AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Agarwal: ತೂಫಾನ್ ಬ್ಯಾಟಿಂಗ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಮಯಾಂಕ್

Maharaja Trophy 2022: ಈ ವೇಳೆ ರೋಹನ್ ಕದಮ್ 52 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 84 ರನ್ ಬಾರಿಸಿದರೆ, ಶರತ್ 45 ಎಸೆತಗಳಲ್ಲಿ 51 ರನ್​ಗಳಿಸಿದರು.

Mayank Agarwal: ತೂಫಾನ್ ಬ್ಯಾಟಿಂಗ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಮಯಾಂಕ್
Mayank Agarwal
TV9 Web
| Edited By: |

Updated on: Aug 13, 2022 | 11:53 AM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ ಟಿ20 ಲೀಗ್​ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಟೂರ್ನಿಯ 12ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಶಿವಮೊಗ್ಗ ಸ್ಟ್ರೈಕರ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ನಾಯಕ ಮಯಾಂಕ್​ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ನಾಯಕನ ನಿರ್ಧಾರ ತಪ್ಪು ಎಂಬಂತೆ ಶಿವಮೊಗ್ಗ ಸ್ಟೈಕರ್ಸ್ ತಂಡದ​ ಆರಂಭಿಕರು ಭರ್ಜರಿಯಾಗಿ ಬ್ಯಾಟ್ ಬೀಸಿದ್ದರು. ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ಶರತ್ ಬಿಆರ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಜೋಡಿ ಮೊದಲ ವಿಕೆಟ್​ಗೆ 116 ರನ್​ಗಳ ಜೊತೆಯಾಟವಾಡುವ ಮೂಲಕ ಅಬ್ಬರಿಸಿದರು.

ಈ ವೇಳೆ ರೋಹನ್ ಕದಮ್ 52 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 84 ರನ್ ಬಾರಿಸಿದರೆ, ಶರತ್ 45 ಎಸೆತಗಳಲ್ಲಿ 51 ರನ್​ಗಳಿಸಿದರು. ಆ ಬಳಿಕ ಬಂದ ಶಿವಮೊಗ್ಗ ತಂಡದ ನಾಯಕ ಕೃಷ್ಣಪ್ಪ ಗೌತಮ್ 12 ಎಸೆತಗಳಲ್ಲಿ 18 ರನ್ ಬಾರಿಸಿದರೆ, ಡಿ ಅವಿನಾಶ್ 13 ರನ್​ಗಳಿಸಿದರು. ಮಳೆಯ ಭೀತಿಯ ಕಾರಣ 19 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಶಿವಮೊಗ್ಗ ಸ್ಟೈಕರ್ಸ್​ ತಂಡವು 2 ವಿಕೆಟ್​ ನಷ್ಟಕ್ಕೆ 172 ರನ್ ಕಲೆಹಾಕಿತು.

114 ಎಸೆತಗಳಲ್ಲಿ 173 ರನ್​ಗಳ ಗುರಿ ಪಡೆದ ಬೆಂಗಳೂರು ಬ್ಲಾಸ್ಟರ್ಸ್​ ಪರ ನಾಯಕ ಮಯಾಂಕ್ ಅಗರ್ವಾಲ್ ಬ್ಲಾಸ್ಟಿಂಗ್ ಇನಿಂಗ್ಸ್ ಆರಂಭಿಸಿದ್ದರು. ಎಲ್​ಆರ್ ಚೇತನ್ ಜೊತೆಗೂಡಿ ಮೊದಲ 5 ಓವರ್​ಗಳಲ್ಲಿ 69 ರನ್​ ಚಚ್ಚಿದ ಮಯಾಂಕ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ್ದರು. ಈ ವೇಳೆ ಕೇವಲ 15 ಎಸೆತಗಳಲ್ಲಿ 2 ಸಿಕ್ಸ್​ ಹಾಗೂ 4 ಫೋರ್​ನೊಂದಿಗೆ 34 ರನ್​ ಬಾರಿಸಿದ ಚೇತನ್​ ದೇವಯ್ಯಗೆ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆದರೆ ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಮಯಾಂಕ್ ಶಿವಮೊಗ್ಗ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಬೆಂಗಳೂರು ಬ್ಲಾಸ್ಟರ್ಸ್ ತಂಡದ​ ನಾಯಕ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಅಷ್ಟರಲ್ಲಾಗಲೇ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಗುರಿಯ ಸಮೀಪಕ್ಕೆ ಬಂದು ನಿಂತಿತು.

ಅಂತಿಮವಾಗಿ ಕೇವಲ 49 ಎಸೆತಗಳಲ್ಲಿ 6 ಸಿಕ್ಸ್​ ಹಾಗೂ 10 ಫೋರ್​ನೊಂದಿಗೆ ಅಜೇಯ 102 ರನ್​ ಬಾರಿಸುವ ಮೂಲಕ ಮಯಾಂಕ್ ಅಗರ್ವಾಲ್ ತಂಡವನ್ನು ಗುರಿ ಮುಟ್ಟಿಸಿದರು. ನಾಯಕನಿಗೆ ಉತ್ತಮ ಸಾಥ್ ನೀಡಿದ ಅನೀಶ್ ಕೆವಿ 30 ಎಸೆತಗಳಲ್ಲಿ 35 ರನ್ ಬಾರಿಸಿದರು. ಅದರಂತೆ 15.4 ಓವರ್​ಗಳಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 1 ವಿಕೆಟ್ ನಷ್ಟಕ್ಕೆ 176 ರನ್​ಗಳಿಸಿತು. ಈ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಇತ್ತ ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಮಯಾಂಕ್ ಅಗರ್ವಾಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Follow Us
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ