AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..

IPL 2021 Auction: ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..
ಕೆ. ಗೌತಮ್
ರಾಜೇಶ್ ದುಗ್ಗುಮನೆ
|

Updated on: Feb 18, 2021 | 5:50 PM

Share

ಐಪಿಎಲ್​ನಲ್ಲಿ ಚೆನ್ನೈ ಹಾಗೂ ಬೆಂಗಳೂರು ತಂಡಗಳ ನಡುವಣ ಮ್ಯಾಚ್​ ಯಾವಾಗಲೂ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ಕಾರಣ, ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಇರುವ ವೈಷಮ್ಯಗಳು ಕಾರಣವಾಗಿರಬಹುದು. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕನಾದರೆ, ಚೆನ್ನೈಗೆ ಧೋನಿ ನಾಯಕ. ವಿರಾಟ್​-ಧೋನಿ ಅಭಿಮಾನಿಗಳ ನಡುವೆ ಶೀತಲ ಸಮರ ನಡೆಯುತ್ತಲೇ ಇರುತ್ತದೆ ಎನ್ನುವುದು ಗುಟ್ಟಾಗೇನು ಉಳಿದಿಲ್ಲ. ಹೀಗಿರುವಾಗಲೇ ಇಂದಿನ ಐಪಿಎಲ್​ ಹರಾಜಿನಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್​ ದೊಡ್ಡ ಮೊತ್ತಕ್ಕೆ ಚೆನ್ನೈ ಪಾಲಾಗಿದ್ದಾರೆ.

ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಇಂದಿನ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಗೌತಮ್​ ಸೇಲ್​ ಆಗಿದ್ದಾರೆ.

ಗೌತಮ್​ ಮೂಲ ಬೆಲೆ 20 ಲಕ್ಷ ರೂಪಾಯಿ ಆಗಿತ್ತು. ಒಂದೊಂದೇ ತಂಡಗಳು ಗೌತಮ್​ ಮೇಲೆ ಬಿಡ್​ ಮಾಡಲು ಆರಂಭಿಸಿದ್ದವು. ಗೌತಮ್​ನನ್ನು ಪಡೆಯಲು ಡೆಲ್ಲಿ ಕ್ಯಾಪಿಟಲ್ಸ್​, ಸನ್​ ರೈಸರ್ಸ್​ ಹೈದರಾಬಾದ್​ ಹಾಗೂ ಕೋಲ್ಕತ್ತ ನೈಟ್​ ರೈಡರ್ಸ್​ ನಡುವೆ ಬಿಗ್​ ಫೈಟ್​ ಏರ್ಪಟ್ಟಿತ್ತು. ಕೊನೆಗೆ ಸಿಎಸ್​ಕೆ ಕೂಡ ಈ ರೇಸ್​ನಲ್ಲಿ ಸೇರಿಕೊಂಡು, ಅಂತಿಮವಾಗಿ 9.25 ಕೋಟಿ ರೂಪಾಯಿಗೆ ಗೌತಮ್​ರನ್ನು ಖರೀದಿಸಿತ್ತು.

ದಾಖಲೆ ಬರೆದ ಕ್ರಿಸ್​ ಮಾರಿಸ್​..

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

 ಇದನ್ನೂ ಓದಿ: Chris Morris; IPL Auction 2021: 16.25 ಕೋಟಿ ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದ ಕ್ರಿಸ್​ ಮೊರಿಸ್​

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು