AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Agarwal: ತೂಫಾನ್ ಬ್ಯಾಟಿಂಗ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಮಯಾಂಕ್

Maharaja Trophy 2022: ಈ ವೇಳೆ ರೋಹನ್ ಕದಮ್ 52 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 84 ರನ್ ಬಾರಿಸಿದರೆ, ಶರತ್ 45 ಎಸೆತಗಳಲ್ಲಿ 51 ರನ್​ಗಳಿಸಿದರು.

Mayank Agarwal: ತೂಫಾನ್ ಬ್ಯಾಟಿಂಗ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಮಯಾಂಕ್
Mayank Agarwal
TV9 Web
| Updated By: ಝಾಹಿರ್ ಯೂಸುಫ್|

Updated on: Aug 13, 2022 | 11:53 AM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ ಟಿ20 ಲೀಗ್​ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಟೂರ್ನಿಯ 12ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಶಿವಮೊಗ್ಗ ಸ್ಟ್ರೈಕರ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ನಾಯಕ ಮಯಾಂಕ್​ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ನಾಯಕನ ನಿರ್ಧಾರ ತಪ್ಪು ಎಂಬಂತೆ ಶಿವಮೊಗ್ಗ ಸ್ಟೈಕರ್ಸ್ ತಂಡದ​ ಆರಂಭಿಕರು ಭರ್ಜರಿಯಾಗಿ ಬ್ಯಾಟ್ ಬೀಸಿದ್ದರು. ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ಶರತ್ ಬಿಆರ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಜೋಡಿ ಮೊದಲ ವಿಕೆಟ್​ಗೆ 116 ರನ್​ಗಳ ಜೊತೆಯಾಟವಾಡುವ ಮೂಲಕ ಅಬ್ಬರಿಸಿದರು.

ಈ ವೇಳೆ ರೋಹನ್ ಕದಮ್ 52 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 84 ರನ್ ಬಾರಿಸಿದರೆ, ಶರತ್ 45 ಎಸೆತಗಳಲ್ಲಿ 51 ರನ್​ಗಳಿಸಿದರು. ಆ ಬಳಿಕ ಬಂದ ಶಿವಮೊಗ್ಗ ತಂಡದ ನಾಯಕ ಕೃಷ್ಣಪ್ಪ ಗೌತಮ್ 12 ಎಸೆತಗಳಲ್ಲಿ 18 ರನ್ ಬಾರಿಸಿದರೆ, ಡಿ ಅವಿನಾಶ್ 13 ರನ್​ಗಳಿಸಿದರು. ಮಳೆಯ ಭೀತಿಯ ಕಾರಣ 19 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಶಿವಮೊಗ್ಗ ಸ್ಟೈಕರ್ಸ್​ ತಂಡವು 2 ವಿಕೆಟ್​ ನಷ್ಟಕ್ಕೆ 172 ರನ್ ಕಲೆಹಾಕಿತು.

114 ಎಸೆತಗಳಲ್ಲಿ 173 ರನ್​ಗಳ ಗುರಿ ಪಡೆದ ಬೆಂಗಳೂರು ಬ್ಲಾಸ್ಟರ್ಸ್​ ಪರ ನಾಯಕ ಮಯಾಂಕ್ ಅಗರ್ವಾಲ್ ಬ್ಲಾಸ್ಟಿಂಗ್ ಇನಿಂಗ್ಸ್ ಆರಂಭಿಸಿದ್ದರು. ಎಲ್​ಆರ್ ಚೇತನ್ ಜೊತೆಗೂಡಿ ಮೊದಲ 5 ಓವರ್​ಗಳಲ್ಲಿ 69 ರನ್​ ಚಚ್ಚಿದ ಮಯಾಂಕ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ್ದರು. ಈ ವೇಳೆ ಕೇವಲ 15 ಎಸೆತಗಳಲ್ಲಿ 2 ಸಿಕ್ಸ್​ ಹಾಗೂ 4 ಫೋರ್​ನೊಂದಿಗೆ 34 ರನ್​ ಬಾರಿಸಿದ ಚೇತನ್​ ದೇವಯ್ಯಗೆ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆದರೆ ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಮಯಾಂಕ್ ಶಿವಮೊಗ್ಗ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಬೆಂಗಳೂರು ಬ್ಲಾಸ್ಟರ್ಸ್ ತಂಡದ​ ನಾಯಕ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಅಷ್ಟರಲ್ಲಾಗಲೇ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಗುರಿಯ ಸಮೀಪಕ್ಕೆ ಬಂದು ನಿಂತಿತು.

ಅಂತಿಮವಾಗಿ ಕೇವಲ 49 ಎಸೆತಗಳಲ್ಲಿ 6 ಸಿಕ್ಸ್​ ಹಾಗೂ 10 ಫೋರ್​ನೊಂದಿಗೆ ಅಜೇಯ 102 ರನ್​ ಬಾರಿಸುವ ಮೂಲಕ ಮಯಾಂಕ್ ಅಗರ್ವಾಲ್ ತಂಡವನ್ನು ಗುರಿ ಮುಟ್ಟಿಸಿದರು. ನಾಯಕನಿಗೆ ಉತ್ತಮ ಸಾಥ್ ನೀಡಿದ ಅನೀಶ್ ಕೆವಿ 30 ಎಸೆತಗಳಲ್ಲಿ 35 ರನ್ ಬಾರಿಸಿದರು. ಅದರಂತೆ 15.4 ಓವರ್​ಗಳಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 1 ವಿಕೆಟ್ ನಷ್ಟಕ್ಕೆ 176 ರನ್​ಗಳಿಸಿತು. ಈ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಇತ್ತ ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಮಯಾಂಕ್ ಅಗರ್ವಾಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು