AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯ ಅಲ್ಲ..! ಟೀಂ ಇಂಡಿಯಾದ ಈಗಿನ ಆಲ್ ರೌಂಡರ್ ಬಗ್ಗೆ ಕಪಿಲ್ ದೇವ್‌ ಹೇಳಿದ್ದಿದು

ಅವರು ಬೌಲಿಂಗ್ ಮಾಡದಿದ್ದರೆ ಅವರನ್ನು ಆಲ್‌ರೌಂಡರ್ ಎಂದು ಕರೆಯುತ್ತಾರೆಯೇ? ಅವರು ಗಾಯದಿಂದ ಚೇತರಿಸಿಕೊಂಡಿದ್ದಾರೆ, ಆದ್ದರಿಂದ ಬೌಲಿಂಗ್ ಮಾಡಲಿ.

ಹಾರ್ದಿಕ್ ಪಾಂಡ್ಯ ಅಲ್ಲ..! ಟೀಂ ಇಂಡಿಯಾದ ಈಗಿನ ಆಲ್ ರೌಂಡರ್ ಬಗ್ಗೆ ಕಪಿಲ್ ದೇವ್‌ ಹೇಳಿದ್ದಿದು
ಕಪಿಲ್ ದೇವ್‌
TV9 Web
| Edited By: |

Updated on: Nov 26, 2021 | 5:18 PM

Share

ಹಾರ್ದಿಕ್ ಪಾಂಡ್ಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಾಗಿನಿಂದ, ಅವರನ್ನು ವಿಶ್ವವಿಜೇತ ನಾಯಕ, ಶ್ರೇಷ್ಠ ಆಲ್‌ರೌಂಡರ್ ಕಪಿಲ್ ದೇವ್‌ಗೆ ಹೋಲಿಸಲಾಗುತ್ತದೆ. ಆದಾಗ್ಯೂ, ಪಾಂಡ್ಯ ಅವರು ಸದ್ಯಕ್ಕೆ ಫಾರ್ಮ್​ನಲ್ಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಅವರು ದೀರ್ಘಕಾಲದವರೆಗೆ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಅಷ್ಟು ಬೌಲಿಂಗ್ ಮಾಡದಿದ್ದರೂ ಅವರನ್ನು ಆಲ್ ರೌಂಡರ್ ಎಂದು ಕರೆಯಬಹುದೇ ಎಂದು ಕಪಿಲ್ ದೇವ್ ಶುಕ್ರವಾರ ಪ್ರಶ್ನಿಸಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ಅವಿಭಾಜ್ಯ ಅಂಗವಾಗಿರುವ ಪಾಂಡ್ಯ, ಇತ್ತೀಚಿನ ಟಿ20 ವಿಶ್ವಕಪ್‌ನಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದರು. ಟೂರ್ನಿಯ ಗುಂಪು ಹಂತದಲ್ಲೇ ಭಾರತ ಹೊರಬಿದ್ದಿತ್ತು.

ಪಾಂಡ್ಯ ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಬಹಿರಂಗಪಡಿಸದಿರುವ ಬಗ್ಗೆಯೂ ಟೀಕೆ ವ್ಯಕ್ತವಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ತಂಡದಲ್ಲಿ ಅವರಿಗೆ ಸ್ಥಾನ ಸಿಗಲಿಲ್ಲ. ಭಾರತ 3-0 ಅಂತರದಲ್ಲಿ ಸರಣಿ ಗೆದ್ದಿತ್ತು. ರಾಯಲ್ ಕಲ್ಕತ್ತಾ ಗಾಲ್ಫ್ ಕೋರ್ಸ್‌ನಲ್ಲಿ ಕಪಿಲ್, ಆಲ್‌ರೌಂಡರ್ ಎಂದು ಕರೆಯಲು, ಅವರು ಎರಡನ್ನೂ ಮಾಡಬೇಕು. ಅವರು ಬೌಲಿಂಗ್ ಮಾಡದಿದ್ದರೆ ಅವರನ್ನು ಆಲ್‌ರೌಂಡರ್ ಎಂದು ಕರೆಯುತ್ತಾರೆಯೇ? ಅವರು ಗಾಯದಿಂದ ಚೇತರಿಸಿಕೊಂಡಿದ್ದಾರೆ, ಆದ್ದರಿಂದ ಬೌಲಿಂಗ್ ಮಾಡಲಿ. ಮೊದಲನೆಯದು, ಅವರು ಭಾರತಕ್ಕೆ ಬಹಳ ಮುಖ್ಯವಾದ ಬ್ಯಾಟ್ಸ್‌ಮನ್, ಬೌಲಿಂಗ್‌ಗಾಗಿ, ಅವರು ಸಾಕಷ್ಟು ಪಂದ್ಯಗಳನ್ನು ಆಡಬೇಕು ಮತ್ತು ಉತ್ತಮ ಪ್ರದರ್ಶನ ನೀಡಬೇಕು. ಅದರ ನಂತರವೇ ನಾವು ಹೇಳಲು ಸಾಧ್ಯವಾಗುತ್ತದೆ ಎಂದರು.

ರಾಹುಲ್ ದ್ರಾವಿಡ್ ಬಗ್ಗೆ ಹೀಗೆ ಹೇಳಿದ್ದಾರೆ ರಾಹುಲ್ ದ್ರಾವಿಡ್ ಕ್ರಿಕೆಟಿಗನಾಗಿರುವುದಕ್ಕಿಂತ ಕೋಚ್ ಆಗಿ ಹೆಚ್ಚು ಯಶಸ್ವಿಯಾಗುತ್ತಾರೆ ಎಂದು ಕಪಿಲ್ ಹೇಳಿದ್ದಾರೆ. ಅವರು ಉತ್ತಮ ವ್ಯಕ್ತಿ ಮತ್ತು ಉತ್ತಮ ಕ್ರಿಕೆಟಿಗರು, ಅವರು ಕ್ರಿಕೆಟಿಗರಾಗಿ ಯಶಸ್ವಿಯಾದರು, ಅವರು ಕೋಚ್ ಆಗಿ ಇನ್ನಷ್ಟು ಯಶಸ್ವಿಯಾಗುತ್ತಾರೆ ಎಂದರು.

ತಮ್ಮ ನೆಚ್ಚಿನ ಆಲ್ ರೌಂಡರ್ ಬಗ್ಗೆ ಕೇಳಿದಾಗ ಕಪಿಲ್ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಎಂದು ಹೆಸರಿಸಿದರು. ನನಗೆ ಇಂದಿನ ದಿನಗಳಲ್ಲಿ ಕ್ರಿಕೆಟ್ ಅನ್ನು ಆನಂದಿಸಲು ಮಾತ್ರ ತಿಳಿದಿದೆ. ಅದು ನನ್ನ ಕೆಲಸ, ನಾನು ನಿಮ್ಮ ದೃಷ್ಟಿಕೋನದಿಂದ ನೋಡುವುದಿಲ್ಲ. ತಮ್ಮ ನೆಚ್ಚಿನ ಆಲ್‌ರೌಂಡರ್ ಬಗ್ಗೆ ಅವರು, ನಾನು ಅಶ್ವಿನ್ ಅವರ ಹೆಸರನ್ನು ತೆಗೆದುಕೊಳ್ಳುತ್ತೇನೆ. ಅವರು ಅದ್ಭುತ, ಜಡೇಜಾ ಕೂಡ ಶ್ರೇಷ್ಠ ಕ್ರಿಕೆಟಿಗ ಆದರೆ ಅವರ ಬ್ಯಾಟಿಂಗ್ ಸುಧಾರಿಸಿದೆ ಆದ್ದರಿಂದ ಬೌಲಿಂಗ್ ಹದಗೆಟ್ಟಿದೆ ಎಂದರು.

ಮೊದಲ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್ ಅವರನ್ನು ಶ್ಲಾಘಿಸಿದ ಅವರು, ಯುವ ಬ್ಯಾಟ್ಸ್‌ಮನ್‌ಗಳು ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸುತ್ತಿದ್ದರೆ, ಆಟವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ನಮಗೆ ಅವರಂತಹ ಕ್ರಿಕೆಟಿಗರು ಬೇಕು ಎಂದರು.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ