AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಟೂರ್ನಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Karnataka Squad: ಈ ಬಾರಿಯ ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ್ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 11 ರಂದು ನಡೆಯಲಿರುವ ಈ ಪಂದ್ಯಕ್ಕೆ ಇಂದೋರ್​ನ ಹೋಲ್ಕರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಕರ್ನಾಟಕ ಮತ್ತು ಕೇರಳ ತಂಡಗಳು ಮುಖಾಮುಖಿಯಾಗಲಿದೆ.

ರಣಜಿ ಟೂರ್ನಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Karnataka Squad
TV9 Web
| Edited By: |

Updated on: Oct 03, 2024 | 2:14 PM

Share

ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದು, ಉಪನಾಯಕರಾಗಿ ಮನೀಶ್ ಪಾಂಡೆ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಬಾರಿ ಕರ್ನಾಟಕ ತಂಡದ ಉಪನಾಯರಾಗಿ ನಿಕಿನ್ ಜೋಸ್ ಆಯ್ಕೆಯಾಗಿದ್ದರು. ಆದರೀಗ ಅನುಭವಿ ಆಟಗಾರ ಮನೀಶ್ ಪಾಂಡೆಗೆ ವೈಸ್ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಹಾಗೆಯೇ 2023-24ರಲ್ಲಿ ಐದು ಪಂದ್ಯಗಳಿಂದ 25 ವಿಕೆಟ್‌ಗಳನ್ನು ಕಬಳಿಸಿದ್ದ ಸ್ಪೀಡ್‌ಸ್ಟರ್ ವಿದ್ವತ್ ಕಾವೇರಪ್ಪ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದ ವೇಳೆ ಗಾಯಗೊಂಡಿರುವ ಕಾರಣ ಕೊಡಗಿನ ವೇಗಿ ರಣಜಿ ಟೂರ್ನಿಯ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಇನ್ನು ಕಳೆದ ಸೀಸನ್​ನಲ್ಲಿ 39 ವಿಕೆಟ್ ಕಬಳಿಸಿದ್ದ ವೈಶಾಕ್ ವಿಜಯಕುಮಾರ್ ಹಾಗೂ 28 ವಿಕೆಟ್ ಪಡೆದಿದ್ದ ವಿ ಕೌಶಿಕ್ ಈ ಬಾರಿ ಕೂಡ ತಂಡದಲ್ಲಿದ್ದು, ಇವರೊಂದಿಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಪ್ರಸಿದ್ಧ್ ಕೃಷ್ಣ ಕೂಡ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಕರ್ನಾಟಕ ತಂಡದ ಬೌಲಿಂಗ್ ವಿಭಾಗವು ಮತ್ತಷ್ಟು ಬಲಿಷ್ಠವಾದಂತಾಗಿದೆ.

ಹಾಗೆಯೇ ಸಿಕೆ ನಾಯುಡು (23 ವರ್ಷದೊಳಗಿನವರ) ಟ್ರೋಫಿ ವಿಜೇತ ತಂಡದ ನಾಯಕ ಆರ್.ಸ್ಮರನ್ ಹಾಗೂ ಮೊಹ್ಸಿನ್ ಖಾನ್ ಈ ಬಾರಿ ರಣಜಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಾಗ್ಯೂ ರಾಹುಲ್ ದ್ರಾವಿಡ್ ಸುಪುತ್ರ ಸಮಿತ್​ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: 11 ಎಸೆತ​ಗಳಲ್ಲಿ 63 ರನ್​: ಸಿಡಿಲಬ್ಬರದ ಶತಕ ಸಿಡಿಸಿದ ಮಾರ್ಟಿನ್ ಗಪ್ಟಿಲ್

ಇನ್ನು ವಿಕೆಟ್ ಕೀಪರ್​ಗಳಾಗಿ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿರುವುದು ಸುಜಯ್ ಸಾತೇರಿ ಹಾಗೂ ಲವ್​ನೀತ್ ಸಿಸೋಡಿಯಾ. ಕರ್ನಾಟಕದ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಶರತ್ ಶ್ರೀನಿವಾಸ್ ಈ ಬಾರಿ ತ್ರಿಪುರಾ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಸುಜಯ್​ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಕರ್ನಾಟಕ ತಂಡ ಈ ಕೆಳಗಿನಂತಿದೆ…

ಕರ್ನಾಟಕ ರಣಜಿ ತಂಡ (ಮೊದಲೆರಡು ಪಂದ್ಯಗಳಿಗೆ): ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಆರ್ ಸ್ಮರಣ್, ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್, ಸುಜಯ್ ಸಾತೇರಿ, ಹಾರ್ದಿಕ್ ರಾಜ್, ವೈಶಾಕ್ ವಿಜಯಕುಮಾರ್, ಪ್ರಸಿದ್ಧ್ ಕೃಷ್ಣ, ವಾಸುಕಿ ಕೌಶಿಕ್, ಲವ್​ನೀತ್ ಸಿಸೋಡಿಯಾ, ಮೊಹ್ಸಿನ್ ಖಾನ್, ವಿದ್ಯಾಧರ್ ಪಾಟೀಲ್, ಕಿಶನ್ ಬೆದರೆ, ಅಭಿಲಾಶ್ ಶೆಟ್ಟಿ.

ಕರ್ನಾಟಕ ತಂಡದ ಮೊದಲ ಎದುರಾಳಿ ಯಾರು?

​ಈ ಬಾರಿಯ ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ್ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 11 ರಂದು ನಡೆಯಲಿರುವ ಈ ಪಂದ್ಯಕ್ಕೆ ಇಂದೋರ್​ನ ಹೋಲ್ಕರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಕರ್ನಾಟಕ ಮತ್ತು ಕೇರಳ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ KSCA ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಎರಡು ಪಂದ್ಯಗಳಿಗೆ ಸದ್ಯ ಕರ್ನಾಟಕ ತಂಡವನ್ನು ಘೋಷಿಸಲಾಗಿದೆ.​

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್