AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಟೂರ್ನಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Karnataka Squad: ಈ ಬಾರಿಯ ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ್ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 11 ರಂದು ನಡೆಯಲಿರುವ ಈ ಪಂದ್ಯಕ್ಕೆ ಇಂದೋರ್​ನ ಹೋಲ್ಕರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಕರ್ನಾಟಕ ಮತ್ತು ಕೇರಳ ತಂಡಗಳು ಮುಖಾಮುಖಿಯಾಗಲಿದೆ.

ರಣಜಿ ಟೂರ್ನಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Karnataka Squad
TV9 Web
| Edited By: |

Updated on: Oct 03, 2024 | 2:14 PM

Share

ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದು, ಉಪನಾಯಕರಾಗಿ ಮನೀಶ್ ಪಾಂಡೆ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಬಾರಿ ಕರ್ನಾಟಕ ತಂಡದ ಉಪನಾಯರಾಗಿ ನಿಕಿನ್ ಜೋಸ್ ಆಯ್ಕೆಯಾಗಿದ್ದರು. ಆದರೀಗ ಅನುಭವಿ ಆಟಗಾರ ಮನೀಶ್ ಪಾಂಡೆಗೆ ವೈಸ್ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಹಾಗೆಯೇ 2023-24ರಲ್ಲಿ ಐದು ಪಂದ್ಯಗಳಿಂದ 25 ವಿಕೆಟ್‌ಗಳನ್ನು ಕಬಳಿಸಿದ್ದ ಸ್ಪೀಡ್‌ಸ್ಟರ್ ವಿದ್ವತ್ ಕಾವೇರಪ್ಪ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದ ವೇಳೆ ಗಾಯಗೊಂಡಿರುವ ಕಾರಣ ಕೊಡಗಿನ ವೇಗಿ ರಣಜಿ ಟೂರ್ನಿಯ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಇನ್ನು ಕಳೆದ ಸೀಸನ್​ನಲ್ಲಿ 39 ವಿಕೆಟ್ ಕಬಳಿಸಿದ್ದ ವೈಶಾಕ್ ವಿಜಯಕುಮಾರ್ ಹಾಗೂ 28 ವಿಕೆಟ್ ಪಡೆದಿದ್ದ ವಿ ಕೌಶಿಕ್ ಈ ಬಾರಿ ಕೂಡ ತಂಡದಲ್ಲಿದ್ದು, ಇವರೊಂದಿಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಪ್ರಸಿದ್ಧ್ ಕೃಷ್ಣ ಕೂಡ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಕರ್ನಾಟಕ ತಂಡದ ಬೌಲಿಂಗ್ ವಿಭಾಗವು ಮತ್ತಷ್ಟು ಬಲಿಷ್ಠವಾದಂತಾಗಿದೆ.

ಹಾಗೆಯೇ ಸಿಕೆ ನಾಯುಡು (23 ವರ್ಷದೊಳಗಿನವರ) ಟ್ರೋಫಿ ವಿಜೇತ ತಂಡದ ನಾಯಕ ಆರ್.ಸ್ಮರನ್ ಹಾಗೂ ಮೊಹ್ಸಿನ್ ಖಾನ್ ಈ ಬಾರಿ ರಣಜಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಾಗ್ಯೂ ರಾಹುಲ್ ದ್ರಾವಿಡ್ ಸುಪುತ್ರ ಸಮಿತ್​ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: 11 ಎಸೆತ​ಗಳಲ್ಲಿ 63 ರನ್​: ಸಿಡಿಲಬ್ಬರದ ಶತಕ ಸಿಡಿಸಿದ ಮಾರ್ಟಿನ್ ಗಪ್ಟಿಲ್

ಇನ್ನು ವಿಕೆಟ್ ಕೀಪರ್​ಗಳಾಗಿ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿರುವುದು ಸುಜಯ್ ಸಾತೇರಿ ಹಾಗೂ ಲವ್​ನೀತ್ ಸಿಸೋಡಿಯಾ. ಕರ್ನಾಟಕದ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಶರತ್ ಶ್ರೀನಿವಾಸ್ ಈ ಬಾರಿ ತ್ರಿಪುರಾ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಸುಜಯ್​ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಕರ್ನಾಟಕ ತಂಡ ಈ ಕೆಳಗಿನಂತಿದೆ…

ಕರ್ನಾಟಕ ರಣಜಿ ತಂಡ (ಮೊದಲೆರಡು ಪಂದ್ಯಗಳಿಗೆ): ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಆರ್ ಸ್ಮರಣ್, ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್, ಸುಜಯ್ ಸಾತೇರಿ, ಹಾರ್ದಿಕ್ ರಾಜ್, ವೈಶಾಕ್ ವಿಜಯಕುಮಾರ್, ಪ್ರಸಿದ್ಧ್ ಕೃಷ್ಣ, ವಾಸುಕಿ ಕೌಶಿಕ್, ಲವ್​ನೀತ್ ಸಿಸೋಡಿಯಾ, ಮೊಹ್ಸಿನ್ ಖಾನ್, ವಿದ್ಯಾಧರ್ ಪಾಟೀಲ್, ಕಿಶನ್ ಬೆದರೆ, ಅಭಿಲಾಶ್ ಶೆಟ್ಟಿ.

ಕರ್ನಾಟಕ ತಂಡದ ಮೊದಲ ಎದುರಾಳಿ ಯಾರು?

​ಈ ಬಾರಿಯ ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ್ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 11 ರಂದು ನಡೆಯಲಿರುವ ಈ ಪಂದ್ಯಕ್ಕೆ ಇಂದೋರ್​ನ ಹೋಲ್ಕರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಕರ್ನಾಟಕ ಮತ್ತು ಕೇರಳ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ KSCA ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಎರಡು ಪಂದ್ಯಗಳಿಗೆ ಸದ್ಯ ಕರ್ನಾಟಕ ತಂಡವನ್ನು ಘೋಷಿಸಲಾಗಿದೆ.​

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!