AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..

IPL 2021 Auction: ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ.

K Gowtham: 9.25 ಕೋಟಿಗೆ ಚೆನ್ನೈ ಸೂಪರ್​ ಕಿಂಗ್ಸ್​ ಪಾಲಾದ ಕನ್ನಡಿಗ ಕೆ. ಗೌತಮ್​..
ಕೆ. ಗೌತಮ್
ರಾಜೇಶ್ ದುಗ್ಗುಮನೆ
|

Updated on: Feb 18, 2021 | 5:50 PM

Share

ಐಪಿಎಲ್​ನಲ್ಲಿ ಚೆನ್ನೈ ಹಾಗೂ ಬೆಂಗಳೂರು ತಂಡಗಳ ನಡುವಣ ಮ್ಯಾಚ್​ ಯಾವಾಗಲೂ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ಕಾರಣ, ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಇರುವ ವೈಷಮ್ಯಗಳು ಕಾರಣವಾಗಿರಬಹುದು. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕನಾದರೆ, ಚೆನ್ನೈಗೆ ಧೋನಿ ನಾಯಕ. ವಿರಾಟ್​-ಧೋನಿ ಅಭಿಮಾನಿಗಳ ನಡುವೆ ಶೀತಲ ಸಮರ ನಡೆಯುತ್ತಲೇ ಇರುತ್ತದೆ ಎನ್ನುವುದು ಗುಟ್ಟಾಗೇನು ಉಳಿದಿಲ್ಲ. ಹೀಗಿರುವಾಗಲೇ ಇಂದಿನ ಐಪಿಎಲ್​ ಹರಾಜಿನಲ್ಲಿ ಕನ್ನಡಿಗ ಕೃಷ್ಣಪ್ಪ ಗೌತಮ್​ ದೊಡ್ಡ ಮೊತ್ತಕ್ಕೆ ಚೆನ್ನೈ ಪಾಲಾಗಿದ್ದಾರೆ.

ಕೃಷ್ಣಪ್ಪ ಗೌತಮ್​ ಈ ಮೊದಲು ರಾಜಸ್ಥಾನ ರಾಯಲ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಅಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಇಂದಿನ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಗೌತಮ್​ ಸೇಲ್​ ಆಗಿದ್ದಾರೆ.

ಗೌತಮ್​ ಮೂಲ ಬೆಲೆ 20 ಲಕ್ಷ ರೂಪಾಯಿ ಆಗಿತ್ತು. ಒಂದೊಂದೇ ತಂಡಗಳು ಗೌತಮ್​ ಮೇಲೆ ಬಿಡ್​ ಮಾಡಲು ಆರಂಭಿಸಿದ್ದವು. ಗೌತಮ್​ನನ್ನು ಪಡೆಯಲು ಡೆಲ್ಲಿ ಕ್ಯಾಪಿಟಲ್ಸ್​, ಸನ್​ ರೈಸರ್ಸ್​ ಹೈದರಾಬಾದ್​ ಹಾಗೂ ಕೋಲ್ಕತ್ತ ನೈಟ್​ ರೈಡರ್ಸ್​ ನಡುವೆ ಬಿಗ್​ ಫೈಟ್​ ಏರ್ಪಟ್ಟಿತ್ತು. ಕೊನೆಗೆ ಸಿಎಸ್​ಕೆ ಕೂಡ ಈ ರೇಸ್​ನಲ್ಲಿ ಸೇರಿಕೊಂಡು, ಅಂತಿಮವಾಗಿ 9.25 ಕೋಟಿ ರೂಪಾಯಿಗೆ ಗೌತಮ್​ರನ್ನು ಖರೀದಿಸಿತ್ತು.

ದಾಖಲೆ ಬರೆದ ಕ್ರಿಸ್​ ಮಾರಿಸ್​..

2021ರ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ 16.25 ಕೋಟಿ ರೂಪಾಯಿಗೆ ರಾಜಸ್ಥಾನ್​ ರಾಯಲ್ಸ್​ ಪಾಲಾಗಿದ್ದಾರೆ. ಈ ಮೂಲಕ ಅವರು ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇಂದಿನ ಹರಾಜು ಪ್ರಕ್ರಿಯೆಯಲ್ಲಿ ಕ್ರಿಸ್​ ಮೊರಿಸ್​ ಮೂಲ ಬೆಲೆ 75 ಲಕ್ಷ ರೂಪಾಯಿ ಇತ್ತು. ದಕ್ಷಿಣ ಆಫ್ರಿಕಾದ ಆಲ್​ರೌಂಡರ್​ ಕ್ರಿಸ್​ 2020ರಲ್ಲಿ ಆರ್​ಸಿಬಿ ಪರ ಆಡಿದ್ದರು. ಗಾಯದ ಸಮಸ್ಯೆಯಿಂದ ಕೆಲ ಮ್ಯಾಚ್​ಗಳಿಗೆ ಅವರು ಅಲಭ್ಯರಾಗಿದ್ದರು. ಆದರೆ, ಆಡಿದ ಕೆಲವೇ ಮ್ಯಾಚ್​ಗಳಲ್ಲಿ ಅವರು ಮಿಂಚಿದ್ದರು. ಆದಾಗ್ಯೂ, ಆರ್​ಸಿಬಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.

 ಇದನ್ನೂ ಓದಿ: Chris Morris; IPL Auction 2021: 16.25 ಕೋಟಿ ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದ ಕ್ರಿಸ್​ ಮೊರಿಸ್​

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ