AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Ranji Team: ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ

Karnataka Ranji squad: ಬ್ಯಾಟಿಂಗ್​ನಲ್ಲಿ ಅನುಭವಿ ಮಯಾಂಕ್ ಅಗರ್ವಾಲ್, ನಾಯಕ ಮನೀಶ್ ಪಾಂಡೆ , ರವಿಕುಮಾರ್ ಸಮರ್ಥ್, ಕರುಣ್ ನಾಯರ್ ಮತ್ತು ದೇವದತ್ ಪಡಿಕ್ಕಲ್ ಅವರಂತಹ ಅತ್ಯುತ್ತಮ ಆಟಗಾರರಿದ್ದಾರೆ.

Karnataka Ranji Team: ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ
Karnataka Ranji Team
TV9 Web
| Edited By: |

Updated on: Jun 01, 2022 | 3:53 PM

Share

ಆಲೂರಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಕ್ರಿಕೆಟ್ ಮೈದಾನದಲ್ಲಿ ಜೂನ್ 6 ರಿಂದ ಪ್ರಾರಂಭವಾಗುವ ರಣಜಿ ಟೂರ್ನಿಯ 2ನೇ ಹಂತಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೂಡ ತಂಡವನ್ನು ಮನೀಶ್ ಪಾಂಡೆ ಮುನ್ನಡೆಸಲಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ತಂಡದಿಂದ ಹೊರಗುಳಿದಿದ್ದಾರೆ. ಈ ಒಬ್ಬರು ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿ ಭಾಗವಹಿಸಲಿದ್ದು, ಹೀಗಾಗಿ ಇವರನ್ನು ಕೈ ಬಿಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ. ಇನ್ನು ಕ್ವಾರ್ಟರ್​ ಫೈನಲ್​ನಲ್ಲಿ ಕರ್ನಾಟಕ ತಂಡವು ಉತ್ತರ ಪ್ರದೇಶ ವಿರುದ್ದ ಆಡಲಿದೆ.

ಈ ಬಾರಿ ತಂಡಕ್ಕೆ ವೇಗಿ ವಿ. ಕೌಶಿಕ್ ಕಂಬ್ಯಾಕ್ ಮಾಡಿದ್ದು, ಹೀಗಾಗಿ ಬೌಲಿಂಗ್ ವಿಭಾಗ ಮತ್ತಷ್ಟು ಬಲಗೊಂಡಿದೆ ಎನ್ನಬಹುದು. ಏಕೆಂದರೆ ತಂಡದಲ್ಲಿ ವೇಗಿಯಾಗಿ ವಿಜಯಕುಮಾರ್, ಸ್ಪಿನ್ನರ್​ಗಳಾಗಿ ಕೃಷ್ಣಪ್ಪ ಗೌತಮ್ , ಶ್ರೇಯಸ್ ಗೋಪಾಲ್ , ಜೆ ಸುಚಿತ್ ಮತ್ತು ಕೆಸಿ ಕಾರಿಯಪ್ಪ ಇದ್ದಾರೆ. ಹೀಗಾಗಿ ಕರ್ನಾಟಕ ತಂಡವು ಬಲಿಷ್ಠ ಬೌಲಿಂಗ್ ಲೈನಪ್​ನೊಂದಿಗೆ ಕಣಕ್ಕಿಳಿಯಲಿದೆ.

ಹಾಗೆಯೇ ಬ್ಯಾಟಿಂಗ್​ನಲ್ಲಿ ಅನುಭವಿ ಮಯಾಂಕ್ ಅಗರ್ವಾಲ್, ನಾಯಕ ಮನೀಶ್ ಪಾಂಡೆ , ರವಿಕುಮಾರ್ ಸಮರ್ಥ್, ಕರುಣ್ ನಾಯರ್ ಮತ್ತು ದೇವದತ್ ಪಡಿಕ್ಕಲ್ ಅವರಂತಹ ಅತ್ಯುತ್ತಮ ಆಟಗಾರರಿದ್ದಾರೆ. ಹೀಗಾಗಿ ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಕರ್ನಾಟಕ ಕೂಡ ಮುಂಚೂಣಿಯಲ್ಲಿದೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಕರ್ನಾಟಕ ತಂಡ ಹೀಗಿದೆ: ಮನೀಶ್ ಪಾಂಡೆ (ನಾಯಕ), ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್, ಕರುಣ್ ನಾಯರ್,ಸಿದ್ಧಾರ್ಥ್ ಕೆವಿ, ನಿಶ್ಚಲ್ ಡಿ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಶರತ್ ಬಿಆರ್, ಶ್ರೇಯಸ್ ಗೋಪಾಲ್, ಕೃಷ್ಣಪ್ಪ ಗೌತಮ್, ಶುಭಾಂಗ್ ಹೆಗ್ಡೆ , ಜಗದೀಶ್ ಸುಚಿತ್, ಕೆಸಿ ಕಾರ್ಯಪ್ಪ , ರೋನಿತ್ ಮೋರೆ, ಕೌಶಿಕ್ ವಿ, ವೈಶಾಕ್ ವಿಜಯಕುಮಾರ್, ವೆಂಕಟೇಶ್ ಎಂ, ವಿದ್ವತ್ ಕಾವೇರಪ್ಪ, ಕಿಶನ್ ಎಸ್ ಬೇಡರೆ.

ರಣಜಿ ಟ್ರೋಫಿ ಕ್ವಾರ್ಟರ್​ ಫೈನಲ್ ವೇಳಾಪಟ್ಟಿ ಹೀಗಿದೆ:

  1. ಜೂನ್ 6-10: ಮೊದಲ ಕ್ವಾರ್ಟರ್ ಫೈನಲ್- ಬಂಗಾಳ vs ಜಾರ್ಖಂಡ್ (ಜಸ್ಟ್ ಕ್ರಿಕೆಟ್ ಅಕಾಡೆಮಿ ಮೈದಾನ, ಬೆಂಗಳೂರು)
  2. ಜೂನ್ 6-10: ಎರಡನೇ ಕ್ವಾರ್ಟರ್ ಫೈನಲ್- ಮುಂಬೈ vs ಉತ್ತರಾಖಂಡ (KSCA ಕ್ರಿಕೆಟ್ ಮೈದಾನ-2, ಆಲೂರು)
  3. ಜೂನ್ 6-10: ಮೂರನೇ ಕ್ವಾರ್ಟರ್ ಫೈನಲ್- ಕರ್ನಾಟಕ vs ಉತ್ತರ ಪ್ರದೇಶ (KSCA ಕ್ರಿಕೆಟ್ ಮೈದಾನ-1, ಆಲೂರು)
  4. ಜೂನ್ 6-10: ನಾಲ್ಕನೇ ಕ್ವಾರ್ಟರ್ ಫೈನಲ್- ಪಂಜಾಬ್ vs ಮಧ್ಯಪ್ರದೇಶ (KSCA ಕ್ರಿಕೆಟ್ ಮೈದಾನ-3), ಆಲೂರು)

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ