ ಪಡೆದಿದ್ದಾರೆ. 16 ರನ್‌ಗೆ 5 ವಿಕೆಟ್ ಪಡೆದದ್ದು ಅತ್ಯುತ್ತಮ ಪ್ರದರ್ಶನ. ಹಾಗೆಯೇ 2502 ರನ್ ಕೂಡ ಗಳಿಸಿದ್ದಾರೆ.

IPL 2023: CSK ತಂಡಕ್ಕೆ ಬಿಗ್ ಶಾಕ್: ಕೈಕೊಟ್ಟ ರವೀಂದ್ರ ಜಡೇಜಾ..?
Ravindra jadeja
TV9 Web
| Updated By: ಝಾಹಿರ್ ಯೂಸುಫ್|

Updated on: Aug 15, 2022 | 1:26 PM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಹಾಗೂ ಸಿಎಸ್​ಕೆ (CSK) ಫ್ರಾಂಚೈಸಿ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಕೆಲ ದಿನಗಳ ಹಿಂದೆಯೇ ಜಗಜ್ಜಾಹೀರಾಗಿತ್ತು. ಇದೀಗ ಅದನ್ನು ಮತ್ತಷ್ಟು ಪುಷ್ಠೀಕರಿಸುವಂತೆ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದು ಕೂಡ ರವೀಂದ್ರ ಜಡೇಜಾ ಸಿಎಸ್​ಕೆ ತಂಡವನ್ನು ತೊರೆಯಲಿದ್ದಾರೆ ಎನ್ನುವ ಶಾಕಿಂಗ್ ನ್ಯೂಸ್. ಅಂದರೆ ರವೀಂದ್ರ ಜಡೇಜಾ ಸದ್ಯ ಸಿಎಸ್​ಕೆ ಫ್ರಾಂಚೈಸಿಯ ಸಂಪರ್ಕದಲ್ಲಿಲ್ಲ. ಸಿಎಸ್​ಕೆ ಫ್ರಾಂಚೈಸಿ ವಿರುದ್ದ ಮುನಿಸಿಕೊಂಡಿರುವ ಜಡ್ಡು ಎಲ್ಲಾ ರೀತಿಯ ಸಂಪರ್ಕಗಳನ್ನು ಕಡಿದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಐಪಿಎಲ್ 16ನೇ ಸೀಸನ್​ನಲ್ಲಿ ಜಡ್ಡು ಸಿಎಸ್​ಕೆ ತಂಡದಲ್ಲಿ ಮತ್ತೆ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಐಪಿಎಲ್​ ಸೀಸನ್​ 15 ನಲ್ಲಿ ಸಿಎಸ್​ಕೆ ಫ್ರಾಂಚೈಸಿ ಜಡೇಜಾರನ್ನು ನಾಯಕರಾಗಿ ಆಯ್ಕೆ ಮಾಡಿಕೊಂಡಿತು. ಆದರೆ ತಂಡದ ಕಳಪೆ ಪ್ರದರ್ಶನದ ನಂತರ ಅವರು ನಾಯಕತ್ವವನ್ನು ತೊರೆದರು. ಇದಾದ ಬಳಿಕ ಎಂಎಸ್ ಧೋನಿ ಮತ್ತೆ ತಂಡವನ್ನು ಮುನ್ನಡೆಸಿದರು. ಆದರೆ ನಾಯಕತ್ವ ತೊರೆದ ಬಳಿಕ ಜಡೇಜಾ ಗಾಯದ ಕಾರಣ ಸಂಪೂರ್ಣ ಪಂದ್ಯವನ್ನು ಆಡಿರಲಿಲ್ಲ.

ಇದೀಗ ಜಡೇಜಾ ಹಾಗೂ ಸಿಎಸ್​ಕೆ ಫ್ರಾಂಚೈಸಿ ಮುನಿಸಿಕೊಂಡಿರುವುದು ಸ್ಪಷ್ಟವಾಗಿದೆ. ಏಕೆಂದರೆ ರವೀಂದ್ರ ಜಡೇಜಾ ಮತ್ತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಐಪಿಎಲ್ 2022 ರ ಬಳಿಕ ಪರಸ್ಪರ ಸಂಪರ್ಕದಲ್ಲಿಲ್ಲ. ಐಪಿಎಲ್ 15ನೇ ಸೀಸನ್ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಸಿಎಸ್​ಕೆ ತಂಡಕ್ಕೆ ಸಂಬಂಧಿಸಿದ ಪೋಸ್ಟ್​ಗಳನ್ನು ಜಡೇಜಾ ಡಿಲೀಟ್ ಕೂಡ ಮಾಡಿದ್ದರು. ಇದೀಗ ಸಿಎಸ್​ಕೆ ಫ್ರಾಂಚೈಸಿ ಜೊತೆ ಜಡ್ಡು ಯಾವುದೇ ಸಂಪರ್ಕದಲ್ಲಿ ಇರದ ಕಾರಣ ತಂಡವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಐಪಿಎಲ್2022 ರ ಮೆಗಾ ಹರಾಜಿಗೂ ಮುನ್ನ ಸಿಎಸ್‌ಕೆ ರವೀಂದ್ರ ಜಡೇಜಾ ಅವರನ್ನು ಗರಿಷ್ಠ 16 ಕೋಟಿ ರೂ.ಗೆ ಉಳಿಸಿಕೊಂಡಿತ್ತು. ಮತ್ತೊಂದೆಡೆ ಎಂಎಸ್ ಧೋನಿ ಪಡೆದದ್ದು ಕೇವಲ 12 ಕೋಟಿ ರೂ. ಮಾತ್ರ. ಧೋನಿ ಅವರೇ ತಮ್ಮ ಸಂಭಾವನೆ ಕಡಿಮೆ ಮಾಡುವಂತೆ ಕೇಳಿಕೊಂಡಿದ್ದರು. ಅಷ್ಟೇ ಅಲ್ಲದೆ ತಂಡದ ದುಬಾರಿ ಆಟಗಾರ ಜಡೇಜಾ ಅವರಿಗೆ ನಾಯಕನ ಪಟ್ಟ ಕೂಡ ನೀಡಲಾಗಿತ್ತು.

ಆದರೆ ಟೂರ್ನಿಯ ನಡುವೆ ಜಡೇಜಾ ಹಾಗೂ ಸಿಎಸ್​ಕೆ ಮ್ಯಾನೇಜ್ಮೆಂಟ್ ನಡುವೆ ಅಹಿತಕರ ಘಟನೆಗಳು ನಡೆದಿವೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಜಡೇಜಾ ನಾಯಕತ್ವವನ್ನು ತೊರೆದಿದ್ದರು. ಅಷ್ಟೇ ಅಲ್ಲದೆ ಆ ಬಳಿಕ ತಂಡದಿಂದ ಹೊರಗುಳಿದ ಜಡ್ಡು ಸಿಎಸ್​ಕೆ ಜೊತೆಗೆ ಯಾವುದೇ ಸಂಪರ್ಕದಲ್ಲಿಲ್ಲ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಜಡೇಜಾ ಮತ್ತೆ ಸಿಎಸ್​ಕೆ ಪರ ಆಡುವುದು ಅನುಮಾನ.

ಅಲ್ಲದೆ ಟಿ20 ವಿಶ್ವಕಪ್​ ಬಳಿಕ ಜಡೇಜಾ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅಂದರೆ ವಿಶ್ವಕಪ್​ನಲ್ಲಿ ಜಡೇಜಾ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದರೆ ಅವರು ಸಿಎಸ್​ಕೆ ತಂಡವನ್ನು ತೊರೆಯುವುದು ಖಚಿತಪಡಿಸಲಿದ್ದಾರೆ. ಇತ್ತ ಸಿಎಸ್​ಕೆ ಫ್ರಾಂಚೈಸಿ ರವೀಂದ್ರ ಜಡೇಜಾರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಯಸಿದರೂ ಅವರು ಅದರ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದಾಗಿ ಸಿಎಸ್​ಕೆ ಮ್ಯಾನೇಜ್ಮೆಂಟ್ ಜೊತೆಗಿನ ಎಲ್ಲಾ ರೀತಿಯ ಸಂಪರ್ಕಗಳನ್ನು ಕಡಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ರವೀಂದ್ರ ಜಡೇಜಾ ಮುಂದಿನ ಐಪಿಎಲ್​ಗಾಗಿ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಇತ್ತ ಇತರೆ ಫ್ರಾಂಚೈಸಿಗಳು ಕೂಡ ಸಿಎಸ್​ಕೆ ತಂಡದಿಂದ ಜಡೇಜಾ ಹೊರಬರುವುದನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಹರಾಜಿನಲ್ಲಿ ಕಾಣಿಸಿಕೊಂಡರೆ ಎಡಗೈ ಆಲ್​ರೌಂಡರ್ ಕೋಟಿ ಮೊತ್ತಕ್ಕೆ ಬಿಕರಿಯಾಗುವುದರಲ್ಲಿ ಅನುಮಾನವೇ ಇಲ್ಲ.

ಏಕೆಂದರೆ ಐಪಿಎಲ್​ನಲ್ಲಿ ಇದುವರೆಗೆ 210 ಪಂದ್ಯಗಳನ್ನು ಆಡಿರುವ ಜಡೇಜಾ 132 ವಿಕೆಟ್ ಪಡೆದಿದ್ದಾರೆ. 16 ರನ್‌ಗೆ 5 ವಿಕೆಟ್ ಪಡೆದದ್ದು ಅತ್ಯುತ್ತಮ ಪ್ರದರ್ಶನ. ಹಾಗೆಯೇ 2502 ರನ್ ಕೂಡ ಗಳಿಸಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿದ್ದರು. ಅಂದರೆ 100 ಕ್ಕೂ ಅಧಿಕ ವಿಕೆಟ್ ಹಾಗೂ 2 ಸಾವಿರಕ್ಕೂ ಅಧಿಕ ರನ್​ ಕಲೆಹಾಕುವ ಮೂಲಕ ರವೀಂದ್ರ ಜಡೇಜಾ ಐಪಿಎಲ್​ನಲ್ಲಿ ಪರಿಪೂರ್ಣ ಆಲ್​ರೌಂಡರ್ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡದಿಂದ ಜಡೇಜಾ ಹೊರಬಂದರೆ 9 ಫ್ರಾಂಚೈಸಿಗಳು ಟೀಮ್ ಇಂಡಿಯಾ ಆಲ್​ರೌಂಡರ್​ನ ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ಪಕ್ಕಾ ಎನ್ನಬಹುದು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ